ಬೆಳಗಾವಿ | ಗಾಂಧಿನಗರದಲ್ಲಿ ಮಹಿಳೆ ಮೇಲೆ ಕ್ರೂರ ಹಲ್ಲೆ : ಮಾನವೀಯತೆಯೇ ತಲೆ ತಗ್ಗಿಸುವ ಘಟನೆ

Date:

ವದಂತಿಯ ಆಧಾರದಲ್ಲಿ ಮಹಿಳೆಯೊಬ್ಬರ ಮೇಲೆ ಅಮಾನವೀಯ ಹಲ್ಲೆ ನಡೆದ ಘಟನೆ ಬೆಳಗಾವಿ ನಗರದ ಹೊಸ ಗಾಂಧಿನಗರದಲ್ಲಿ ಶನಿವಾರ ಸಂಭವಿಸಿದೆ. ಮಕ್ಕಳ ಕಳ್ಳಿಯಾಗಿದ್ದಾಳೆ ಎಂಬ ಅನುಮಾನಕ್ಕೆ ಜನರು ಆಕೆಯನ್ನು ಹಿಗ್ಗಾಮುಗ್ಗಾ ಥಳಿಸಿ, ಬಟ್ಟೆ ಹರಿದು ಅವಮಾನಪಡಿಸಿದ ಘಟನೆ ಕೆಲಕಾಲ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣಕ್ಕೆ ಕಾರಣವಾಯಿತು.

ಸುಮಾರು 35 ವರ್ಷ ವಯಸ್ಸಿನ ಮಹಿಳೆ ರಂಜಾನ್‌ ಮಾಸದ ಅಂಗವಾಗಿ ಮುಸ್ಲಿಮರ ವಸತಿ ಪ್ರದೇಶದಲ್ಲಿ ಭಿಕ್ಷೆ ಬೇಡುತ್ತಿದ್ದರು. ಬಿಸಿಲಿನ ತಾಪದಿಂದ ಹತ್ತಿರದ ಕಟ್ಟಡವೊಂದರ ಮುಂದೆ ಕುಳಿತಿದ್ದ ವೇಳೆ, ಕೆಲ ಮಹಿಳೆಯರು ಅನುಮಾನ ವ್ಯಕ್ತಪಡಿಸಿ ಪುರುಷರಿಗೆ ಮಾಹಿತಿ ನೀಡಿದ್ದಾರೆ. “ಮಕ್ಕಳನ್ನು ಕಳ್ಳತನ ಮಾಡಲು ಬಂದಿದ್ದಾಳೆ” ಎಂದು ಕೂಗಿದ ಪರಿಣಾಮ, ಕೆಲವೇ ನಿಮಿಷಗಳಲ್ಲಿ ಅಪಾರ ಸಂಖ್ಯೆಯಲ್ಲಿ ಜನರು ಸ್ಥಳಕ್ಕೆ ಜಮಾಯಿಸಿದರು.

ಮಹಿಳೆಯನ್ನು ಎಳೆದಾಡಿ ಪ್ರಶ್ನಿಸಿದ ಗುಂಪು, ಆಕೆ ಎಷ್ಟು ಬೇಡಿಕೊಂಡರೂ ಬಿಡದೆ ಹೊಟ್ಟೆ, ಎದೆ, ಭುಜ, ತಲೆ ಹಾಗೂ ಮುಖಕ್ಕೆ ಗುದ್ದಿ, ಕಾಲಿನಿಂದ ಒದ್ದು ಕೆಳಗೆ ಕೆಡವಿದ್ದಾರೆ. ಕೆಲವರು ರವಿಕೆ ಹರಿದು ಓಡಿಸಿದರೆ, ಕೂದಲು ಹಿಡಿದು ಎಳೆದಾಡಿದ ಘಟನೆ ನಡೆದಿದೆ. ಪುರುಷರ ಜೊತೆಗೆ ಕೆಲ ಮಹಿಳೆಯರೂ ಹಲ್ಲೆಯಲ್ಲಿ ಭಾಗಿಯಾಗಿದ್ದು, ಸುತ್ತಮುತ್ತಲಿನ ಕೆಲವರು ಈ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿರುವುದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವದಂತಿಯ ಪರಿಣಾಮ

“ಬೆಳಗಾವಿಯಲ್ಲಿ ಮಕ್ಕಳನ್ನು ಕಳ್ಳತನ ಮಾಡುವವರ ತಂಡ ಓಡಾಡುತ್ತಿದೆ” ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿರುವುದರಿಂದ ಜನರಲ್ಲಿ ಭೀತಿ ಉಂಟಾಗಿದೆ. ಇದೇ ವದಂತಿಯ ಪರಿಣಾಮವಾಗಿ ಹಲ್ಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರ ಪೊಲೀಸ್ ಕಮಿಷನ‌ರ್ ಭೂಷಣ ಬೊರಸೆ ಮಾತನಾಡಿ, “ಮಹಿಳೆಯನ್ನು ವಿಚಾರಣೆ ನಡೆಸಿದ್ದು, ಆಕೆ ಮಕ್ಕಳ ಕಳ್ಳಿ ಅಲ್ಲ ಎಂಬುದು ಸ್ಪಷ್ಟವಾಗಿದೆ. ಹಲ್ಲೆ ನಡೆಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ವಿಡಿಯೊಗಳನ್ನು ಪರಿಶೀಲಿಸಿ ಆರೋಪಿಗಳನ್ನು ಬಂಧಿಸಲಾಗುವುದು. ಜನರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ಪರೀಕ್ಷೆಗೆ ಸಿದ್ಧವಾಗಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ

ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಅಪರಿಶೀಲಿತ ಮಾಹಿತಿಯ ಪರಿಣಾಮ ಎಷ್ಟು ಗಂಭೀರವಾಗಿರಬಹುದು ಎಂಬುದನ್ನು ಮತ್ತೆ ಒತ್ತಿ ಹೇಳುತ್ತಿದೆ. ಅನುಮಾನಾಸ್ಪದ ಘಟನೆಗಳ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವುದು ಅಗತ್ಯವಾಗಿದೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...