ಬೆಳಗಾವಿ | ಪಾಲಿಕೆಯಲ್ಲಿ ಕಡತ ನಾಪತ್ತೆ; ಮೇಯರ್ ವಿರುದ್ಧ ದೂರು ದಾಖಲು

Date:

ಬೆಳಗಾವಿಯಲ್ಲಿ 2023-25ನೇ ಆರ್ಥಿಕ ವರ್ಷದಲ್ಲಿ ತೆರಿಗೆ ಹೆಚ್ಚಳ ಮಾಡುವುದಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಲಿಕೆಯ ಮೇಯರ್ ತಪ್ಪಾಗಿ ಸಹಿ ಹಾಕಿದ್ದ ಪತ್ರ ಕಾಣೆಯಾಗಿದೆ. ಈ ಸಂಬಂಧ ಪಾಲಿಕೆಯ ಪರಿಷತ್ ಕಾರ್ಯದರ್ಶಿ ಮತ್ತು ಮೇಯರ್ ವಿರುದ್ಧ ಪಾಲಿಕೆ ಆಯುಕ್ತ ಅಶೋಕ್​ ದುಡಗುಂಟಿ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪಾಲಿಕೆಯ ಕೌನ್ಸಿಲ್ ಸಭೆಯು 2023-24ನೇ ಆರ್ಥಿಕ ವರ್ಷದಲ್ಲಿ ತೆರಿಗೆ ಹೆಚ್ಚಳ ಮಾಡಲು ನಿರ್ಧಿರಿಸಿತ್ತು. ಅದಕ್ಕೆ ಮೇಯರ್ ಅನುಮೋದನೆ ಪಡೆಯಲು ಪತ್ರ ಸಿದ್ದಪಡಿಸಿತ್ತು. ಆದರೆ, ಪತ್ರದಲ್ಲಿ 2023-24 ಬದಲಾಗಿ 24-25 ಎಂದು ನಮೂದಿಸಲಾಗಿತ್ತು. ಅದನ್ನು ಸರಿಯಾಗಿ ಪರಿಶೀಲಿಸದ ಮೇಯರ್ ಸಹಿ ಹಾಕಿದ್ದರು. ಆದರೆ, ಈಗ ಆ ಪತ್ರವೇ ಕಾಣೆಯಾಗಿವೆ.

ಪತ್ರ ಕಾಣೆಯಾಗಿರುವ ಬಗ್ಗೆ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಗದ್ದಲ ನಡೆದಿತ್ತು. ತನಿಖೆ ನಡೆಸಲು ಪಾಲಿಕೆ ನಿರ್ಣಯಿಸಿತ್ತು. ಬಳಿಕ, ಪತ್ರ ಕಾಣೆಯಾಗಿರುವ ಸಂಬಂಧ ತನಿಖೆ ನಡೆಸುವಂತೆ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಪಾಲಿಕೆ ಆಯುಕ್ತರು ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಾಲಿಕೆ ಮೇಯರ್ ಶೋಭಾ ಸೋಮನಾಚೆ ವಿರುದ್ಧ ದೂರು ದಾಖಲಿಸಿದ್ದೇವೆ. ಬಿಜೆಪಿಗರು ಕಡತವನ್ನು ಆಯಕ್ತರೇ ಸರ್ಕಾರಕ್ಕೆ ಸಲ್ಲಿಸುತ್ತಾರೆ. ಅವರನ್ನೇ ಏನೋ ಕೈವಾಡವಿದೆ ಎನ್ನುತ್ತಿದ್ದಾರೆ. ಮೇಯರ್ ಸಹಿ ಮಾಡಿದ ನಂತರವೇ ಆಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸುವುದು. ಹೀಗಾಗಿ, ಕಡತವನ್ನು ಯಾರೋ ಬಚ್ಚಿಟ್ಟಿದ್ದಾರೆ. ಕಡತ ಸಿಕ್ಕ ಬಳಿಕ ಸತ್ಯಾಂಶ ಹೊರಬರುತ್ತದೆ” ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

“ಪಾಲಿಕೆಯಲ್ಲಿ ಮೇಯರ್ ಅವರೇ ಸುಪ್ರೀಂ ಆಗಿರುತ್ತಾರೆ. ಅವರು ಪತ್ರದಲ್ಲಿದ್ದ ತಪ್ಪನ್ನು ಸರಿ ಮಾಡುವುದು ಬಿಟ್ಟು, ಕಡತವನ್ನು ಕಾಣೆಯಾಗಿಸಿ ತಪ್ಪೆಸದ್ದಾರೆ. ಪೊಲೀಸರು ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡೋಣ” ಎಂದು ಜಾರಕಿಹೊಳಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...