ಬೆಳಗಾವಿ : ಅಕ್ಟೋಬರ್ 19ರಂದು ನಡೆಯಲಿರುವ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ (ಡಿಸಿಸಿ) ಚುನಾವಣೆಯಲ್ಲಿ ಹುಕ್ಕೇರಿ ತಾಲ್ಲೂಕಿನ ಪಿಕೆಪಿಎಸ್ ಮತಕ್ಷೇತ್ರದ ಮತದಾನ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅಧಿಸೂಚನೆ ಹೊರಡಿಸಿದ್ದಾರೆ.
ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದ ಅನ್ವಯ, ಹುಕ್ಕೇರಿ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ರೀಟ್ ಅರ್ಜಿ ದಾಖಲಾಗಿರುವುದರಿಂದ ಮುಂದಿನ ಆದೇಶ ಬರುವವರೆಗೆ ಈ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.
ಅಕ್ಟೋಬರ್ 19ರಂದು ಏಳು ಸ್ಥಾನಗಳಿಗೆ ಮತದಾನ ನಡೆಯಬೇಕಾಗಿದ್ದು, ಅದರ ಸಕಲ ಸಿದ್ಧತೆಗಳೂ ಪೂರ್ಣಗೊಂಡಿದ್ದವು. ಆದರೆ ಹುಕ್ಕೇರಿ ಕ್ಷೇತ್ರದ ಚುನಾವಣಾ ಪ್ರಕ್ರಿಯೆ ತಾತ್ಕಾಲಿಕವಾಗಿ ನಿಲ್ಲುವ ಹಿನ್ನೆಲೆ, ಕಳೆದ ಒಂದು ತಿಂಗಳಿನಿಂದ ಜಾರಕಿಹೋಳಿ ಮತ್ತು ಕತ್ತಿ ಗುಂಪುಗಳ ನಡುವೆ ಉತ್ಕಟವಾಗಿದ್ದ ಪೈಪೋಟಿಗೆ ಈಗ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ.





