ಬೆಳಗಾವಿ : ತಾಲ್ಲೂಕಿನ ಜನತೆ ತೋರಿಸುವ ನಿಷ್ಠಾವಂತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು: ರಮೇಶ ಕತ್ತಿ

Date:

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಗಳ ಆಡಳಿತ ಬೇರೆಯವರ ಕೈಗೆ ಹೋಗಿರುವುದು ನಿಜವಾದ ಜನದ್ರೋಹವಾಗಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ್ ಕತ್ತಿ ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ವಿಶ್ವರಾಜ ಭವನದಲ್ಲಿ ಶುಕ್ರವಾರ ನಡೆದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡುತ್ತಾ, “ಈ ದ್ರೋಹವನ್ನು ಮರೆಯಬಾರದು. ಮುಂಬರುವ ಸಹಕಾರಿ ಸಂಸ್ಥೆಗಳ ಚುನಾವಣೆಗಳಲ್ಲಿ ಈ ವ್ಯಕ್ತಿಗಳನ್ನು ಸೋಲಿಸಿ, ತಾಲ್ಲೂಕಿನ ಜನತೆ ತೋರಿಸುವ ನಿಷ್ಠಾವಂತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು,” ಎಂದು ಕರೆ ನೀಡಿದರು.

“ಸಂಕೇಶ್ವರದ ಹಿರಾ ಸಕ್ಕರೆ ಕಾರ್ಖಾನೆಯ ನಷ್ಟವನ್ನು ಪೂರೈಸಲು ಲೀಸ್ ನೀಡುವುದು ಒಂದು ಮಾರ್ಗವಾಗಿತ್ತು. ಆದರೆ ಕೊನೆಯ ಹಂತದಲ್ಲಿ ಕೆಲವು ಸದಸ್ಯರು ನಮ್ಮ ಹಸ್ತ ಹಿಡಿದು ಬೇರೆಯವರ ಜತೆ ಕೈಜೋಡಿಸಿದರು. ಇದು ವಿಶ್ವಾಸಘಾತಕ್ಕೆ ಸರಿಸಮಾನ,” ಎಂದು ಅವರು ಕಿಡಿಕಾರಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ನಿಖಿಲ್ ಕತ್ತಿ ಮಾತನಾಡಿ, “ನಾನು ಶಾಸಕರಾಗಿ ಕಳೆದ ಎರಡು ವರ್ಷಗಳಲ್ಲಿ ₹990 ಕೋಟಿ ಅನುದಾನವನ್ನು ಕ್ಷೇತ್ರಕ್ಕೆ ತರಲು ಯಶಸ್ವಿಯಾಗಿದ್ದೇನೆ. ಇದು ದಿ. ಉಮೇಶ್ ಕತ್ತಿ ಅವರ ಕನಸುಗಳನ್ನೇ ಸಾಕಾರಗೊಳಿಸಲು ನಮ್ಮ ಬದ್ಧತೆಯನ್ನೂ ಸೂಚಿಸುತ್ತದೆ,” ಎಂದರು.

“ಇಲ್ಲಿ ಕೆಲವರು ನಮ್ಮ ಕುಟುಂಬದೊಳಗೆ ಬಿರುಕು ತಂದು ‘ಮನೆ ಒಡೆಯುವ’ ಯತ್ನ ಮಾಡಿದ್ದಾರೆ. ಆದರೆ ಕತ್ತಿ ಕುಟುಂಬ ಎಂದೂ ಒಗ್ಗಟ್ಟಿನಿಂದ ಜನಪರ ಕೆಲಸಕ್ಕೆ ಬದ್ಧವಾಗಿದೆ,” ಎಂದು ಸ್ಪಷ್ಟನೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದವರು:
ಬೇಮುಲ್ ನಿರ್ದೇಶಕ ರಾಯಪ್ಪ ಡೂಗ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ದುರದುಂಡಿ ಪಾಟೀಲ, ನಿರ್ದೇಶಕ ಶೀತಲ ಬ್ಯಾಳಿ, ಗುರು ಕುಲಕರ್ಣಿ, ಪುರಸಭೆ ಸದಸ್ಯ ಮಹಾವೀರ ನಿಲಜಗಿ, ಹಿರಿಯ ಸಹಕಾರಿ ಬಸವರಾಜ ಮಟಗಾರ, ಪ್ರಥ್ವಿ ಕತ್ತಿ, ಪವನ್ ಕತ್ತಿ, ಪಿ.ಎಸ್. ಮುತಾಲಿಕ, ಗಜಾನನ ಕಳ್ಳಿ, ಈರಣ್ಣ ಹೂಗಾರ, ಸುರೇಶ ಬೆಲ್ಲದ, ಶಿವನಗೌಡ ಪಾಟೀಲ, ಸುನೀಲ ನೇರ್ಲಿ, ಎ.ಕೆ. ಪಾಟೀಲ, ಮೀರಾಸಾಬ್ ಮುಲ್ತಾನಿ, ಅಶೋಕ ಪಾಟೀಲ ಸೇರಿದಂತೆ ಅನೇಕ ಪ್ರಮುಖರು ಹಾಜರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...