ಬೆಳಗಾವಿ | ಮಗನ ಅಂತ್ಯಸಂಸ್ಕಾರ ಮಾಡಲಾಗದೆ ಪರಿತಪಿಸಿದ ತಾಯಿ: ಮನಕಲಕುವ ಘಟನೆ

Date:

ಬೆಳಗಾವಿ ನಗರದ ಗೋಂಧಳಿ ಗಲ್ಲಿಯ ನಿವಾಸಿ ಕಿರಣ ಕಿತವಾಡಕರ (54) ಮೂರು ದಿನಗಳ ಹಿಂದೆ ತಮ್ಮ ಮನೆಯಲ್ಲೇ ಅನಾರೋಗ್ಯದಿಂದ ಮೃತಪಟ್ಟಿದ್ದರು. ಮನೆಯಲ್ಲಿ ವಯಸ್ಸಾದ ತಾಯಿ ಹೊರತುಪಡಿಸಿ ಬೇರೆ ಯಾರೂ ಇಲ್ಲದ ಕಾರಣ ಈ ಘಟನೆ ಯಾರಿಗೂ ಗೊತ್ತಾಗಿರಲಿಲ್ಲ. ಮೂರು ದಿನಗಳ ಬಳಿಕ ಶವಕ್ಕೆ ಇಲಿ-ಹುಳುಗಳು ಕಚ್ಚಿ ದುರ್ವಾಸನೆ ಹರಡಿದಾಗ ವಿಷಯ ಬೆಳಕಿಗೆ ಬಂದಿದೆ.

ಮಗನ ಅಂತ್ಯಕ್ರಿಯೆ ಹೇಗೆ ಮಾಡಬೇಕೆಂದು ತಿಳಿಯದೆ ವೃದ್ಧ ತಾಯಿ ಅಸಹಾಯಕವಾಗಿ ಕಣ್ಣೀರು ಹಾಕುತ್ತಿದ್ದರು. ಈ ವಿಷಯವನ್ನು ಸ್ಥಳೀಯರು ಗಂಗಾಧರ ಪಾಟೀಲ ಅವರಿಗೆ ಮಾಹಿತಿ ನೀಡಿದ ತಕ್ಷಣ, ಅವರು ತಮ್ಮ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿ, ನಾವಿದ್ದೀವಿ, ಚಿಂತೆ ಮಾಡಬೇಡಿ ಎಂದು ವೃದ್ಧೆಗೆ ಧೈರ್ಯ ತುಂಬಿದರು.

ನಂತರ ಶವವನ್ನು ಮನೆಯಿಂದ ಹೊರತೆಗೆದು, ಅಗತ್ಯ ಪೂಜೆ-ಪುನಸ್ಕಾರ ನೆರವೇರಿಸಿ ಸದಾಶಿವ ನಗರದ ಸ್ಮಶಾನದಲ್ಲಿ ಗೌರವಪೂರ್ವಕವಾಗಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮಾನವೀಯ ಕಾರ್ಯಕ್ಕೆ ಮನಸೋತ ವೃದ್ಧ ತಾಯಿ, ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ ಎಂದು ಕಣ್ಣೀರಿನೊಂದಿಗೆ ಕೃತಜ್ಞತೆ ಸಲ್ಲಿಸಿದರು.

1001337574

ಈ ಸುದ್ದಿ ಓದಿದ್ದಿರಾ? ಬೆಳಗಾವಿ | ಜಾತ್ರೆಗಳಲ್ಲಿ ರಾಸಾಯನಿಕ ಮಿಶ್ರಿತ ಭಂಡಾರಕ್ಕೆ ನಿಷೇಧ: ಡಿಸಿ ಮೊಹಮ್ಮದ್ ರೋಷನ್ ಆದೇಶ

ಈ ಪುಣ್ಯ ಕಾರ್ಯದಲ್ಲಿ ಗಂಗಾಧರ ಪಾಟೀಲ ಅವರೊಂದಿಗೆ ಶಂಕರ ಪಾಟೀಲ, ನಿಜಾರ್ ಅಹ್ಮದ್, ವಿನಾಯಕ ಪೂಜಾರಿ, ನಿಖಿಲ್ ಗಂಟಾನೆ, ಸೌರಭ ಗಾವಡೆ, ನಿತಿನ್ ಕಿಲ್ಲೇಕರ್, ಪ್ರಸಾದ ಪಡಕುಡೆ ಹಾಗೂ ಓಮ್ಮಾರ್ ಅವರು ಕೈಜೋಡಿಸಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...