ಬೆಳಗಾವಿ : ನಾರಾಯಣ ಭರಮನಿ ಅವರನ್ನು ಬೆಳಗಾವಿ ನಗರಕ್ಕೆ ಡಿಸಿಪಿಯಾಗಿ ವರ್ಗಾವಣೆ

Date:

ಧಾರವಾಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ನೀಡುತ್ತಿದ್ದ ಐಪಿಎಸ್ ಅಧಿಕಾರಿ ನಾರಾಯಣ ಭರಮನಿ ಅವರನ್ನು ಬೆಳಗಾವಿ ನಗರಕ್ಕೆ ಡಿಸಿಪಿಯಾಗಿ ವರ್ಗಾಯಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಇತ್ತೀಚೆಗೆ ನಡೆದ ಘಟನೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ‘ಕೈ ಎತ್ತಿದ್ದಾರೆ’ ಎಂಬ ಕಾರಣದಿಂದ ಬೇಸರಗೊಂಡಿದ್ದ ಭರಮನಿ ರಾಜೀನಾಮೆಗೆ ಮುಂದಾಗಿದ್ದರು. ಈ ವಿಷಯ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಗೃಹಸಚಿವ ಡಾ. ಜಿ. ಪರಮೇಶ್ವರ ಭರಮನಿಯವರನ್ನು ಸಮಾಧಾನಪಡಿಸಿ, ಸರ್ವಿಸ್ ಮುಂದುವರೆಸುವಂತೆ ಮನವೊಲಿಸಿದರು.

ಈ ರಾಜಕೀಯ ಮತ್ತು ಸೇವಾ ಬೆಳವಣಿಗೆಯ ಹಿನ್ನಲೆಯಲ್ಲಿ, ಭರಮನಿಯವರನ್ನು ಈಗ ಬೆಳಗಾವಿಗೆ ಡಿಸಿಪಿಯಾಗಿ ನಿಯೋಜಿಸಲಾಗಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...