ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ನಡೆದ ಶ್ರೀ ಲಕ್ಷ್ಮೀ ದೇವಿ ಜಾತ್ರೆಯ ಸಂದರ್ಭದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಗಾಳಿಗೆ ಗುಂಡು ಹಾರಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಗೋಕಾಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಲಕ್ಷಾಂತರ ಭಕ್ತರು ಸೇರಿದ್ದ ಜಾತ್ರೆಯಲ್ಲಿ ಸಂತೋಷ್ ಜಾರಕಿಹೊಳಿ ಶಸ್ತ್ರಾಸ್ತ್ರದಿಂದ ಗಾಳಿಗೆ ಗುಂಡು ಹಾರಿಸಿದ್ದು, ಸಂಬಂಧಿಸಿದ ವೀಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಸಾರ್ವಜನಿಕ ಸ್ಥಳದಲ್ಲಿ ಈ ರೀತಿಯ ಶಸ್ತ್ರಾಸ್ತ್ರ ಬಳಕೆ ಕಾನೂನುಬಾಹಿರವಾಗಿದೆ




