ಬೆಳಗಾವಿ | ಕಾಗವಾಡದಲ್ಲಿ ತಾಲೂಕು ಕಚೇರಿಗಳ ಸ್ಥಾಪನೆಗೆ ಅಧಿವೇಶನದಲ್ಲಿ ನಿರ್ಣಯ: ರಾಜು ಕಾಗೆ

Date:

ಬೆಳಗಾವಿ ಜಿಲ್ಲೆಯಲ್ಲಿ ಹೊಸ ತಾಲೂಕಾಗಿ ಕಾಗವಾಡ ರಚನೆಯಾಗಿ ಆರು ವರ್ಷಗಳು ಕಳೆದಿವೆ. ಆದರೂ, ಇನ್ನೂ ತಾಲೂಕು ಮಟ್ಟದ ಯಾವುದೇ ಕಚೇರಿಗಳು ಪ್ರಾರಂಭವಾಗಿಲ್ಲ. ಶೀಘ್ರವೇ ಕಚೇರಿಗಳನ್ನು ಸ್ಥಾಪಿಸುವಂತೆ ಒತ್ತಾಯಗಳು ಕೇಳಿಬಂದಿವೆ. ಈ  ಹಿನ್ನೆಲೆಯಲ್ಲಿ, ಕಚೇರಿಗಳನ್ನು ತೆರೆಯುವ ಕುರಿತು ಮುಂದಿನ ಚಳಿಗಾಲದ ಅಧಿವೇಶನದಲ್ಲಿ ನಿರ್ಣಯ ತೆಗೆದುಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸುತ್ತೇನೆ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ.

ಕಾಗವಾಡದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ, ತಾಲೂಕು ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತದ ಅಧಿಕಾರಿಗಳ ಜತೆ ಶಾಸಕ ರಾಜು ಕಾಗೆ ಸಭೆ ನಡೆಸಿದ್ದಾರೆ. “ಈ ಹಿಂದೆಯೂ ನಾನು ಶಾಸಕನಾಗಿದ್ದಾಗ ಕಾಗವಾಡ ತಾಲೂಕು ಘೋಷಣೆಯಾಗಿತ್ತು. ಪ್ರಸ್ತುತ ಮತ್ತೆ ನಾನು ಶಾಸಕನಾಗಿದ್ದೇನೆ. ಮುಂದಿನ ದಿನಗಳಲ್ಲಿ ವಿವಿಧ ಸಂಘಟನೆಗಳ ಮುಖಂಡರ ನಿಯೋಗದೊಂದಿಗೆ ಮುಖ್ಯಮಂತ್ರಿ, ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡುತ್ತೇನೆ. ತಾಲೂಕು ಮಟ್ಟದ ಕಚೇರಿಗಳನ್ನು ತೆರೆಯಲು ನಿರ್ಣಯ ತೆಗೆದುಕೊಳ್ಳುವಂತೆ ತಿಳಿಸುತ್ತೇನೆ” ಎಂದು ಹೇಳಿದ್ದಾರೆ.

ಸಭೆಯಲ್ಲಿ ತಹಶೀಲ್ದಾರ್‌ ರಾಜೇಶ ಬುರ್ಲಿ, ಸಂಜೀವಕುಮಾರ್‌ ಸದಲಗೆ, ಮಹಾಂತೇಶ ಕವಲಾಪುರ, ಸುನೀಲ ಬಬಲಾದಿ, ಎಂ.ಎಸ್‌.ಪೂಜಾರಿ,ಪ್ರವೀಣ ಪಾಟೀಲ, ಎಂ.ಆರ್.ಮುಂಜೆ, ಕೆ.ಕೆ.ಗಾವಡೆ, ಕರವೇ ಸಂಘಟನೆಯ ಸಿದ್ದು ಒಡೆಯರ, ನ್ಯಾಯವಾದಿಗಳ ಸಂಘದ ಎಸ್‌.ಆರ್.ನಿಂಬಾಳಕರ, ಅಮರ ಕಮತೆ, ಬಿ.ಜಿ.ಮೋಳೆ ಸೇರಿದಂತೆ ಅನೇಕರು ಉಪಸ್ದಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...