ಬೆಳಗಾವಿ | ಸಂಕಷ್ಟದಲ್ಲಿ ಚರ್ಮ ಕುಶಲಕರ್ಮಿಗಳು; ಅಧಿವೇಶನದಲ್ಲಿ ಚರ್ಚೆಗೆ ಒತ್ತಾಯ

Date:

ಚರ್ಮ ಕುಶಲಕರ್ಮಿಗಳ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ, ನೆರವಿಗೆ ಬರುವಂತೆ ಕುಶಲಕರ್ಮಿಗಳು ಆಗ್ರಹಿಸುತ್ತಿದ್ದಾರೆ.

ಕೊಲ್ಹಾಪುರಿ ಚಪ್ಪಲಿಗೆ ಮಹಾರಾಷ್ಟ್ರದ ಕೊಲ್ಹಾಪುರದ ಹೆಸರು ಬಂದಿದ್ದರೂ ತಯಾರಾಗುವುದು ಮಾತ್ರ ಕರ್ನಾಟಕದಲ್ಲಿ. ಆದರೆ, ಸರಿಯಾದ ಮಾರುಕಟ್ಟೆ ಸೌಲಭ್ಯವಿಲ್ಲದೇ ಚರ್ಮ ಉದ್ಯೋಗವನ್ನೇ ನಂಬಿ ಜೀವನ ಸಾಗಿಸುತ್ತಿರುವ ಬೆಳಗಾವಿ ಜಿಲ್ಲೆಯ ಒಂದೂವರೆ ಲಕ್ಷಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ.

ಜಿಲ್ಲೆಯ ಚಿಕ್ಕೋಡಿ ಉಪವಿಭಾಗದ ಅಥಣಿ, ನಿಪ್ಪಾಣಿ, ರಾಯಬಾಗ ಸೇರಿದಂತೆ ಒಂದೂವರೆ ಲಕ್ಷಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳಿದ್ದಾರೆ. ಹಲವು ವರ್ಷಗಳಿಂದ ಈ ಕುಟುಂಬಗಳು ಚರ್ಮದ ಚಪ್ಪಲಿ ತಯಾರಿಸುತ್ತಿವೆ. ಅಥಣಿ ಸೇರಿ ವಿವಿಧೆಡೆ ತಯಾರಾಗುವ ವಿಶಿಷ್ಟ ಶೈಲಿಯ ಚಪ್ಪಲಿಗೆ ಹೆಸರು ಬಂದಿದ್ದು ಮಾತ್ರ ಮಹಾರಾಷ್ಟ್ರದ ಕೊಲ್ಹಾಪುರದ್ದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರುಕಟ್ಟೆಯಲ್ಲಿ ಬಂದಿರುವ ದೊಡ್ಡ ದೊಡ್ಡ ಬ್ರ್ಯಾಂಡ್​ಗಳ ಮಧ್ಯೆ ಅಥಣಿಯ ಚಪ್ಪಲಿ ತಯಾರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲೂ ಚರ್ಮ ಕುಶಲಕರ್ಮಿಗಳ ಬಳಿಯೂ ಶೇಕಡ 12ರಷ್ಟು ಜಿಎಸ್​ಟಿ ವಸೂಲಾತಿ ಮಾಡಲಾಗುತ್ತಿದ್ದು, ನಮಗೆ ತೊಂದರೆಯಾಗಿದೆ ಎಂದು ಅಖಿಲ ಕರ್ನಾಟಕ ಚರ್ಮಕಾರ ಸಮಾಜ ಮಹಾಒಕ್ಕೂಟ ಅಧ್ಯಕ್ಷ ಅನಿಲ್ ಕುಮಾರ್ ಸೌದಾಗರ್ ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೇ ಅಥಣಿಯಲ್ಲಿ ತಯಾರಾಗಿ ವಿದೇಶಕ್ಕೆ ಚಪ್ಪಲಿಗಳು ರಫ್ತಾಗುತ್ತಿತ್ತು. ಅದನ್ನೂ ಸಹ ಈಗ ಸ್ಥಗಿತಗೊಳಿಸಿದ್ದಾರೆ. ಮೊದಲು ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ಸಬ್ಸಿಡಿ ಸೌಲಭ್ಯ ನೀಡುತ್ತಿತ್ತು. ಇದನ್ನು ಕಡಿತ ಮಾಡಿದ್ದು ಚರ್ಮ ಕುಶಲಕರ್ಮಿಗಳು ಸಂಕಷ್ಟದಲ್ಲಿದ್ದಾರೆ.

ಹೀಗಾಗಿ ಬೆಳಗಾವಿಯಲ್ಲಿ ಡಿಸೆಂಬರ್ 4ರಿಂದ ನಡೆಯುವ ಅಧಿವೇಶನದಲ್ಲಿ ಚರ್ಮಕುಶಲಕರ್ಮಿಗಳ ಸಂಕಷ್ಟದ ಬಗ್ಗೆ ಚರ್ಚೆ ಮಾಡಬೇಕು. ಚರ್ಮ ಕುಶಲಕರ್ಮಿಗಳ ಅನುಕೂಲಕ್ಕಾಗಿ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪನೆ ಮಾಡಿ 200ಕೋಟಿ ರೂ. ಹಣ ಮೀಸಲಿಡಬೇಕು ಎಂದು ಆಗ್ರಹಿಸಿದ್ದಾರೆ.

ಅಷ್ಟೇ ಅಲ್ಲದೇ ಹೊರದೇಶದಿಂದ ಚರ್ಮವನ್ನು ಆಮದು ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಿದ್ದಾರೆ. ಇತ್ತ ವಿದೇಶಕ್ಕೆ ಚಪ್ಪಲಿಗಳ ರಫ್ತು ಸ್ಥಗಿತಗೊಳಿಸಿದ್ದರಿಂದ ಚರ್ಮ ಕುಶಲಕರ್ಮಿಗಳ ಮೇಲೆ ಪರಿಣಾಮ ಬೀರಿದೆ ಎಂದು ಆರೋಪಿಸಿದ್ದಾರೆ.

ಇನ್ನು ಕೊಲ್ಹಾಪುರ ಬ್ರ್ಯಾಂಡ್​ಗೆ ಪರ್ಯಾಯವಾಗಿ ರಾಜ್ಯದಲ್ಲಿ ಅಥಣಿ ಬ್ರ್ಯಾಂಡ್ ಚರ್ಮದ ಚಪ್ಪಲಿ ಹೆಸರಿನಡಿ ಮಾರಾಟ ಮಾಡಬೇಕೆಂದು ಹಿಂದಿನ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ಮಾರ್ಕೆಟಿಂಗ್ ವ್ಯವಸ್ಥೆ ಸರಿ ಇಲ್ಲ ಎಂದು ಚರ್ಮ ಕುಶಲಕರ್ಮಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ನೆರೆಯ ಮಹಾರಾಷ್ಟ್ರ ಬ್ರ್ಯಾಂಡ್​ಗೆ ನಮ್ಮ ರಾಜ್ಯದ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದರ ಬದಲಿಗೆ ಕರ್ನಾಟಕ ಬ್ರ್ಯಾಂಡ್​ನ್ನೇ ಬೆಳೆಸಬೇಕೆಂಬ ಉದ್ದೇಶದಿಂದ ಅಥಣಿ ಬ್ರ್ಯಾಂಡ್ ಆರಂಭಿಸಲಾಗಿದ್ದು, ಇದರ ಮಾರ್ಕೆಟಿಂಗ್​ಗೆ ಕ್ರಮ ವಹಿಸಬೇಕು.

ಈಗ ಚರ್ಮದ ಚಪ್ಪಲಿಗಳ ತಯಾರಿಕೆಗೆ ಅತ್ಯಾಧುನಿಕ ಯಂತ್ರೋಪಕರಣಗಳು ಬಂದಿದ್ದು, ಯಂತ್ರೋಪಕರಣಗಳ ಖರೀದಿಗೆ ಸರ್ಕಾರ ನೆರವು ನೀಡಬೇಕು. ಮೊದಲಿನಂತೆಯೇ 60:40 ಅನುಪಾತದಡಿ ಸಬ್ಸಿಡಿ ನೀಡುವ ಯೋಜನೆ ರೂಪಿಸಬೇಕು.

ಈಗಾಗಲೇ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕೆಗಳ ಅಭಿವೃದ್ಧಿ ನಿಗಮಕ್ಕೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಅತ್ಯುತ್ತಮ ಗುಣಮಟ್ಟದ ಅಥಣಿ ಬ್ರ್ಯಾಂಡ್ ಚಪ್ಪಲಿಗಳ ಮಾರಾಟಕ್ಕೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸುತ್ತಿದ್ದಾರೆ.

ಒಟ್ಟಾರೆಯಾಗಿ ರಾಜ್ಯಾದ್ಯಂತ 18 ಲಕ್ಷಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳು ಇದ್ದು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4ರಿಂದ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಬೇಕು. ಈಗಾಗಲೇ ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕೆಗಳ ಅಭಿವೃದ್ಧಿ ನಿಗಮವಿದ್ದರೂ ಚರ್ಮ ಕುಶಲಕರ್ಮಿಗಳಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಬೇಕೆಂಬುದು ಚರ್ಮ ಕುಶಲಕರ್ಮಿಗಳ ಹಕ್ಕೊತ್ತಾಯ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...