ಬೆಳಗಾವಿ | ರಾಮದುರ್ಗ ತಾಲೂಕನ್ನು ಬರಪೀಡಿತವೆಂದು ಘೋಷಣೆಗೆ ಒತ್ತಾಯ

Date:

ರಾಜ್ಯದಲ್ಲಿ ಸರಿಯಾಗಿ ಮಳೆ ಆಗದ ಕಾರಣದಿಂದಾಗಿ ರಾಜ್ಯದ ಅನೇಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿಯೂ ಸಹ ಮಳೆ ಬಾರದೆ ರೈತರು ಸಂಕಷ್ಟಕ್ಕಿಡಾಗಿದ್ಧಾರೆ. ರಾಮದುರ್ಗ ತಾಲೂಕನ್ನು ಬರಪಿಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ರಾಮದುರ್ಗ ಕರ್ಷೇತ್ರದ ಶಾಸಕ ಅಶೋಕ ಪಟ್ಟಣ ಅವರನ್ನು ಭೇಟಿ ಮಾಡಿದ ಸಂಘಟನೆಯ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ತಾಲೂಕಿನ ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬರ ಪೀಡಿತ ತಾಲೂಕನ್ನಾಗಿ ಘೋಷಣೆ ಮಾಡದಿದ್ದರೆ ರೈತರಿಗೆ ಮಾಡಿದ ಅನ್ಯಾಯ ಮಾಡಿದಂತಾಗುತ್ತದೆ” ಎಂದು ಹೇಳಿದ್ದಾರೆ.

“ಮಳೆ ಬಾರದೆ ಮಲಪ್ರಭಾ ನದಿಯು ಬತ್ತಿಹೊಗಿದ್ಧು ಕುಡಿಯುವ ನೀರಿಗೂ ಸಹ ಪರಿತಪಿಸಬೇಕಾದ ಸ್ಥಿತಿ ಎದುರಾಗಿದೆ. ಆದ್ದರಿಂದ, ಶಾಸಕರು ರಾಮದುರ್ಗ ತಾಲೂಕನ್ನು ಬರಪಿಡಿತ ತಾಲೂಕು ಎಂದು ಘೋಷಣೆ ಮಾಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಕಾಂಗ್ರೆಸ್‌ ಸಿದ್ಧಾಂತ ಒಪ್ಪಿಕೊಂಡು ಯಾರು ಬರುತ್ತಾರೋ ಬರಲಿ: ಮುಕ್ತ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಅಶೋಕ ಪಟ್ಟಣ, “ಸರ್ಕಾರದ ಮಟ್ಟದಲ್ಲಿ ಅಧಿಕಾರಿಗಳನ್ನು ರೈತ ಮುಖಂಡರೊಂದಿಗೆ ಭೇಟಿಯಾಗಿ ಚರ್ಚಿಸುತ್ತೇವೆ. ರಾಮದುರ್ಗ ತಾಲೂಕನ್ನು ಬರಪಿಡಿತ ತಾಲೂಕನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸುತ್ತೇವೆ” ಎಂದು ಹೇಳಿದ್ದಾರೆ.

ಹಕ್ಕೊತ್ತಾಯ ಪತ್ರ ಸಲ್ಲಿಸುವ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕ ಅಧ್ಯಕ್ಷರು ಮಲ್ಲಿಕಾರ್ಜುನ ರಾಮದುರ್ಗ, ಎಲ್ಲಪ್ಪ ದೊಡ್ಡಮನಿ, ಸುರೇಶ್ ಗುಂಜೇರಿ, ಈರಣ್ಣ ರಾಜನಾಳ, ರಮೇಶ್ ಗುಡಿಯನ್ನವರ್, ಭೀಮಶಿ ಕಡ್ಡನವರ್, ದ್ಯಾಮಣ್ಣ ಪೋತನ್ನವರ್, ಬಸವ ಯಾದವಾಡ, ವೆಂಕಣ್ಣ ಕೆಂಚ್ ರೆಡ್ಡಿ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...