ಬೆಳಗಾವಿ : ತಂದೆಗೆ ಮಗನಿಂದ ಲಿವರ್ ದಾನ – ಕೆಎಲ್‌ಇ ಆಸ್ಪತ್ರೆಯಲ್ಲಿ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆ

Date:

ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ತಂದೆಗೆ ಮಗನ ಲಿವರ್‌ನ ಭಾಗವನ್ನು ಜೋಡಿಸುವ ಮೂಲಕ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆ ನೆರವೇರಿಸುವಲ್ಲಿ ಬೆಳಗಾವಿಯ ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ತಜ್ಞ ವೈದ್ಯರ ತಂಡ ಶ್ಲಾಘನೀಯ ಸಾಧನೆ ದಾಖಲಿಸಿದೆ.

ರಾಯಬಾಗ ತಾಲೂಕಿನ ರೈತನೊಬ್ಬ ಲಿವರ್ ವೈಫಲ್ಯದಿಂದ ತೀವ್ರವಾಗಿ ಬಳಲುತ್ತಿದ್ದ ಸಂದರ್ಭ, ಚಿಕಿತ್ಸೆಗಾಗಿ ಲಿವರ್ ಕಸಿ ಶಸ್ತ್ರಚಿಕಿತ್ಸೆ ಅಗತ್ಯವಾಗಿತ್ತು. ಈ ಸಂದರ್ಭದಲ್ಲಿ ಅವರ 26 ವರ್ಷದ ಮಗ ತನ್ನ ಲಿವರ್‌ನ ಭಾಗವನ್ನು ತಂದೆಗೆ ದಾನಮಾಡಿ ಮಾನವೀಯತೆ ಮೆರೆದಿದ್ದಾನೆ. ಈ ದಾನದ ಬೆನ್ನಲ್ಲೇ ತಜ್ಞ ವೈದ್ಯರ ತಂಡ ಯಶಸ್ವಿಯಾಗಿ ಲಿವರ್ ಕಸಿ ಕಾರ್ಯಾಚರಣೆ ನೆರವೇರಿಸಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ಯಾಸ್ಟೋಎಂಟ್ರಾಲಾಜಿ ತಜ್ಞ ಡಾ. ಸಂತೋಷ ಹಜಾರೆ, “ಕೊನೆಯ ಹಂತದ ಲಿವರ್ ವೈಫಲ್ಯದಿಂದ ಬಳಲುತ್ತಿದ್ದ ರೋಗಿಗೆ ಅವರ ಪುತ್ರ ಲಿವರ್ ದಾನ ಮಾಡಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ದಾನಿ ಹಾಗೂ ದಾನ ಸ್ವೀಕರಿಸಿದ ರೋಗಿ ಇಬ್ಬರೂ ಸುಸ್ಥಿತಿಯಲ್ಲಿದ್ದು, ದಾನಿದಾರರು 8ನೇ ದಿನಕ್ಕೆ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುತ್ತಿದ್ದಾರೆ,” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತ್ಯಂತ ಸಂಕೀರ್ಣ ಹಾಗೂ ತಾಂತ್ರಿಕ ಶಸ್ತ್ರಚಿಕಿತ್ಸೆಯನ್ನು ಬೆಂಗಳೂರಿನ ಆಸ್ಟರ್ ಆಸ್ಪತ್ರೆಯ ಡಾ. ಸೋನಲ್ ಅಸ್ತಾನಾ, ಡಾ. ವಚನ ಹುಕ್ಕೇರಿ, ಡಾ. ರೋಮೆಲ್ ಎಸ್ ಮತ್ತು ಬೆಳಗಾವಿಯ ಡಾ. ಸುದರ್ಶನ ಚೌಗಲೆ, ಡಾ. ಕಿರಣ್ ಉರಬಿನಹಟ್ಟಿ ನೇತೃತ್ವದ ತಂಡ ಯಶಸ್ವಿಯಾಗಿ ನೆರವೇರಿಸಿದೆ.

ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ ಮಾತನಾಡಿ, “ಕೆಎಲ್‌ಇ ಆಸ್ಪತ್ರೆ ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನ, ನುರಿತ ಸಿಬ್ಬಂದಿ ಮತ್ತು ಶ್ರೇಷ್ಟ ಚಿಕಿತ್ಸಾ ಸೌಲಭ್ಯಗಳೊಂದಿಗೆ ಈ ಭಾಗದ ಪ್ರಮುಖ ಅಂಗಾಂಗ ಕಸಿ ಕೇಂದ್ರವಾಗಿ ಹೊರಹೊಮ್ಮಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ ಸೇರಿದಂತೆ ಇತರ ರಾಜ್ಯಗಳಲ್ಲಿಯೂ ರೋಗಿಗಳು ಇಲ್ಲಿ ಚಿಕಿತ್ಸೆಗೆ ಆಗಮಿಸುತ್ತಿದ್ದಾರೆ,” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಬೆಳಗಾವಿಯಲ್ಲಿ ವಿಮಾನ ಅಪಘಾತ ಅಣಕು ಪ್ರದರ್ಶನ

ಇನ್ನು ವರದಿಯ ಪ್ರಕಾರ, ಸಂಸ್ಥೆಯಲ್ಲಿ ಇದುವರೆಗೆ 101 ಕ್ಕೂ ಹೆಚ್ಚು ಮೂತ್ರಪಿಂಡ, 22 ಲಿವರ್ ಹಾಗೂ 14 ಹೃದಯ ಕಸಿ ಶಸ್ತ್ರಚಿಕಿತ್ಸೆಗಳು ಯಶಸ್ವಿಯಾಗಿ ನೆರವೇರಿವೆ. ಅಸ್ಥಿಮಜ್ಜೆ ಕಸಿಯೂ ನಿರಂತರ ನಡೆಯುತ್ತಿದೆ.

ಸುದ್ದಿಗೋಷ್ಠಿಯಲ್ಲಿ ಡಾ. ಮಾಧವ್ ಪ್ರಭು, ಡಾ. ರಾಜೇಶ್ ಮಾನೆ, ಡಾ. ಬಸವರಾಜ್ ಬಿಜರಗಿ ಮತ್ತಿತರರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...