ಬಾಲಕನ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ಗುರುವಾರ ನಡೆದಿದೆ.
ಮೃತ ಬಾಲಕನನ್ನು ಪ್ರವೀಣ ಸಂತೋಷ ಮಂಟೂರ (9) ಎಂದು ಗುರುತಿಸಲಾಗಿದೆ. ಆಟವಾಡುತ್ತಿದ್ದ ವೇಳೆ ಅಜಾಗರೂಕತೆಯಿಂದ ಕಾಲು ಜಾರಿ ಬಾವಿಗೆ ಬಿದ್ದ ಬಾಲಕನನ್ನು ರಕ್ಷಿಸಲು ಸ್ಥಳೀಯರು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ.
ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಗ್ರಾಮಸ್ಥರು ಸುಮಾರು ಆರು ಗಂಟೆಗಳ ಕಾಲ ಶ್ರಮಪಟ್ಟು ಬಾವಿಯಿಂದ ಮೃತದೇಹವನ್ನು ಹೊರತೆಗೆದರು.
ಸ್ಥಳಕ್ಕೆ ಐಗಳಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದುರ್ಘಟನೆಯಿಂದ ಕೋಹಳ್ಳಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.





