ಬೆಳಗಾವಿ | ಬರಗೂರು ಎಂದರೆ ಸೌಹಾರ್ದತೆಯ ಪ್ರತಿರೂಪ: ಶಿವಾಜಿ ಕಾಗಣೀಕರ್

Date:

ದೇಶವು ಅಸಮಾನತೆ ಮತ್ತು ಕೋಮು ದ್ವೇಷದತ್ತ ವಾಲುತ್ತಿರುವ ಈ ಸಂದರ್ಭದಲ್ಲಿ ಸೌಹಾರ್ದ ಭಾರತ ಎಂಬ ಗ್ರಂಥದ ಜನಾರ್ಪಣೆ ಕಾಡುತ್ತಿರುವ ರೋಗಕ್ಕೆ ದೊರೆತ ಔಷಧದಂತಿದೆ ಎಂದು ಹಿರಿಯ ಪರಿಸರವಾದಿ ಶಿವಾಜಿ ಕಾಗಣೀಕರ್ ಹೇಳಿದರು.

ಬೆಳಗಾವಿ ನಗರದ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಜಿಲ್ಲಾ ಬಂಡಾಯ ಸಾಹಿತ್ಯ ಸಂಘಟನೆ ಹಾಗೂ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಿದ್ದ ಬರಗೂರು ರಾಮಚಂದ್ರಪ್ಪ ಅವರ ಸೌಹಾರ್ದ ಭಾರತ ಕೃತಿ ಜನಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಬರಗೂರು ಎಂದರೆ ಸೌಹಾರ್ದತೆಯ ಪ್ರತಿರೂಪ. ಸಹಮಾನವರಲ್ಲಿ ಸೌಹಾರ್ದತೆ ಇಲ್ಲದಿದ್ದರೆ ದೇಶಕ್ಕೆ ಭವಿಷ್ಯವಿಲ್ಲ. ಇಂತಹ ಸಂದರ್ಭದಲ್ಲಿ ಈ ಕೃತಿ ಸಮಾನತೆ ಹಾಗೂ ಸೌಹಾರ್ದತೆಯನ್ನು ಬೆಳೆಸುವ ಕೈದೀವಿಗೆಯಾಗಿ ಕೆಲಸ ಮಾಡಬಲ್ಲದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪುಸ್ತಕ ಓದುವುದರಲ್ಲೇ ನಿಲ್ಲದೆ ಅದರ ಆಶಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಸಮಾನತೆ ಮತ್ತು ಸೌಹಾರ್ದತೆ ನೆಲೆಗೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟರು.

ಬಂಡಾಯ ಸಾಹಿತಿ ಯಲ್ಲಪ್ಪ ಹಿಮ್ಮಡಿ ಆಶಯ ನುಡಿಗಳನ್ನಾಡಿ, ಸಾಹಿತಿಗಳು ಸಾಮಾಜಿಕ ಹೊಣೆಗಾರಿಕೆಯಿಂದ ಬರೆಯಬೇಕು. ಜನರಿಂದ ದೂರವಿರುವ ಬರಹಗಾರ ಎಂದಿಗೂ ಬೆಳೆಯಲಾರ. ಜನರ ನೋವಿಗೆ ಮಿಡಿಯುವ ಬರಹಗಾರರು ಮಾತ್ರ ಸಮಾಜಕ್ಕೆ ದಿಕ್ಕು ತೋರಬಲ್ಲರು. ಅದಕ್ಕಾಗಿಯೇ ಬರಗೂರು ಅವರು ಪುಸ್ತಕ ಬಿಡುಗಡೆಯನ್ನು ಜನಾರ್ಪಣೆ ಎಂದು ಕರೆಯುತ್ತಾರೆ ಎಂದು ಹೇಳಿದರು.

ಕವಯಿತ್ರಿ ಕವಿತಾ ಕುಸುಗಲ್ ಕೃತಿ ಪರಿಚಯ ಮಾಡಿದರು. ಹಿರಿಯ ಸಾಹಿತಿ ಸರಜೂ ಕಾಟ್ಕರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಲಿಂಗತ್ವ ಅಲ್ಪಸಂಖ್ಯಾತರ ಮುಖ್ಯಸ್ಥೆ ಚಿನ್ನು ತಳವಾರ್, ಜಮಾತೆ ಇಸ್ಲಾಮಿ ಹಿಂದ್‌ನ ಮೊಹಮ್ಮದ್ ಯಾಸಿನ್ ಮುಕಾನ್ದಾರ್, ದಲಿತ ಸಂಘಟನೆಯ ಸಿದ್ದಪ್ಪ ಕಾಂಬಳೆ, ಕನ್ನಡ ಚಳುವಳಿಯ ಅಶೋಕ ಚಂದರಗಿ, ರೈತ ಚಳುವಳಿಯ ಸಿದಗೌಡ ಮೋದಗಿ, ಸಿಐಟಿಯು ಸಂಘಟನೆಯ ಮೀನಾಕ್ಷಿ ದಫಡೆ, ಲೇಖಕಿಯರ ಸಂಘದ ಕೆ.ಆರ್. ಸಿದ್ದಗಂಗಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಆರಂಭದಲ್ಲಿ ಸರಳಾ ಸಾತ್ಪುತೆ ಸೌಹಾರ್ದ ಗೀತೆಗಳನ್ನು ಹಾಡಿದರು. ರವಿ ಕೋಟಾರಗಸ್ತಿ ಸ್ವಾಗತಿಸಿದರು. ನದೀಮ್ ಸನದಿ ವಂದಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...