ಬೆಳಗಾವಿ | ಅಧಿಕಾರಿಗಳ ನಿರ್ಲಕ್ಷ್ಯ ಗ್ರಾಮ ಪಂಚಾಯಿತಿಯಲ್ಲಿ ಎಮ್ಮೆ ಕಟ್ಟಿ ಆಕ್ರೋಶ

Date:

ದನದ ಕೊಟ್ಟಿಗೆ ನಿರ್ಮಾಣಕ್ಕೆ ಮಂಜೂರಾದ ಹಣ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜಮಾ ಮಾಡದ ಕಾರಣ ರೈತ ಸತೀಶ ಕೋಳಿ ಅವರು ಬೆಳಗಾವಿ ಜಿಲ್ಲೆಯ ಸಂಬರಗಿ ಗ್ರಾಮ ಪಂಚಾಯಿತಿ ಕಚೇರಿ ಒಳಗೆ ಎಮ್ಮೆ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ದನದ ಕೊಟ್ಟಿಗೆ ನಿರ್ಮಾಣಕ್ಕೆ ವರ್ಷದ ಹಿಂದೆಯೇ ಸಂಬರಗಿ ಗ್ರಾಮ ಪಂಚಾಯಿತಿಯಿಂದ ನನಗೆ ನೆರವಿನ ಹಣ ಮಂಜೂರಾಗಿದೆ. ₹50 ಸಾವಿರ ವೆಚ್ಚದಲ್ಲಿ ಕೊಟ್ಟಿಗೆ ಕಟ್ಟಿ ವರ್ಷವಾದರೂ ಹಣ ನೀಡುತ್ತಿಲ್ಲ. ಅಧಿಕಾರಿಗಳನ್ನು ಕೇಳಿದರೆ ನಿಮಗೆ ಮಂಜೂರು ಮಾಡಿರುವ ಯೋಜನೆ ರದ್ದಾಗಿದೆ ಎಂದು ಹೇಳುತ್ತಾರೆ’ ಎಂದು ರೈತ ಸತೀಶ ದೂರಿದ್ದಾರೆ. ಅಧಿಕಾರಿ ನೀಡಿದ ಭರವಸೆ ಮೇರೆಗೆ ಅವರು ಎಮ್ಮೆಯನ್ನು ಮನೆಗೆ ಒಯ್ದರು.

ಗ್ರಾಮ ಪಂಚಾಯಿತಿಯಲ್ಲಿ ಎಮ್ಮೆ ಕಟ್ಟಿದ ರೈತ, ಅಲ್ಲೇ ಮೇವು ಹಾಕಿದರು. ಗಂಟೆಗಟ್ಟಲೇ ಎಮ್ಮೆಯನ್ನು ಅಲ್ಲೇ ಮಲಗಿಸಿದರು. ಸ್ಥಳಕ್ಕೆ ಬಂದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ ರೈತನಿಗೆ ಭರವಸೆ ನೀಡಿ ಮನೆಗೆ ಕಳುಹಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...