ಬೆಳಗಾವಿ : ನವೆಂಬರ್ 26 ಸಂವಿಧಾನ ದಿನದಂದು ‘ಭೂಮಿ ಸತ್ಯಾಗ್ರಹ’: ಬೆಂಗಳೂರು ಚಲೋ

Date:

ಸಾಮಾಜಿಕ ನ್ಯಾಯವಾಗಿ ಭೂಮಿ ಮತ್ತು ವಸತಿ ಹಕ್ಕು ನೀಡುವಂತೆ ಸರ್ಕಾರದ ಗಮನ ಸೆಳೆಯಲು ನವೆಂಬರ್ 26 ಸಂವಿಧಾನ ದಿನದಂದು ‘ಭೂಮಿ ಸತ್ಯಾಗ್ರಹ – ಬೆಂಗಳೂರು ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಕೃಷಿಕ ಸಮಾಜ ತಿಳಿಸಿದೆ.

ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ಗುರುವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಭಾರತೀಯ ಕೃಷಿಕ ಸಮಾಜ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ನಾಯಕರರು ಭಾಗವಹಿಸಿ ಕಾರ್ಯಕ್ರಮದ ವಿವರಗಳನ್ನು ಹಂಚಿಕೊಂಡರು.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ಕೃಷಿಕ ಸಮಾಜದ ಸಿದಗೌಡ ಮೋದಗಿ, ಕೇಂದ್ರದ ಬಿಜೆಪಿ ಸರ್ಕಾರದ ರೈತ ವಿರೋಧಿ ನೀತಿಗಳು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ನೀಡಿದ ಭರವಸೆಗಳ ಅನಾವರಣಕ್ಕೆ ವಿರೋಧ ವ್ಯಕ್ತಪಡಿಸಿದರು.
ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ನಡೆದ ದೆಹಲಿ ಗಡಿ ರೈತ ಚಳುವಳಿ ಐದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಂವಿಧಾನ ದಿನವನ್ನು ಸತ್ಯಾಗ್ರಹದ ಮೂಲಕ ಸ್ಮರಿಸುವ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಮುಖ ಬೇಡಿಕೆಗಳು

ಸಂಘಟನೆ ಸರ್ಕಾರಕ್ಕೆ ಸಲ್ಲಿಸಲು ತಯಾರಿಸಿದ್ದ ಬೇಡಿಕೆಗಳನ್ನು ಈ ಕೆಳಗಿನಂತೆ ವಿವರಿಸಿದೆ:

ಬಗರ್ ಹುಕುಂ ಸಾಗುವಳಿದಾರರಿಗೆ ಒನ್-ಟೈಮ್ ಸೆಟಲ್‌ಮೆಂಟ್ ಮೂಲಕ ಭೂಹಕ್ಕು ಮಾನ್ಯತೆ

ಫಲವತ್ತಾದ ಭೂಮಿಯ ಭೂಸಾಧೀನ ರದ್ದು

ಭೂ ತಿದ್ದುಪಡಿ ಕಾಯ್ದೆ 2022 ರದ್ದು

ಅರಣ್ಯವಾಸಿಗಳಿಗೆ ಅರಣ್ಯ ಹಕ್ಕು ಕಾಯ್ದೆಯಡಿ ನ್ಯಾಯಬದ್ಧ ಹಕ್ಕು

ಅರ್ಜಿ ಸಲ್ಲಿಸಿದ ಭೂಹೀನರಿಗೆ ಮಾನದಂಡದಂತೆ ಭೂಮಿ ಮಂಜೂರಾತಿ

ಸಾಗುವಳಿ ಚೀಟಿ ಹೊಂದಿರುವವರಿಗೆ ಪಹಣಿ ನೀಡಿಕೆ

ಸ್ವಾಮಿನಾಥನ್ ವರದಿ ಜಾರಿ

ಜೋಳಕ್ಕೆ ಘೋಷಿಸಿರುವ MSP ₹2400 ದರದಲ್ಲಿ ರಾಜ್ಯ ಸರ್ಕಾರ ತಕ್ಷಣ ಖರೀದಿ ಪ್ರಾರಂಭ

ಕಬ್ಬಿಗೆ H&T 9.5 ಇಳುವರಿ ಆಧಾರದ ಮೇಲೆ ವೈಜ್ಞಾನಿಕ FRP ದರ ನಿಗದಿ

ಎಲ್ಲಾ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ಮತ್ತು ಅವಧಿ ಪರಿಷ್ಕರಣೆ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ರೈತ–ಕಾರ್ಮಿಕ–ದಲಿತ–ಮಹಿಳೆ–ವಿದ್ಯಾರ್ಥಿ–ಯುವಜನ ಸೇರಿದಂತೆ ವಿವಿಧ ಸಮುದಾಯಗಳ ಒಕ್ಕೂಟವಾದ ಸಂಯುಕ್ತ ಹೋರಾಟ – ಕರ್ನಾಟಕ ನೇತೃತ್ವದಲ್ಲಿ ನವೆಂಬರ್ 26 ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.

ಭಾರತೀಯ ಕೃಷಿಕ ಸಮಾಜ, ರೈತ ಸಂಘಟನೆಗಳ ಸದಸ್ಯರು, ಬಗರ್ ಹುಕುಂ ಸಾಗುವಳಿದಾರರು, ಅರಣ್ಯ ಭೂಮಿ ಅರ್ಜಿದಾರರು ಹಾಗೂ ರೈತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ ನೀಡಲಾಗಿದೆ.

ಪತ್ರಿಕಾ ಗೋಷ್ಠಿಯಲ್ಲಿ ಕುಮಾರ ಸಮತಳ, ಕೆ. ಮರಿಯಪ್ಪ, ಗೀತಾ, ಬಸವರಾಜ ಮತ್ತಿತರರು ಉಪಸ್ಥಿತರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...