ಬೆಳಗಾವಿ : ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಲೆ ಮಾಡಿದ ಪೊಲೀಸ್ ಪೇದೆ

Date:

ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನೇ ಪೊಲೀಸಪ್ಪನೊಬ್ಬ ಕೊಲೆಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ.

ಪೋಲೀಸ್ ಪೇದೆ ಸಂತೋಷ್ ಕಾಂಬಳೆ (ಸವದತ್ತಿ) ತನ್ನ ಪತ್ನಿ ಕಾಶಮ್ಮ ನೆಲ್ಲಿಕಟ್ಟಿ (ಬಸ್ ಕಂಡಕ್ಟರ್, ಸವದತ್ತಿ ಡಿಪೋ) ಅವರನ್ನು ಕ್ರೂರವಾಗಿ ಹತ್ಯೆಮಾಡಿದ್ದಾನೆ.

ಮಾಹಿತಿಯ ಪ್ರಕಾರ, ಸುಮಾರು 13 ವರ್ಷಗಳ ಹಿಂದೆ ಪ್ರೇಮವಿವಾಹವಾದ ದಂಪತಿಗಳ ನಡುವೆ ಅಸಮಾಧಾನ ಹಾಗೂ ಸಂಶಯದ ಕಿಡಿ ಹೊತ್ತಿತ್ತು. ಪತಿ ಸಂತೋಷ್ ಹೆಂಡತಿಗೆ ನಿರಂತರ ಕಿರುಕುಳ ನೀಡುತ್ತಿದ್ದ, ಶಂಕೆ ಪಟ್ಟು ಹಲ್ಲೆ ಮಾಡುತ್ತಿದ್ದನೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂಸೆ ತಾಳಲಾರದೆ ಕಾಶಮ್ಮ ತವರು ಸೇರಿದ್ದು, ಬಳಿಕ ಸವದತ್ತಿಗೆ ವರ್ಗಾವಣೆ ಪಡೆದು ಕೆಲಸ ಮಾಡುತ್ತಿದ್ದರು. ವಿವಾಹ ಬದುಕಿಗೆ ತೆರೆ ಎಳೆಯುವ ಉದ್ದೇಶದಿಂದ ಬೈಲಹೊಂಗಲ ಕೋರ್ಟ್‌ನಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸಿ ಏಪ್ರಿಲ್ 5, 2025ರಂದು ಅಧಿಕೃತವಾಗಿ ವಿಚ್ಛೇದನ ಪಡೆದಿದ್ದರು.

ಆದರೂ ಕಾಶಮ್ಮನ ಬದುಕು ಶಾಂತವಾಗಲಿಲ್ಲ. ವಿಚ್ಛೇದನದ ಬಳಿಕವೂ ಸಂತೋಷ್ ಕರೆ ಮಾಡಿ ಬೈಯುವುದು, ಕೆಲಸದ ಸ್ಥಳಕ್ಕೆ ಬಂದು ಗಲಾಟೆ ಮಾಡುವುದು ಮುಂದುವರಿಸಿಕೊಂಡಿದ್ದ.

1000774251

ಅಕ್ಟೋಬರ್ 13ರ ರಾತ್ರಿ ಸುಮಾರು ಎಂಟು ಗಂಟೆಯ ವೇಳೆಗೆ ಸವದತ್ತಿಯ ರಾಮಸೈಟ್ ಪ್ರದೇಶದ ಬಾಡಿಗೆ ಮನೆಯಲ್ಲಿ ಗಲಾಟೆ ವೇಳೆ ಸಂತೋಷ್ ಕತ್ತಿಯಿಂದ ಪತ್ನಿಯ ಕತ್ತು ಹಾಗೂ ಹೊಟ್ಟೆ ಮೇಲೆ ಇರಿದು ಕೊಲೆಮಾಡಿ ಪರಾರಿಯಾಗಿದ್ದಾನೆ.

ಮೂರು ದಿನಗಳ ಬಳಿಕ ಮನೆಯಿಂದ ದುರ್ವಾಸನೆ ಹರಡಿದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ ಸವದತ್ತಿ ಪೊಲೀಸರು ಶವ ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಸ್ತುತ ಆರೋಪಿ ಪೊಲೀಸಪ್ಪ ಸಂತೋಷ್ ಕಾಂಬಳೆ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...