ಬೆಳಗಾವಿ | ನವಜಾತ ಶಿಶುವಿನ ಹೊಟ್ಟೆಯಲ್ಲಿದ್ದ ಭ್ರೂಣವನ್ನು ಹೊರತೆಗೆದ ವೈದ್ಯರು

Date:

ನವಜಾತ ಶಿಶುವಿನ ಹೊಟ್ಟೆಯಲ್ಲೇ ಬೆಳೆದಿದ್ದ ಮತ್ತೊಂದು ಭ್ರೂಣವನ್ನು ಬೆಳಗಾವಿ ನಗರದ ಕೆಎಲ್‌ಇ ಆಸ್ಪತ್ರೆಯ ವೈದ್ಯರು ಶಸ್ತ್ರ ಚಿಕೆತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿ ಆಗಿದ್ದಾರೆ.

ಮಹಾರಾಷ್ಟ್ರದ ಚಂದಗಡದ ಏಳು ತಿಂಗಳ ಗರ್ಭಿಣಿಯನ್ನು ಡಾ. ಸಂಜಯ ಶಾನಬಾಗ ಅವರು ತಪಾಸಣೆಗೊಳಪಡಿಸಿದಾಗ ಭ್ರೂಣದಲ್ಲಿ ಮೊದಲು ಚೀಲದಂತೆ ಕಂಡಿತು. ನಂತರ ಪರಿಕ್ಷಿಸದಾಗ ಭ್ರೂಣದೊಳಗೆ ಮತ್ತೊಂದು ಭ್ರೂಣವು ಬೆಳೆಯುತ್ತಿರುವದು ಕಂಡು ಬಂದಿದ್ದು. 37 ವಾರಗಳ ನಂತರ ಮಹಿಳೆಯು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಂತರದ ಡಾ.ಶಾನಬಾಗ ಅವರು ಮಗುವನ್ನು ಸ್ಥಳೀಯ ವೈದ್ಯರು ಬೆಳಗಾವಿಯ ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರಕ್ಕೆ ಕಳಹಿಸಿಕೊಟ್ಟದ್ದಾರೆ. ಕೆಎಲ್ಇ ವೈದ್ಯರು ಎರಡು ದಿನದ ನವಜಾತ ಶಿಶುವನ್ನು ತಪಾಸಣೆಗೊಳಪಡಿಸಿ ಶಸ್ತ್ರಚಿಕಿತ್ಸೆಯ ಮೂಲಕ ಹೊಟ್ಟೆಯೊಳಗಿರುವ ಭ್ರೂಣವನ್ನು ಹೊರತೆಗೆದಿದ್ದಾರೆ.

ಅವಳಿ ಆಮ್ಮಿಯೋಟಿಕ್ ಚೀಲವು ಪ್ರಮುಖ ನಾಳಗಳಾದ ಐವಿಸಿ, ಬಲ ಬದಿಯ ಮೂತ್ರಪಿಂಡ ನಾಳ ಹಾಗೂ ಮಹಾಪಧಮನಿಯ ಮಧ್ಯದಲ್ಲಿ ಬೆಳೆಯುತ್ತಿತ್ತು. ಕ್ಲಿಷ್ಟಕರವಾಗಿದ್ದ ಈ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಮಗುವನ್ನು ಪ್ರಾಣಾಪಾಯದಿಂದ ಪಾರು ಮಾಡುವದು ಅತ್ಯಂತ ಸವಾಲಿನ ಕೆಲಸವಾಗಿತ್ತು. ಗರ್ಭಧಾರಣೆಯ ಪ್ರಥಮದಲ್ಲಿ ಕೆಲವು ವಾರ ಇನ್ನೊಂದು ಭ್ರೂಣವು ಸುತ್ತುವರೆದು ಅದು ಮರೆಯಾಗುತ್ತದೆ. ನಂತರ ಈ ರೀತಿಯಾಗಬಹುದು. ಆದರೆ ಅವಳಿಯ ರಕ್ತ ಪೂರೈಕೆಯನ್ನು ಅವಲಂಬಿಸಿ ಭ್ರೂಣದ ಗಾತ್ರ ಹೆಚ್ಚುತ್ತಲಿರುತ್ತದೆ. ಸುಮಾರು ಆರು ಲಕ್ಷ ಗರ್ಭಿಣಿಯರ ಪೈಕಿ ಒಬ್ಬರಲ್ಲಿ ಭ್ರೂಣದೊಳಗೆ ಮತ್ತೊಂದು ಭ್ರೂಣವು ಬೆಳೆಯುವದು ಕಂಡು ಬರುತ್ತದೆ. ಆದರೆ ಇದಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಚಿಕ್ಕಮಕ್ಕಳ ಶಸ್ತ್ರಚಿಕಿತ್ಸೆಯ ವೈದ್ಯರಾದ ಡಾ. ಸ್ವಪ್ಪಿಲ ಪಟ್ಟಣಶೆಟ್ಟಿ ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ. ಸ್ವಪ್ಟಿಲ್ ಪಟ್ಟಣಶೆಟ್ಟಿ ಅವರಿಗೆ ಡಾ. ಸಕ್ಷಮ, ಅರಿವಳಿಕೆ ತಜ್ಞವೈದ್ಯರಾದ ಡಾ. ರಾಜೇಶ್ ಮಾನೆ ಮತ್ತು ಡಾ. ಪ್ರಿಯಾಂಕಾ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದ್ದಾರೆ ಹಾಗೂ ತೀವ್ರ ನಿಗಾ ಘಟಕದಲ್ಲಿ ಡಾ. ಮನೀಷಾ ಭಂಡನಕರ ಹಾಗೂ ಡಾ. ರಾಮ್ ಭಟ್ ಅವರು ಆರೈಕೆ ಮಾಡಿದ್ದು. ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...