ಬೆಳಗಾವಿ | ಸಾಗುವಳಿ ಭೂಮಿಯ ಹಕ್ಕುಪತ್ರ ನೀಡುವಂತೆ ರೈತರ ಹೋರಾಟ

Date:

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಒಂಬತ್ತು ಗ್ರಾಮಗಳು ಸೇರಿದಂತೆ ಕುಲವಳ್ಳಿ ʼಸಾಗುವಳಿ ಭೂಮಿಯ ಹಕ್ಕುಪತ್ರʼ ನೀಡುವಂತೆ ರೈತರು ಕೈಗೆತ್ತಿಕೊಂಡಿರುವ ಆಹೋರಾತ್ರಿ ಹೋರಾಟವನ್ನು ಕೈ ಬಿಡುವಂತೆ ಶಾಸಕ ಬಾಬಾಸಾಹೇಬ ಪಾಟೀಲ ಮನವಿ ಮಾಡಿದ್ದಾರೆ.

ಕಿತ್ತೂರು ತಾಲೂಕಿನ ತಹಶೀಲ್ದಾರ್ ಕಚೇರಿಯ ಎದುರು ಹಮ್ಮಿಕೊಂಡಿರುವ ಅನಿರ್ದಿಷ್ಟ ಅಹೋರಾತ್ರಿ ಹೋರಾಟವನ್ನು ಉದ್ದೇಶಿಸಿ ಶಾಸಕ ಬಾಬಾಸಾಹೇಬ ಪಾಟಿಲ್ ಮಾತನಾಡಿ, “ಕುಲವಳ್ಳಿ ಸಾಗುವಳಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಗಮನಕ್ಕೆ ತರಲಾಗಿದೆ. ಸಚಿವರು ಜಿಲ್ಲಾಧಿಕಾರಿ ಜತೆಗೆ ಚರ್ಚೆ ಮಾಡಿದ್ದಾರೆ. ಇದಕ್ಕೆ ಸಮಯ ಬೇಕಾಗುತ್ತದೆ. ಸಚಿವರೂ ಕೂಡಾ ರೈತರ ಸಾಗುವಳಿ ಭೂಮಿಯನ್ನು ಮತ್ತೊಮ್ಮೆ ಸರ್ವೇ ಮಾಡಿಸಿ ಪಿಟಿ ಶೀಟ್ ನಕ್ಷೆ ನೀಡುವಂತೆ ತಿಳಿಸಿದ್ದಾರೆ” ಎಂದರು.

“ರೈತರಿಗೆ ಯಾವುದೇ ತೊಂದರೆ ನೀಡಿಲು ಬಿಡುವುದಿಲ್ಲ. ನಿಮ್ಮ ಸಾಗುವಳಿ ಭೂಮಿಯನ್ನು ಮೊದಲಿನಂತೆ ಉಳುಮೆ ಮಾಡಿಕೊಂಡು ಜೀವನ ಸಾಗಿಸಿ. ನಿಮ್ಮಗೆ ಎಲ್ಲ ರೀತಿ ಸಹಕಾರ ನೀಡುತ್ತೇನೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಹೋರಾಟಗಾರ್ತಿ ನಾಗರತ್ನ ಪಾಟೀಲ ಮಾತನಾಡಿ, “ರೈತರು ಹಲವು ದಿನಗಳಿಂದ ಅನಿರ್ದಿಷ್ಟ ಹೋರಾಟ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಯವರು ರೈತರ ಸಮಸ್ಯೆ ಕೇಳುವ ಪ್ರಯತ್ನ ಮಾಡುತ್ತಿಲ್ಲ. ಆಗಿನ ಸಚಿವ ಕಾಗೋಡು ತಿಮ್ಮಪ್ಪನವರು ರೈತರಿಗೆ ಪಿಟಿ ಶೀಟ್ ನಕ್ಷೆ ನೀಡಿದ್ದಾರೆ. ಅದರ ಆಧಾರದ ಮೇಲೆ ಪಹಣಿ ಪತ್ರದಲ್ಲಿ ರೈತರ ಹೆಸರು ದಾಖಲಿಸಬೇಕು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಯವರು ಬಂದು ರೈತರಿಗೆ ಅಧಿಕೃತವಾಗಿ ಭರವಸೆ ಕೊಡಬೇಕು. ಅಲ್ಲಿಯವರೆಗೆ ಅನಿರ್ದಿಷ್ಟಾವಧಿ ಹೋರಾಟವನ್ನು ಕೈ ಬಿಡುವುದಿಲ್ಲ” ಎಂದು ಪಟ್ಟು ಹಿಡಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಹಣದಾಸೆಗೆ ಇ-ಸ್ವತ್ತು ಆಸ್ತಿ ವರ್ಗಾವಣೆ ಆರೋಪ; ಗ್ರಾಮಸ್ಥರ ಪ್ರತಿಭಟನೆ

ಕಿತ್ತೂರು ಕರ್ನಾಟಕ ರೈತ ಜಾಗೃತಿ ಸಂಘದ ಅಧ್ಯಕ್ಷ ಎಂ ಎಫ್ ಜಕಾತಿ, ಪ್ರಧಾನ ಕಾರ್ಯದರ್ಶಿ ಅಪ್ಪೇಶ ದಳವಾಯಿ, ಕಿಶೋ‌ರ್ ಮಿಠಾರಿ ಮಾತನಾಡಿದರು. ವಿಜಯಕುಮಾರ ಶಿಂಧೆ, ದಶರಥ ಮಡಿವಾಳರ, ಸೋಮಯ್ಯ ನಿಂಗಾಪೂರಮಠ, ತವನಪ್ಪ ಬೇಟಗೇರಿ, ಮಾರುತಿ ಕಲ್ಲೂರಿ, ತೋಪಿಕ್‌ ಸುತಗಟ್ಟಿ, ಸುರೇಶ ಮಡಿವಾಳರ, ಕಸ್ತೂರಿ ಮಾಳನ್ನವರ, ಕಮಲವ್ವ ಕಡಕೋಳ, ಸಾವಕ್ಕ ತೊಟಗಿ, ಮಂಜುಳಾ ಕಡ್ಡೆನ್ನವರ ಸೇರಿದಂತೆ ಅನೇಕ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...