ಬೆಳಗಾವಿ : ಸಂಧಾನ ಸಭೆಯಲ್ಲಿ ವ್ಯಕ್ತಿ ಹತ್ಯೆ

Date:

ಬೆಳಗಾವಿ ಜಿಲ್ಲೆಯ ಖಾನಾಪುರದ ಗಾಂಧೀನಗರ ಮಾರುತಿ ದೇವಸ್ಥಾನದಲ್ಲಿ ಭಾನುವಾರ ಸಂಜೆ ನಡೆದ ಸಂಧಾನ ಸಭೆಯಲ್ಲಿ ಹಲಕರ್ಣಿ ಗ್ರಾಮದ ಸುರೇಶ ಭೀಮಪ್ಪ ಬಂಡಿವಡ್ಡರ (36) ಅವರನ್ನು ಹತ್ಯೆ ಮಾಡಲಾಗಿದೆ.

ಹಳೆಯ ವೈಷಮ್ಯ ಬಗೆಹರಿಸಲು ನಡೆದ ಸಭೆಯಲ್ಲಿ ಗಾಂಧೀನಗರದ ಯಲ್ಲಪ್ಪ ಬಂಡಿವಡ್ಡರ (62) ಚಾಕುವಿನಿಂದ ಸುರೇಶ ಅವರ ಹೊಟ್ಟೆಗೆ ಇರಿದು ಗಂಭೀರವಾಗಿ ಗಾಯಗೊಳಿಸಿದರು. ಆಸ್ಪತ್ರೆಗೆ ಸಾಗಿಸುವಾಗ ಸುರೇಶ ಮೃತಪಟ್ಟರು.

ಜಗಳ ಬಿಡಿಸಲು ಯತ್ನಿಸಿದ ಸಾಗರ ಅಷ್ಟೇಕರ ಅವರಿಗೂ ಗಾಯಗಳಾಗಿವೆ. ಹತ್ಯೆಯ ಬಳಿಕ ಯಲ್ಲಪ್ಪ ಸ್ವಯಂ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಖಾನಾಪುರ ಠಾಣೆಯಲ್ಲಿ ದಾಖಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...