ಬೆಳಗಾವಿ : ಜಯಾನಂದ ಮಾದರರ ರಾಗರಸಗೀತೆ ಕೃತಿ ಲೋಕಾರ್ಪಣೆ

Date:

ಬೆಳಗಾವಿ ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಹಾಗೂ ಗೋಕಾವಿ ಗೆಳೆಯರ ಬಳಗ ಸಂಯುಕ್ತ ಆಶ್ರಯದಲ್ಲಿ ಜಯಾನಂದ ಮಾದರ ಅವರ ರಾಗರಸಗೀತೆ ಕೃತಿಯನ್ನು ಬಂಡಾಯ ಸಾಹಿತಿ ಯಲ್ಲಪ್ಪ ಹಿಮ್ಮಡಿ ಜನಾರ್ಪಣೆಗೊಳಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, “ಕಲೆಗಾಗಿ ಕಲೆ ಎನ್ನುವುದು ಅವಾಸ್ತವ. ಇಂದಿನ ಸಮಾಜದ ಸಂಕಟಗಳ ನಿವಾರಣೆಗೆ ಕಲೆ–ಸಾಹಿತ್ಯವನ್ನು ಸಾಧನವಾಗಿ ಬಳಸುವುದು ಅಗತ್ಯ. ವಿಚಾರ ಕ್ರಾಂತಿಯಾಗುವುದು ಕಲೆ–ಸಾಹಿತ್ಯದ ನಿಜವಾದ ಉದ್ದೇಶ. ಮಾನವೀಯತೆಯ ಉಳಿವಿಗಾಗಿ ಬರಹಗಾರರು ಮತ್ತು ಕಲಾವಿದರು ತಮ್ಮ ಸೃಜನಶೀಲತೆಯನ್ನು ಸಮಾಜಮುಖಿಯಾಗಿ ವ್ಯಕ್ತಪಡಿಸಬೇಕು” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದೆ ಶೋಷಿತರು ಶೋಷಕರಿಗೆ – ನಾವೂ ಮನುಷ್ಯರಲ್ಲವೇ? ಎಂದು ಕೇಳುತ್ತಿದ್ದರು. ಆದರೆ ಇಂದು ಅಮಾಯಕರ ಮೇಲೆ ದೌರ್ಜನ್ಯ ಎಸಗುವ ಶೋಷಕರಿಗೆ – ನೀವೂ ನಮ್ಮಂತೆ ಮನುಷ್ಯರಲ್ಲವೇ? ಎಂದು ಪ್ರಶ್ನಿಸಬೇಕಾಗಿದೆ. ಅಲೆಮಾರಿಗಳಿಗೆ ಒಳ ಮೀಸಲಾತಿಯಲ್ಲಿ ಅನ್ಯಾಯ ಎಸಗಿದ ಸರ್ಕಾರದ ಕ್ರಮವನ್ನು ಖಂಡಿಸಿ ದೇವನೂರು ಮಹದೇವ, ಬರಗೂರು ರಾಮಚಂದ್ರಪ್ಪ, ಎಸ್.ಜಿ. ಸಿದ್ದರಾಮಯ್ಯ, ಸಿ.ಎಸ್. ದ್ವಾರಕನಾಥ್ ಮುಂತಾದ ಸಾಹಿತ್ಯಿಕರು ಧ್ವನಿ ಎತ್ತಿರುವುದು ಸಾಹಿತ್ಯ–ಕಲಾವಿದರು ಜನಪರರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ” ಎಂದರು.

1000494389

ರಂಗಕರ್ಮಿ ಶಿರೀಷ್ ಜೋಶಿ ಅವರು ಕೃತಿಯನ್ನು ಪರಿಚಯಿಸಿ, “ರಾಗರಸಗೀತೆ ಕೃತಿ ಸಂಗೀತ, ಸುಗಮ ಸಂಗೀತ, ಭಜನೆ ಹಾಗೂ ತತ್ವಪದ ಪರಂಪರೆಯ ತಾತ್ವಿಕ ಅಧ್ಯಯನದ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ವಿಶಿಷ್ಟ ಕೊಡುಗೆ” ಎಂದು ವಿಶ್ಲೇಷಿಸಿದರು.

ಅಧ್ಯಕ್ಷತೆ ವಹಿಸಿದ ರಂಗಚಿಂತಕ ರವಿ ಕೋಟಾರಗಸ್ತಿ, “ಸಾಹಿತ್ಯವು ನೊಂದ ಜನರ ಧ್ವನಿಯಾಗಿ ಬೆಳೆಯಬೇಕು. ಕಲಾವಿದರು ಸಮಾಜದ ಪ್ರತಿಬಿಂಬವಾಗಿ ನಿಲ್ಲಬೇಕು. ಜಯಾನಂದ ಮಾದರರ ಈ ಕೃತಿ ಸಂಗೀತ ಅಧ್ಯಯನ ಮಾತ್ರವಲ್ಲದೆ ಜನಪದ ಸಂಶೋಧನೆಗೂ ಮಾರ್ಗದರ್ಶಿಯಾಗಿದೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಆಕಾಶವಾಣಿಯ ಕಲಾವಿದ ಬಿ.ಸಿ. ದೇಗಾವಿಮಠ, ಡಾ. ಮಲ್ಲಿಕಾರ್ಜುನ್ ಮನ್ಸೂರ್ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸದಸ್ಯ ಯಾದವೇಂದ್ರ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀಮತಿ ರಜನಿ ಜೀರಗ್ಯಾಳ ಮಾತನಾಡಿದರು.

ಅದೇ ಸಂದರ್ಭದಲ್ಲಿ ನಡೆದ ಕವಿಗೋಷ್ಠಿಯಲ್ಲಿ ಸಿ.ವೈ. ಮೆಣಸಿನಕಾಯಿ, ಮಹದೇವಿ ಕಿತ್ತೂರ, ಈಶ್ವರಚಂದ್ರ ಬೆಟಗೇರಿ, ಮೀನಾಕ್ಷಿ ಸೂಡಿ, ಶ್ರೀಶೈಲ್ ಶಿರೂರ್, ವಿದ್ಯಾ ರೆಡ್ಡಿ, ಹೇಮಾ ಸೋನಳ್ಳಿ ಹಾಗೂ ಸುನಂದ ಹಾಲಬಾವಿ ಕವನ ವಾಚಿಸಿದರು.

ಈ ಸುದ್ದಿ ಓದಿದ್ದಿರಾ ? ಗ್ರಾಮೀಣ ಆರ್ಥಿಕತೆಯ ಶಕ್ತಿಯೇ ಕೃಷಿ ಕೂಲಿ ಕಾರ್ಮಿಕರು: ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸರ್ಕಾರ ಸ್ಪಂದಿಸುವುದೇ?

ಬಂಡಾಯ ಸಂಘಟನೆಯ ಜಿಲ್ಲಾ ಸಂಚಾಲಕ ದೇಮಣ್ಣ ಸೊಗಲದ, ಕನ್ನಡ ಅಧ್ಯಾಪಕರ ಪರಿಷತ್ತಿನ ಕಾರ್ಯದರ್ಶಿ ಸುರೇಶ ಹನಗಂಡಿ, ಮಾನವ ಬಂಧುತ್ವ ವೇದಿಕೆಯ ಪ್ರಕಾಶ ಬೊಮ್ಮಣ್ಣವರ್, ಪವನ್ ಮುಂತಾದವರು ಭಾಗವಹಿಸಿದ್ದರು. ಕೃತಿಕಾರ ಜಯಾನಂದ ಮಾದರ್ ಪ್ರಸ್ತಾವಿಕ ಮಾತುಗಳಾಡಿದರು. ಅರುಣ್ ಸೌತಿಕಾಯಿ ಸ್ವಾಗತಿಸಿದರು, ಆನಂದ್ ಸೋರಗಾವಿ ವಂದಿಸಿದರು. ಕಲಾವಿದ ರಾಮಚಂದ್ರ ಕಾಕಡೆ ನಿರೂಪಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...