ಬೆಳಗಾವಿ | ಮಾಹಿತಿ ಆಯೋಗದ ಪೀಠಕ್ಕೆ ಆಯುಕ್ತರ ನೇಮಕಕ್ಕೆ ಒತ್ತಾಯ

Date:

ರಾಜ್ಯದ ಬೆಳಗಾವಿ ಮಾಹಿತಿ ಆಯೋಗದ ಪೀಠಕ್ಕೆ ಆಯುಕ್ತರನ್ನು ತಕ್ಷಣ ನೇಮಕ ಮಾಡಿ ಎಂದು ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳಿಗೆ ನೈಜ ಹೋರಾಟಗಾರರ ವೇದಿಕೆ ಮನವಿ ಪತ್ರ ಸಲ್ಲಿಸಿದೆ.

ಕಳೆದ ವರ್ಷ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಬೆಳಗಾವಿ ಮಾಹಿತಿ ಆಯೋಗದ ಪೀಠಕ್ಕೆ ಚಾಲನೆ ನೀಡಬೇಕೆಂದು ಸಾಮಾಜಿಕ ಹೋರಾಟಗಾರ ಶ್ರೀನಿವಾಸ್ ಗೌಡ ಪಾಟೀಲ್ ಮನವಿ ಪತ್ರ ಬರೆದಿದ್ದರು. ಆದರೆ, ಇದೂವರೆಗೆ ಪೀಠಕ್ಕೆ ಆಯುಕ್ತರನ್ನು ನೇಮಕ ಮಾಡಲಾಗಿಲ್ಲ ಎಂದು ವೇದಿಕೆ ಅಸಮಾಧಾನ ವ್ಯಕ್ತಪಡಿಸಿದೆ.

ಇದೀಗ ಮತ್ತೊಮ್ಮೆ ಮನವಿ ಸಲ್ಲಿಸಿದ್ದು, ಮನವಿ ಪತ್ರದಲ್ಲಿ, “ಕರ್ನಾಟಕ ರಾಜ್ಯ ಸರ್ಕಾರವು ಉತ್ತಮ, ಜನಪರ, ಸ್ವಚ್ಛ, ಪ್ರಾಮಾಣಿಕ ಮತ್ತು ಭ್ರಷ್ಟಾಚಾರ ರಹಿತ  ಪಾರದರ್ಶಕ ಆಡಳಿತ ನೀಡಲು ನಿರಂತರವಾಗಿ ಶ್ರಮಿಸುತ್ತಿದೆ ಎಂದು ನಾವು ಭಾವಿಸಿದ್ದೇವೆ. ಬಹಳ ಮುಖ್ಯವಾಗಿ 2005ರಲ್ಲಿ ಯುಪಿಎ ಸರ್ಕಾರವು ದೇಶದಲ್ಲಿ ಪಾರದರ್ಶಕ ಆಡಳಿತ ನಡೆಸಲು ಬದ್ಧರಾಗಿ ‘ಮಾಹಿತಿ ಹಕ್ಕು ಅಧಿನಿಯಮ-2005’ ಜಾರಿಗೊಳಿಸಿದೆ. ಈ ನಿಟ್ಟಿನಲ್ಲಿ, ಕರ್ನಾಟಕ ರಾಜ್ಯ ಸರ್ಕಾರವು ಮುಂಬೈ ಕರ್ನಾಟಕ ವ್ಯಾಪ್ತಿಯಲ್ಲಿರುವ ಏಳು ಜಿಲ್ಲೆಗಳ ನಾಗರಿಕರಿಗೆ ಸುಲಭವಾಗಿ ಮಾಹಿತಿ ದೊರಕುವಂತೆ ಮಾಡಲು ಬೆಳಗಾವಿಯಲ್ಲಿ ಮಾಹಿತಿ ಆಯೋಗದ ಪೀಠವನ್ನು ರಚನೆ ಮಾಡಿ ಆಯುಕ್ತರನ್ನು ನೇಮಕ ಮಾಡಿತ್ತು” ಎಂದು ವಿವರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆದರೆ, ಅಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾಹಿತಿ ಆಯುಕ್ತರು ರಾಜೀನಾಮೆ ನೀಡಿದ ಕಾರಣ ಹುದ್ದೆಯು ಸುಮಾರು ಎರಡು-ಮೂರು ವರ್ಷಗಳಿಂದ ಖಾಲಿ ಉಳಿದಿದೆ. ಹೊಸ ಆಯುಕ್ತರನ್ನು ನೇಮಿಸದೆ ಸರ್ಕಾರವು ತನ್ನ ಜವಾಬ್ದಾರಿಯಿಂದ ಹಿಂದೆ ಸರಿದಿರುವುದು ದುರಾದೃಷ್ಟಕರ ಸಂಗತಿ. ಬೆಳಗಾವಿ ಜಿಲ್ಲೆ ಸೇರಿದಂತೆ ಸುಮಾರು ಏಳು ಜಿಲ್ಲೆಗಳ ನಾಗರಿಕರು ಸಲ್ಲಿಸಿದ್ದ ಸುಮಾರು 15 ಸಾವಿರ ಮೇಲ್ಮನವಿಗಳು ಇತ್ಯರ್ಥವಾಗದೇ ಉಳಿದಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

“ಮಾಹಿತಿ ಆಯೋಗದ ಬೆಳಗಾವಿ ಪೀಠಕ್ಕೆ ತಕ್ಷಣ ಆಯುಕ್ತರನ್ನು ನೇಮಿಸಿ ಮಾಹಿತಿ ಆಯೋಗದ ಪೀಠವನ್ನು ಪುನರಾರಂಭಗೊಳಿಸಬೇಕು. ಇತ್ಯರ್ಥವಾಗದೇ ಉಳಿದಿರುವ 15 ಸಾವಿರಕ್ಕೂ ಹೆಚ್ಚು ಮೇಲ್ಮನವಿಗಳ ಇತ್ಯರ್ಥಕ್ಕೆ ಸರ್ಕಾರವು ಮುಂದಾಗಬೇಕು. ಸೂಕ್ತ ಕಾನೂನು ಕ್ರಮಗಳ ಪ್ರಕ್ರಿಯೆಗೆ ಚಾಲನೆ ನೀಡಿ, ನೆನೆಗುದಿಗೆ ಬಿದ್ದಿರುವ  ಬೆಳಗಾವಿ ಮಾಹಿತಿ ಆಯೋಗದ ಪೀಠಕ್ಕೆ ಆಯುಕ್ತರನ್ನು ನೇಮಿಸಿ ಚಾಲನೆ ನೀಡಬೇಕು: ಎಂದು ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...