ಅಥಣಿಯಲ್ಲಿ ಮಾತನಾಡುವುದಕ್ಕೆ ತನ್ನ ಮೇಲೆ ನಿರ್ಬಂಧ ಹೇರಲಾಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಹಿತೈಷಿಗಳ ಸಲಹೆ ಮೇರೆಗೆ ಮುಂದಿನ ದಿನಗಳಲ್ಲಿ ಅಥಣಿ ರಾಜಕೀಯ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಥಣಿಯಲ್ಲಿ ಮಾತನಾಡಿದರೆ ತನ್ನನ್ನು ‘ಹೊರಗಿನವರು’ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ಈ ರೀತಿಯ ಬೆಳವಣಿಗೆಗಳಿಂದ ಬೇಸತ್ತು ಮೌನ ವಹಿಸುವ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದರು.
ಈ ವೇಳೆ ಹಿಪ್ಪರಗಿ ಬ್ಯಾರೇಜ್ ಗೇಟ್ ಮುರಿತ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಜಾರಕಿಹೊಳಿ, ಸ್ಥಳೀಯ ಶಾಸಕನ ಬೇಜವಾಬ್ದಾರಿಯೇ ಈ ಘಟನೆಗೆ ಕಾರಣ ಎಂದು ಆರೋಪಿಸಿದರು. ಈ ಘಟನೆಯಿಂದ ರೈತರಿಗೆ ಅಪಾರ ನಷ್ಟ ಉಂಟಾಗಿದ್ದು, ಹಿರಿಯ ಶಾಸಕನಿಂದ ಬಂದ ಹಾರಿಕೆ ಮಾತುಗಳು ರೈತರ ಮನಸ್ಸಿಗೆ ನೋವು ತಂದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕುರಿತು ಪ್ರತಿಕ್ರಿಯಿಸಿದ ಜಾರಕಿಹೊಳಿ, ಸ್ಥಳೀಯ ಶಾಸಕನ ಬೇಜವಾಬ್ದಾರಿಯೇ ಈ ಘಟನೆಗೆ ಕಾರಣ ಎಂದು ಆರೋಪಿಸಿದರು. ಈ ಘಟನೆಯಿಂದ ರೈತರಿಗೆ ಅಪಾರ ನಷ್ಟ ಉಂಟಾಗಿದ್ದು, ಹಿರಿಯ ಶಾಸಕನಿಂದ ಬಂದ ಹಾರಿಕೆ ಮಾತುಗಳು ರೈತರ ಮನಸ್ಸಿಗೆ ನೋವು ತಂದಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾಗವಾಡ ಶಾಸಕ ರಾಜು ಕಾಗೆ ನೀಡಿರುವ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ಸಮಸ್ಯೆಗೆ ರಾಜಕೀಯ ಬಣ್ಣ ಹಚ್ಚುವ ಬದಲು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದರು. ಆದಷ್ಟು ಬೇಗ ಮಹಾರಾಷ್ಟ್ರ ಸರ್ಕಾರದಿಂದ ನೀರು ಬಿಡುಗಡೆ ಆಗುವಂತೆ ಕ್ರಮ ಕೈಗೊಳ್ಳಬೇಕು. ಈ ಸಂಬಂಧ ರಾಜ್ಯ ಸರ್ಕಾರ ತಕ್ಷಣ ಮಾತುಕತೆಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.




