ಬೆಳಗಾವಿ ಜಿಲ್ಲೆಯ ಅಥಣಿ ನಗರದ ಶಿವಾಜಿ ವೃತ್ತದಲ್ಲಿ ಭಾನುವಾರ ಶಿವಪ್ರತಿಷ್ಠಾನ ಹಿಂದೂಸ್ತಾನ ಘಟಕ ಹಾಗೂ ತಾಲ್ಲೂಕು ಏಕಛತ್ರ ಮರಾಠಾ ಸಮಾಜ ಸಂಘದ ಸಂಯುಕ್ತಾಶ್ರಯದಲ್ಲಿ ಭೋಜರಾಜ ಕ್ರೀಡಾಂಗಣದಲ್ಲಿ ಧ್ವಜಸ್ತಂಭಕ್ಕೆ ಪೂಜೆ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸರ್ಕಾರ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ 7 ವರ್ಷ ಜೈಲು ಶಿಕ್ಷೆಯ ಮಸೂದೆ ತರಲು ಮುಂದಾಗಿದೆ ಎಂದು ಟೀಕಿಸಿದರು. “ಆ ಮಸೂದೆ ಜಾರಿಯಾದರೆ ಮೊದಲು ನಾನೇ ಸಿಗಬಹುದು. ಆದರೆ ಜೈಲಿನಿಂದ ಹೇಗೆ ಹೊರಬರಬೇಕು ಎಂಬುದು ನನಗೆ ಗೊತ್ತು” ಎಂದು ಹೇಳಿದರು.
ಇದೇ ವೇಳೆ 2028ರಲ್ಲಿ ‘ಜೆಸಿಬಿ’ ಹೆಸರಿನ ಹೊಸ ಪಕ್ಷ ಸ್ಥಾಪಿಸಿ 143 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ತಾವೇ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುವುದಾಗಿ ಘೋಷಿಸಿದರು. “ಭ್ರಷ್ಟರನ್ನು ಅಧಿಕಾರದಿಂದ ದೂರ ಇಡುವ ಕಾಲ ಬಂದಿದೆ” ಎಂದು ಯತ್ನಾಳ ಹೇಳಿದರು.
ಕಾರ್ಯಕ್ರಮದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ವಿವಿಧ ಸಮಾಜದ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.





