ಬೆಳಗಾವಿ | ಗೋಮಾಳ ಜಮೀನುಗಳ ರಕ್ಷಣೆಗೆ ತಹಸೀಲ್ದಾರರಿಗೆ ಮನವಿ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೋಮಾಳ/ಗಾಯರಾಗಣ ಜಮೀನುಗಳನ್ನು ದನ-ಕರುಗಳ ಮೇಯುವ ಉದ್ದೇಶಕ್ಕಾಗಿ ಮೀಸಲಿಟ್ಟಿದ್ದರೂ, ಇತ್ತೀಚಿನ ದಿನಗಳಲ್ಲಿ ಅವುಗಳನ್ನು ಇತರೆ ಉದ್ದೇಶಗಳಿಗೆ ಪರಿವರ್ತಿಸಲಾಗುತ್ತಿದೆ ಎಂದು ಆರೋಪಿಸಿ ಭಾರತೀಯ ಕಿಸಾನ್ ಸಂಘದ ರಾಮದುರ್ಗ ತಾಲೂಕು ಘಟಕ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಗೋಮಾಳ ಜಮೀನುಗಳನ್ನು ಗೋ ಸಂರಕ್ಷಣೆ, ಗೋಶಾಲೆ ಸ್ಥಾಪನೆ ಹಾಗೂ ಜಾನುವಾರುಗಳ ಮೇಯುವ ಕಾರ್ಯಗಳಿಗೆ ಮಾತ್ರ ಬಳಸಬೇಕು. ಯಾವುದೇ ಕಾರಣಕ್ಕೂ ಇವುಗಳನ್ನು ವಾಣಿಜ್ಯ ಅಥವಾ ಇತರೆ ಉದ್ದೇಶಗಳಿಗೆ ಪರಿವರ್ತಿಸಬಾರದು. ಒಂದು ವೇಳೆ ಈಗಾಗಲೇ ಪರಿವರ್ತನೆ ನಡೆದಿದ್ದರೆ, ಅಂತಹ ಜಮೀನುಗಳನ್ನು ವಾಪಸ್‌ ಪಡೆದು ಮೂಲ ಉದ್ದೇಶಕ್ಕೆ ಮೀಸಲಿಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಘ ಆಗ್ರಹಿಸಿದೆ.

ಕೃಷಿಯಲ್ಲಿ ಗೋವಿನ ಪಾತ್ರ ಮಹತ್ವದ್ದಾಗಿದೆ. ಜಾನುವಾರುಗಳ ಸಂಖ್ಯೆ ಕುಸಿಯುತ್ತಿರುವ ಸಂದರ್ಭದಲ್ಲಿ ಗೋಮಾಳಗಳ ಸಂರಕ್ಷಣೆ ಅತ್ಯಾವಶ್ಯಕವಾಗಿದೆ. ರಾಸಾಯನಿಕ ಕೃಷಿಯಿಂದ ಉತ್ಪಾದನೆಯಾಗುವ ಆಹಾರ ಪದಾರ್ಥಗಳು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿವೆ. ಈ ಹಿನ್ನೆಲೆ ಪೂರ್ವಜರು ಉತ್ತಮ ಉದ್ದೇಶದಿಂದ ಉಳಿಸಿಕೊಂಡ ಗೋಮಾಳ ಜಮೀನುಗಳನ್ನು ಕಾಪಾಡುವುದು ಅಗತ್ಯ ಎಂದು ಸಂಘ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001406498

ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆ, ಮುಂದಿನ ದಿನಗಳಲ್ಲಿ ಈ ಜಮೀನುಗಳಲ್ಲಿ ಮರ ನೆಡುವ ಕಾರ್ಯಕ್ರಮ ಕೈಗೊಳ್ಳುವುದಾಗಿ ಸಂಘ ತಿಳಿಸಿದೆ. ಸಾವಿರಾರು ಎಕರೆ ಗೋಮಾಳ ಜಮೀನುಗಳನ್ನು ಇತರೆ ಕಾರ್ಯಗಳಿಗೆ ಪರಿವರ್ತಿಸದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ದೇವರೆ ನನ್ನ ಅತ್ತೆ ಸಾಯಲಿ ದೇವಸ್ಥಾನ ಹುಂಡಿಯಲ್ಲಿ ವಿಚಿತ್ರ ಹರಕೆಯ ಚೀಟಿ

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಸುರೇಶ್ ನಂದೆಪ್ಪನವರ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಕೋಣನ್ನವರ, ತಾಲೂಕು ಕಾರ್ಯದರ್ಶಿ ಪವನ ಅಂಗಡಿ, ಎಸ್.ಎಸ್. ಹಿರೇಮಠ, ಶಿವನಗೌಡ ಕುಲಕರ್ಣಿ, ಮಹಿಳಾ ಪ್ರತಿನಿಧಿ ಸುಮಿತ್ರಾ ಹಣಮನೇರಿ, ಕಾಳಮ್ಮ ಬಡಿಗೇರ, ನಿಂಗಪ್ಪ ಗುದಗಿ, ಯಲ್ಲಪ್ಪ ಜಾಧವ, ಸಿದ್ದು ಹಂಪಿಹೊಳಿ, ಅಪ್ಪು ಪಾಟೀಲ, ತಿರಕಪ್ಪ ಬಾಡಗಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...