ಬೆಳಗಾವಿ : ಸಭೆಯಲ್ಲಿ ಕಣ್ಣೀರು ಹಾಕಿದ ಮಾಜಿ ಸಂಸದ ರಮೇಶ ಕತ್ತಿ

Date:

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಮಾಜಿ ಸಚಿವ ಉಮೇಶ್ ಕತ್ತಿ ಕುರಿತು ಬರೆಯಲ್ಪಟ್ಟ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಭಾನುವಾರ ಭವ್ಯವಾಗಿ ಜರುಗಿತು. ರಾಜ್ಯದ ಹಲವಾರು ಗಣ್ಯ ನಾಯಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಾವಿರಾರು ಜನರು ವೇದಿಕೆಯ ಮುಂಭಾಗದಲ್ಲಿ ಕುಳಿತು ಕಾರ್ಯಕ್ರಮವನ್ನು ಸಾಕ್ಷಿಯಾಗಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಂಸದ ರಮೇಶ್ ಕತ್ತಿ ತಮ್ಮ ಸಹೋದರನನ್ನು ನೆನೆದು ಕಣ್ಣೀರು ಹಾಕಿದರು. “ನನ್ನ ಪ್ರೀತಿಯ ಸಹೋದರ ಉಮೇಶ್ ಕತ್ತಿ ನಿಧನದಿಂದ ನಾನು ಕುಗ್ಗಿ ಹೋಗಿದ್ದೇನೆ. 60 ವರ್ಷಗಳ ಕಾಲ ಜೊತೆಯಲ್ಲಿದ್ದ ಎತ್ತು ಒಮ್ಮೆಗೆ ಬಿಟ್ಟುಹೋದಂತಾಗಿದೆ. ಅದೇ ಕಾರಣಕ್ಕೆ ನಾನು ಇತ್ತೀಚೆಗೆ ಮೌನವಾಗಿದ್ದೆ. ಆದರೆ ಈಗ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ನೋಡಿ ಸುಮ್ಮನೆ ಕುಳಿತಿರಲು ಸಾಧ್ಯವಾಗುತ್ತಿಲ್ಲ” ಎಂದು ಭಾವುಕರಾದರು.

ಅವರು ಮುಂದುವರಿದು, “ನಮ್ಮ ಕ್ಷೇತ್ರಕ್ಕೆ ಬರುವವರನ್ನು, ಅವರ ಮನೆಗಳಿಗೆ ಹಿಂದಿರುಗಿಸುವೆ. ಹುಕ್ಕೇರಿಯಿಂದಲೇ ಕ್ರಾಂತಿ ಪ್ರಾರಂಭವಾಗಲಿದೆ. ಇಡೀ ಉತ್ತರ ಕರ್ನಾಟಕ ಭಾಗದಲ್ಲಿ ಸಿಡಿದು ಎದ್ದು ನಿಲ್ಲುತ್ತೇನೆ” ಎಂದು ಆವೇಶಗೊಂಡು ಶಪಥ ಮಾಡಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...