ಬೆಳಗಾವಿ : ರಾಷ್ಟ್ರೀಯ ಪ್ರಕೃತಿ ವಿಕೋಪವೆಂದು ಘೋಷಿಸಬೇಕೆಂದು ಭಾರತೀಯ ಕೃಷಿಕ ಸಮಾಜ ಆಗ್ರಹ

Date:

ಭಾರೀ ಮಳೆಯಿಂದಾಗಿ ರಾಜ್ಯದ ವಿವಿಧೆಡೆ ರೈತರ ಬೆಳೆ ನಾಶವಾಗಿದ್ದು, ಪ್ರವಾಹದಿಂದ ಸಂತ್ರಸ್ತರ ಜೀವನ ಅಸ್ತವ್ಯಸ್ತಗೊಂಡಿರುವ ಹಿನ್ನೆಲೆಯಲ್ಲಿ, ಇದನ್ನು ರಾಷ್ಟ್ರೀಯ ಪ್ರಕೃತಿ ವಿಕೋಪವೆಂದು ಘೋಷಿಸಬೇಕೆಂದು ಭಾರತೀಯ ಕೃಷಿಕ ಸಮಾಜ ಸರ್ಕಾರವನ್ನು ಆಗ್ರಹಿಸಿದೆ.

ಬೆಳಗಾವಿ ನಗರದಲ್ಲಿ ರೈತರ ಪರವಾಗಿ ಮನವಿ ಸಲ್ಲಿಸಿದ ಸಂಘಟನೆಯ ಮುಖಂಡ ಸಿದಗೌಡ ಮೋದಗಿ ಅವರು ಮಾತನಾಡಿ, ಪ್ರಸಕ್ತ ಹಂಗಾಮಿನಲ್ಲಿ ಮುಂಗಾರು ಆರಂಭದಲ್ಲಿ ರೈತರಲ್ಲಿ ಸಂತಸ ಮೂಡಿಸಿದ ಮಳೆಯೇ ಬಳಿಕ ದುರಂತವಾಗಿ ಮಾರ್ಪಟ್ಟಿದ್ದು, ಅಪಾರ ಮಳೆಯಿಂದಾಗಿ ರೈತರ ಬೆಳೆ ಹಾನಿ, ಮನೆ–ಮಾಳಿಗೆಗಳ ಜಲಾವೃತ ಹಾಗೂ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ತಿಳಿಸಿದರು.

ಸಂಘಟನೆಯ ಪ್ರಮುಖ ಬೇಡಿಕೆಗಳು:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಾಲಿನಲ್ಲಿ ಪೂರೈಸಿದ ಕಳಪೆ ಸೋಯಾಬಿನ್ ಬೀಜಗಳ ಕಾರಣ ರೈತರಿಗೆ ಭಾರೀ ನಷ್ಟವಾಗಿದ್ದು, ಸಂಬಂಧಿಸಿದ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಿ ಕ್ರಮ ಜರುಗಿಸಬೇಕು.

ಸೋಯಾಬಿನ್ ಬೆಳೆಗಳಿಗೆ ಅಂಟಿದ ಕೀಟಭಾಧೆ ನಿಯಂತ್ರಣ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ.

ಮಲಪ್ರಭಾ, ಘಟಪ್ರಭಾ, ಮಾರ್ಕಂಡೇಯ, ಕೃಷ್ಣಾ, ಹಿರಣ್ಯಕೇಶಿ ನದಿಗಳ ಪ್ರವಾಹದಿಂದ ಬೆಳೆಗಳು ಹಾಗೂ ಮನೆಗಳು ಹಾನಿಗೊಂಡಿವೆ.

ಜಿಲ್ಲಾಧಿಕಾರಿಗಳು ಫಸಲ್ ಭಿಮಾ ಯೋಜನೆ ಕುಂದು–ಕೊರತೆ ನಿವಾರಣಾ ಸಭೆ ತಕ್ಷಣ ನಡೆಸಬೇಕು.

ರಸಗೊಬ್ಬರ, ಕ್ರಿಮಿನಾಶಕ, ಬೀಜ, ಪಂಪಸೆಟ್ ಸೇರಿದಂತೆ ಎಲ್ಲಾ ಕೃಷಿ ಪರಿಕರಗಳ ಗುಣಮಟ್ಟ ಪರೀಕ್ಷಾ ತಂಡ ರಚಿಸಬೇಕು.

ಸರ್ಕಾರವು ತಕ್ಷಣ NDRF ಮತ್ತು SDRF ಅಡಿಯಲ್ಲಿ ಪರಿಹಾರ ಒದಗಿಸಿ, ವಿಮೆ ಮೊತ್ತ ಬಿಡುಗಡೆ ಮಾಡಬೇಕು ಹಾಗೂ ರೈತರ ನೆರವಿಗೆ ಧಾವಿಸಬೇಕು ಎಂದು ಮನವಿ ಸಲ್ಲಿಸಲಾಯಿತು.

ಈ ಸುದ್ದಿ ಓದಿದ್ದಿರಾ ? ಗ್ರಾಮೀಣ ಆರ್ಥಿಕತೆಯ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು: ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸರ್ಕಾರ ಸ್ಪಂದಿಸುವುದೇ?

ಈ ಸಂದರ್ಭದಲ್ಲಿ ಭಾರತೀಯ ಕೃಷಿಕ ಸಮಾಜ (ಸಂ) ಕರ್ನಾಟಕ ರೈತ ಸಂಘಟನೆಯ ಜಿಲ್ಲಾ ಅಧ್ಯಕ್ಷರು, ಸದಸ್ಯರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...