ಬೆಳಗಾವಿ | ಸ್ಮಶಾನದ ಬಳಿ ದಲಿತರು ಕುಳಿತಿದ್ದಕ್ಕೆ ಆಕ್ಷೇಪ; ಗುಂಪುಗಳ ನಡುವೆ ಘರ್ಷಣೆ; ಶಾಸಕರಿಗೆ ಗಾಯ

Date:

ಸ್ಮಶಾನ ಭೂಮಿಯ ಬಳಿಕ ದಲಿತ ಯುವಕರು ಕುಳಿತಿದ್ದಕ್ಕೆ ಸವರ್ಣೀಯ ಮರಾಠರು ಆಕ್ಷೇಪಿಸಿ, ಗಲಾಟೆ ನಡೆಸಿದ್ದಾರೆ. ಮರಾಠ ಮತ್ತು ದಲಿತ ಯುವಕರ ಗುಂಪಿನ ನಡುವೆ ಘರ್ಷಣೆ ನಡೆದಿದ್ದು, ಸ್ಥಳಕ್ಕೆ ಬಂದ ಶಾಸಕ ವಿಠ್ಠಲ ಹಲಗೇಕರ ಅವರಿಗೂ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ತೋಪನಕಟ್ಟಿ ಗ್ರಾಮದಲ್ಲಿ ನಡೆದಿದೆ.

ಬುಧವಾರ ಹುಂದರಿ ಹಬ್ಬ ಆಚರಿಸಿದ್ದ ದಲಿತ ಯುವಕರು, ಅಂದು ಸಂಜೆ ಸ್ಮಶಾನ ಭೂಮಿಯ ಬಳಿ ಕುಳಿತಿದ್ದರು. ಈ ವೇಳೆ, ಅಲ್ಲಿಗೆ ಬಂದ ಮರಾಠ ಯುವಕರ ಗುಂಪು ಗಲಾಟೆ ನಡೆಸಿದೆ. ಗಲಾಟೆಯು ತಾರಕಕ್ಕೇರಿ ಎರಡೂ ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ ಎಂದು ಆರೋಪಿಸಲಾಗಿದೆ.

ಎರಡು ಸಮುದಾಯಗಳ ಗಲಾಟೆ ಬಗ್ಗೆ ತಿಳಿದ ಖಾನಾಪುರ ಶಾಸಕರು ಪೊಲೀಸರೊಂದಿಗೆ ಸ್ಥಳಕ್ಕೆ ಧಾವಿಸಿದ್ದು, ಯುವಕರ ಗುಂಪುಗಳನ್ನು ಸಮಾಧಾನಿಸಲು ಯತ್ನಿಸಿದ್ದಾರೆ. ಈ ವೇಳೆ, ಕಿಡಿಗೇಡಿಗಳು ಅವರನ್ನೂ ಎಳೆದಾಡಿದ್ದು, ಶಾಸಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದು, ಗ್ರಾಮದ ಎರಡೂ ಗುಂಪುಗಳ ಸುಮಾರು 40 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗ್ರಾಮದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ʼʼತೋಪನಕಟ್ಟಿ ಗ್ರಾಮವು ಶಾಸಕ ವಿಠ್ಠಲ್ ಹಲಗೇಕರ ಅವರ ಸ್ವಗ್ರಾಮವೇ ಆಗಿದೆ. ಶಾಸಕರು ಎರಡು ಸಮುದಾಯದ ನಡುವಿನ ಜಗಳ ಬಗೆಹರಿಸುವದನ್ನು ಬಿಟ್ಟು ರಾಜಕೀಯ ಮಾಡುತ್ತಿದ್ದಾರೆʼʼ ಎಂದು ಭೀಮ್ ಆರ್ಮಿ‌ ಆರೋಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...