ಬೆಳಗಾವಿ : ನವೆಂಬರ್ 7ರಿಂದ ಏಣಗಿ ಬಾಳಪ್ಪ ಸ್ಮರಣೋತ್ಸವ ನಾಟಕೋತ್ಸವ

Date:

ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ (ರಿ) ಸವದತ್ತಿಯು ರಂಗಭೂಮಿಗೆ ಅಮೂಲ್ಯ ಕೊಡುಗೆ ನೀಡಿದ ದಿವಂಗತ ನಾಟ್ಯಭೂಷಣ ಏಣಗಿ ಬಾಳಪ್ಪ ಅವರ ಸ್ಮರಣಾರ್ಥವಾಗಿ ಮೂರು ದಿನಗಳ ಸ್ಮರಣೋತ್ಸವ ನಾಟಕೋತ್ಸವವನ್ನು ಬೆಳಗಾವಿಯ ಕನ್ನಡ ಭವನದಲ್ಲಿ ಆಯೋಜಿಸಿದೆ.

ಈ ನಾಟಕೋತ್ಸವವು ನವೆಂಬರ್ 7ರಿಂದ 9ರವರೆಗೆ ಪ್ರತಿದಿನ ಸಂಜೆ 6.30ಕ್ಕೆ ನೆಹರು ನಗರದ ರಾಮದೇವ್ ಹೋಟೆಲ್ ಹಿಂಭಾಗದಲ್ಲಿರುವ ಕನ್ನಡ ಭವನದಲ್ಲಿ ನಡೆಯಲಿದ್ದು, ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ, ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಳಗಾವಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗಸೃಷ್ಟಿ ಕಲಾತಂಡ ಹಾಗೂ ಕನ್ನಡ ಭವನದ ಸಹಯೋಗದಲ್ಲಿ ನಡೆಯಲಿದೆ.

ರಂಗಭೂಮಿಯ ದಿವಂಗತ ದಿಗ್ಗಜರಾದ ಸಾಹಿತಿ ಎಸ್‌.ಎಲ್‌. ಭೈರಪ್ಪ, ರಂಗಕರ್ಮಿಗಳು ಯಶವಂತ ಸರದೇಶಪಾಂಡೆ, ರಾಜು ತಾಳಿಕೋಟಿ, ಡಿ. ಹಣುಮಕ್ಕ ಹಾಗೂ ಜಾಗತಿಕ ಲಿಂಗಾಯತ ಮಹಾಸಭೆಯ ಅನ್ನಪೂರ್ಣ ಅಶೋಕ ಮಳಗಲಿ ಇವರಿಗೆ ಈ ಉತ್ಸವವನ್ನು ಅರ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವೆಂಬರ್ 7ರಂದು ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಸಾಹಿತಿಗಳು ನೀಲಗಂಗಾ ಚರಂತಿಮಠ, ಡಾ. ಗುರುದೇವಿ ಹುಲೆಪ್ಪನವರಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಹೆಚ್. ಚನ್ನೂರ, ಸುಭಾಸ್ ಏಣಗಿ, ಸರ್ಜೂ ಕಾಟ್ಕರ್, ವಿದ್ಯಾವತಿ ಭಜಂತ್ರಿ, ಮಂಗಲಾ ಮೆಟಗುಡ್ಡ, ಶೈಲಜಾ ಭಿಂಗೆ, ಅರವಿಂದ ಕುಲಕರ್ಣಿ, ಸವಿತಾ ಭೈರಪ್ಪ, ರತ್ನಪ್ರಭಾ ಬೆಲ್ಲದ ಹಾಗೂ ವಿದ್ಯಾ ಗೌಡರ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಝಕೀರ ನದಾಫ ಅವರ ‘ನೆಲಮುಗಿಲು’ ಮತ್ತು ‘ಹಾಲು ಬಟ್ಟಲದೊಳಗಿನ ಪಾಲು’ ನಾಟಕ ಕೃತಿಗಳ ಲೋಕಾರ್ಪಣೆ ನಡೆಯಲಿದೆ. ನಂತರ ರಂಗಸಂಪದ ಬೆಳಗಾವಿ ಅವರಿಂದ ಸಂಧ್ಯಾ ಎಸ್. ರಚಿಸಿದ, ಸವಿತಾ ಭೈರಪ್ಪ ನಿರ್ದೇಶನದ ‘ನಕ್ಷತ್ರ ಯಾತ್ರಿಕರು’ ನಾಟಕ ಪ್ರದರ್ಶನಗೊಳ್ಳಲಿದೆ.

ನವೆಂಬರ್ 8ರಂದು ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆಯವರಿಂದ ಝಕೀರ ನದಾಫ ಅವರ ರಚನೆ ಮತ್ತು ನಿರ್ದೇಶನದ ‘ಹಾಲು ಬಟ್ಟಲದೊಳಗಿನ ಪಾಲು’ ನಾಟಕ ಪ್ರದರ್ಶನಗೊಳ್ಳಲಿದೆ.
ನವೆಂಬರ್ 9ರಂದು ಸಮಾರೋಪ ಸಮಾರಂಭದಲ್ಲಿ ಎಲ್.ಎಸ್. ಶಾಸ್ತ್ರಿ, ಯ.ರು. ಪಾಟೀಲ, ಬಸವರಾಜ ರೊಟ್ಟಿ, ಮಧುಕರ ಗುಂಡೇನಟ್ಟಿ, ರವಿ ಕೊಟಾರಗಸ್ತಿ, ಆನಂದ ಪುರಾಣಿಕ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.
ಅದಾದ ನಂತರ ಅದೇ ಸಂಘಟನೆಯಿಂದ ಝಕೀರ ನದಾಫ ನಿರ್ದೇಶನದ ‘ನೆಲಮುಗಿಲು’ ನಾಟಕ ಪ್ರದರ್ಶನಗೊಳ್ಳಲಿದೆ.

ಸಾಂಸ್ಕೃತಿಕ ವೈಭವದಿಂದ ಕೂಡಿದ ಈ ನಾಟಕೋತ್ಸವಕ್ಕೆ ರಂಗಭೂಮಿ ಕಲಾಭಿಮಾನಿಗಳನ್ನು ಸಂಘಟನೆಯು ಆಹ್ವಾನಿಸಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...