ಬೆಳಗಾವಿ | ಮಲತಂದೆ ಮತ್ತು ಸ್ನೇಹಿತರಿಂದ ಬಾಲಕನ ಅಮಾನುಷ್ಯ ಹತ್ಯೆ

Date:

ಮಲತಂದೆ ಮತ್ತು ಆತನ ಸ್ನೇಹಿತರು ಸೇರಿ ಮೂರು ವರ್ಷದ ಬಾಲಕನ್ನು ಅಮಾನುಷ್ಯವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಾರೂಗೊಪ್ಪ ಗ್ರಾಮದ ಬಳಿ ನಡೆದಿದೆ.

ಬಿಹಾರ ಮೂಲದ ಕಾರ್ತಿಕ್ ಮುಖೇಶ್ ಮಾಂಜಿ(3) ಕೊಲೆಯಾದ ಬಾಲಕ. ಆತನ ಮಲತಂದೆ ಮಹೇಶ್ವರ ಮಾಂಜಿ ಕೊಲೆ ಮಾಡಿದ ಆರೋಪಿಯಾಗಿದ್ದು ಘಟನಾ ಸ್ಥಳಕ್ಕೆ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ, ಮುರಗೋಡ ಸಿಪಿಐ ಸೇರಿ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಮೊದಲ ಗಂಡನನ್ನು ಬಿಟ್ಟಿದ್ದ ರಂಗೀಲಾ ಆರೋಪಿ ಮಹೇಶ್ ಮಾಂಜಿ ಜೊತೆಗೆ ಎರಡನೇ ಮದುವೆ ಆಗಿದ್ದಳು. ಬಿಹಾರ ಮೂಲದ ಕಾರ್ಮಿಕರು ಹಾರೂಗೊಪ್ಪ ಬಳಿ ಇರುವ ಜಿನ್ನಿಂಗ್ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇವರು ಮಿಲ್ ಸಮೀಪದ ಶೆಡ್‌ನಲ್ಲೇ ಇದ್ದರು. ಹೀಗೆ ಇರುವಾಗ ನಿನ್ನೆ ರಂಗೀಲಾ ಜೊತೆಗೆ ಮಹೇಶ್ವ‌ರ್ ಜಗಳ ತೆಗೆದಿದ್ದಾನೆ. ಆ ಬಾಲಕನನ್ನು ನೀನು ಯಾಕೆ ಕರೆದುಕೊಂಡು ಬಂದೆ ಎಂದು ಹಲ್ಲೆ ಮಾಡಲು ಯತ್ನಿಸಿದ್ದಾನೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅದೇ ಸಮಯದಲ್ಲಿ ಆತನ ಮೂವರು ಸ್ನೇಹಿತರು ಬಂದಿದ್ದಾರೆ. ಆ ಬಾಲಕನನ್ನು ಕರೆದುಕೊಂಡು ಬರಬೇಡ ಅಂತಾ ಹೇಳಿದರೂ ಕರೆದುಕೊಂಡು ಬಂದಿದ್ದಾಳೆ. ಹಾಗಾಗಿ, ಈಕೆಗೆ ಪಾಠ ಕಲಿಸಬೇಕು ಅಂತಾ ಮಹೇಶ್ ಆತನ ಸ್ನೇಹಿತರಿಗೆ ಹೇಳಿದ್ದಾನೆ. ಬಳಿಕ ಎಲ್ಲರೂ ಕೂಡಿಕೊಂಡು ಆಕೆಯ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಆಗ ಭಯದಿಂದ ರಂಗೀಲಾ ಅಲ್ಲಿಂದ ಓಡಿ ಹೋಗಿದ್ದಾಳೆ. ಆದರೆ, ಆ ಬಾಲಕ ಅಲ್ಲಿಯೇ ಇದ್ದ. ಆ ವೇಳೆ ಬಾಲಕನ ತಲೆಗೆ ಕಟ್ಟಿಗೆಯಿಂದ ಅವರೆಲ್ಲಾ ಹೊಡೆದಿದ್ದಾರೆ” ಎಂದು ವಿವರಿಸಿದರು.

ಈ ಕುರಿತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಅವರು ಮಾತನಾಡಿ, “ಇದು ಹೃದಯ ವಿದ್ರಾವಕ ಘಟನೆ. ಮೂರು ವರ್ಷದ ಬಾಲಕನನ್ನು ಮಲ ತಂದೆ ಮತ್ತು ಆತನ ಸಂಗಡಿಗರು ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಬಾಲಕನ ತಾಯಿ ರಂಗೀಲಾ ದೂರು ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡು, ಕೊಲೆಯಾದ ಬಾಲಕನ ಮಲತಂದೆ ಮಹೇಶ್ವರ ಮಾಂಜಿ ಮತ್ತು ಆತನ ಸ್ನೇಹಿತರಾದ ರಾಕೇಶ ಮಾಂಜಿ, ಶಿವನಾಥ ಮಾಂಜಿ, ಮಹೇಶ ಮಾಂಜಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...