ಬೆಳಗಾವಿ | ಕೆಪಿಎಸ್ ಮ್ಯಾಗ್ನೆಟ್ ನೀತಿ ವಿರುದ್ಧ ಪೋಷಕರ ಆಕ್ರೋಶ: ಸರ್ಕಾರಿ ಶಾಲೆ ಮುಚ್ಚಲು ಬಿಡುವುದಿಲ್ಲ.

Date:

ಕೆಪಿಎಸ್‌ ಮ್ಯಾಗ್ನೆಟ್’ ಹೆಸರಿನಲ್ಲಿ ಕರ್ನಾಟಕ ಸರ್ಕಾರ ರಾಜ್ಯದ ಸುಮಾರು 40,000 ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಬೆಳಗಾವಿ ಜಿಲ್ಲೆಯಲ್ಲೇ ಕನ್ನಡ, ಮರಾಠಿ, ಉರ್ದು ಸೇರಿ 2,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚುವ ಮೂಲಕ ಬಡ ಮಕ್ಕಳ ಭವಿಷ್ಯವನ್ನು ನಾಶ ಮಾಡಲಾಗುತ್ತಿದೆ ಎಂದು ಹಿರಿಯ ಕನ್ನಡಪರ ಹೋರಾಟಗಾರ ಅಶೋಕ ಚಂದರಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಸಾಹಿತ್ಯ ಭವನದಲ್ಲಿ ಎಐಡಿಎಸ್‌ಓ ನೇತೃತ್ವದಲ್ಲಿ ನಡೆದ ಜಿಲ್ಲಾಮಟ್ಟದ ಪೋಷಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವರು ಸದನದ ಒಳಗೂ ಹೊರಗೂ ಸುಳ್ಳು ಹೇಳಿ ಜನರನ್ನು ಮೋಸಗೊಳಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಗಡಿನಾಡು ಬೆಳಗಾವಿಯಲ್ಲಿ ಕನ್ನಡಿಗರು ಮತ್ತು ಮರಾಠಿಗರು ಒಂದಾಗಿ ತಮ್ಮ ಊರಿನ ಶಾಲೆಗಳನ್ನು ಉಳಿಸಿಕೊಳ್ಳಬೇಕು. ಇಂದು ಶಾಲೆಗಳನ್ನು ಉಳಿಸಲು ಆಳ್ವಿಕರ ವಿರುದ್ಧ ಬಡವರು ಒಗ್ಗಟ್ಟಾಗಿ ನಡೆಸುತ್ತಿರುವುದು ಐತಿಹಾಸಿಕ ಹೋರಾಟ. ಈ ಹೋರಾಟ ರಾಜ್ಯದ ಮೂಲೆಮೂಲೆಯಲ್ಲೂ ಹಬ್ಬಬೇಕು” ಎಂದು ಅವರು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001261865

ಎಐಡಿಎಸ್‌ಓ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ ಮಾತನಾಡಿ, “ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಲ್ಲ ಎಂಬ ಸರ್ಕಾರದ ವಾದ ಶುದ್ಧ ಸುಳ್ಳು. ರಾಜ್ಯದಲ್ಲಿ 37 ಲಕ್ಷಕ್ಕೂ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದಾರೆ. ಆದರೆ ಸರ್ಕಾರದ ವ್ಯವಸ್ಥಿತ ನಿರ್ಲಕ್ಷ್ಯದಿಂದ ಶಾಲಾ ಕಟ್ಟಡಗಳು ಕುಸಿದು ಬಳ್ಳಾರಿ ಜಿಲ್ಲೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದ 21,000ಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ವರ್ಷಗಳಿಂದ ದುರಸ್ತಿ ಕಾಣದೆ ನಿಂತಿವೆ. 60,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿಯಿವೆ. ಈ ಸಮಸ್ಯೆಗಳನ್ನು ಬಗೆಹರಿಸುವ ಬದಲು ಹಳ್ಳಿ ಶಾಲೆಗಳನ್ನು ಮುಚ್ಚಿ ಗ್ರಾಮ ಪಂಚಾಯಿತಿಗೊಂದು ಕೆಪಿಎಸ್‌ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದುವರಿದು ಅವರು, “ಏಷಿಯನ್ ಡೆವಲಪ್ಟೆಂಟ್ ಬ್ಯಾಂಕ್‌ನಿಂದ ಸಾಲ ಪಡೆದು ಅಮೆರಿಕದ ಮಾದರಿಯ ಮ್ಯಾಗ್ನೆಟ್ ಶಾಲೆಗಳನ್ನು ಇಲ್ಲಿ ಜಾರಿಗೆ ತರಲಾಗುತ್ತಿದೆ. ಈ ಶಾಲೆಗಳಲ್ಲಿ ಆರನೇ ತರಗತಿಯಿಂದಲೇ ಬಡ ಮಕ್ಕಳನ್ನು ಕಾರ್ಖಾನೆಗಳಿಗೆ ಬೇಕಾದ ಕಾರ್ಮಿಕರಾಗಿ ತಯಾರಿಸುವ ತರಬೇತಿ ನೀಡಲಾಗುತ್ತಿದೆ. ಶಾಲೆಗಳ ಉಸ್ತುವಾರಿಯನ್ನು ಖಾಸಗಿ ಕಂಪನಿಗಳಿಗೆ ಒಪ್ಪಿಸುವ ಮೂಲಕ ಶಿಕ್ಷಣವನ್ನು ಕಾರ್ಪೊರೇಟ್ ಮನೆತನಗಳಿಗೆ ಹರಾಜು ಹಾಕಲಾಗುತ್ತಿದೆ. ಕಾಂಗ್ರೆಸ್‌-ಬಿಜೆಪಿ ಎರಡೂ ಪಕ್ಷಗಳ ಈ ಕ್ರೂರ ನೀತಿಗೆ ಜನರು ಬಲಿಷ್ಠ ಹೋರಾಟ ಕಟ್ಟಬೇಕು” ಎಂದು ಕರೆ ನೀಡಿದರು.

ಚಿತ್ರಕಲಾವಿದರು ಹಾಗೂ ನಾಟಕಕಾರ ಡಾ. ಡಿ.ಎಸ್. ಚೌಗಲೆ ಮಾತನಾಡಿ, “ಇದು ಶ್ರೀಮಂತರನ್ನು ಇನ್ನಷ್ಟು ಶ್ರೀಮಂತರನ್ನಾಗಿಸಿ ಬಡವರನ್ನು ಕಡು ಬಡತನಕ್ಕೆ ತಳ್ಳುವ ಸ್ಪಷ್ಟ ವರ್ಗೀಕರಣದ ಯೋಜನೆ. ಸರ್ಕಾರ ಕೂಡಲೇ ಈ ನೀತಿಯನ್ನು ಕೈಬಿಟ್ಟು ಹಳ್ಳಿಯ ಶಾಲೆಗಳನ್ನು ಉನ್ನತೀಕರಿಸಬೇಕು. ಕನ್ನಡ ಶಾಲೆಗಳು ಉಳಿದರೆ ಮಾತ್ರ ಸಾಹಿತ್ಯ ಮತ್ತು ನಾಟಕ ಜನರಿಗೆ ತಲುಪಲು ಸಾಧ್ಯ” ಎಂದು ಹೇಳಿದರು.

ಎಐಡಿಎಸ್‌ಓ ರಾಜ್ಯ ಸಮಿತಿ ಸದಸ್ಯ ತುಳಜಾ ರಾಮ್ ಎನ್.ಕೆ. ಮಾತನಾಡಿ, “ಸಾವಿತ್ರಿಬಾಯಿ ಫುಲೆ ಹಾಗೂ ಮಹಾತ್ಮ ಜ್ಯೋತಿಬಾ ಫುಲೆ ಅವರ ಹೋರಾಟದಿಂದ ಎಲ್ಲ ಜಾತಿ-ಲಿಂಗದ ಮಕ್ಕಳಿಗೆ ಶಿಕ್ಷಣದ ಬಾಗಿಲು ತೆರೆದಿದೆ. ಇಂತಹ ಮಹಾತ್ಮರ ದೇಶದಲ್ಲಿ ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚಲು ಬಿಡಬಾರದು” ಎಂದು ಹೇಳಿದರು.

ಬಾಳಗಮಟ್ಟಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಅಧ್ಯಕ್ಷ ಕಲ್ಲಪ್ಪ ಪಾಟೀಲ್‌ ಮಾತನಾಡಿ, “ಬಡ ಮಕ್ಕಳಿಗೆ ಶಿಕ್ಷಣ ಸಿಗಬೇಕಾದರೆ ಸರ್ಕಾರಿ ಶಾಲೆ ಊರಿನಲ್ಲೇ ಇರಬೇಕು. ಈ ಹೋರಾಟದಲ್ಲಿ ಕನ್ನಡ, ಮರಾಠಿ, ಉರ್ದು ಎಲ್ಲ ಭಾಷೆಯ ಜನರು ಒಂದಾಗಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದಿರಾ? ಬೆಳಗಾವಿ | ಕಪ್ಪಲಗುದ್ದಿಯಲ್ಲಿ 7ರಿಂದ 9ರವರೆಗೆ ಮೋಬೈಲ್ ಟಿವಿ ನಿರ್ಬಂಧ

ಸಮಾವೇಶದ ಅಧ್ಯಕ್ಷತೆಯನ್ನು ಎಐಡಿಎಸ್‌ಓ ಜಿಲ್ಲಾ ಸಂಚಾಲಕ ಮಹಾಂತೇಶ್ ಬಿಳೂರ್ ವಹಿಸಿಕೊಂಡಿದ್ದರು. ಹಿಂದುಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್‌ ಶಹಪುರಕ‌ರ್, ನಾಮದೇವ ತಳವಾರ್ ಸೇರಿದಂತೆ ವಿವಿಧ ಗ್ರಾಮಗಳ ಸಾರ್ವಜನಿಕ ಶಿಕ್ಷಣ ಸಮಿತಿ ನಾಯಕರು, ನೂರಾರು ವಿದ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಸಮಾವೇಶದಲ್ಲಿ ಭಾಗವಹಿಸಿದರು.

“ಬೆಳಗಾವಿಯ ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ” ಎಂಬ ಪ್ರತಿಜ್ಞೆಯೊಂದಿಗೆ ಸಮಾವೇಶವು ಜರುಗಿದ್ದು, ಜಿಲ್ಲೆಯಾದ್ಯಂತ ಹಳ್ಳಿಹಳ್ಳಿಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವ ಹೋರಾಟವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಸಂಕಲ್ಪವನ್ನು ಪೋಷಕರು ಪ್ರಕಟಿಸಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...