ಬೆಳಗಾವಿ : ರೈಲು ಯೋಜನೆಗಳ ಪರಿಶೀಲನೆ: ಸಂಸದ ಶೆಟ್ಟರ್ ಅಧಿಕಾರಿಗಳೊಂದಿಗೆ ಚರ್ಚೆ

Date:

ನೈರುತ್ಯ ರೈಲ್ವೆ ವಲಯದ ಮಹಾ ಪ್ರಬಂಧಕರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರು ಸೋಮವಾರ ಸಭೆ ನಡೆಸಿ, ತಮ್ಮ ಕ್ಷೇತ್ರದ ವಿವಿಧ ರೈಲ್ವೆ ಯೋಜನೆಗಳ ಪ್ರಗತಿ ಕುರಿತು ವಿವರವಾಗಿ ಮಾಹಿತಿ ಪಡೆದರು.

ಪ್ರಸ್ತಾಪಿತ ಬೆಳಗಾವಿ- ಕಿತ್ತೂರು -ಧಾರವಾಡ ನೂತನ ರೈಲು ಮಾರ್ಗದ ಕುರಿತು ಅಧಿಕಾರಿಗಳು, ಧಾರವಾಡ ಸಮೀಪ 16 ಎಕರೆ ಜಮೀನು ಹೊರತುಪಡಿಸಿ ಅಗತ್ಯವಿರುವ ಭೂ ಸಮೀಕ್ಷೆ ಪೂರ್ಣಗೊಂಡಿದೆ. ರಾಜ್ಯ ಸರ್ಕಾರದಿಂದ ಭೂಮಿ ಹಸ್ತಾಂತರವಾದ ತಕ್ಷಣ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುತ್ತದೆ, ಎಂದು ತಿಳಿಸಿದ್ದಾರೆ. ಭೂಮಿ ಹಸ್ತಾಂತರದ ವಿಷಯದಲ್ಲಿ ರಾಜ್ಯ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಸಂಸದರು ಹೇಳಿದರು.

ಲೋಕಾಪುರ–ರಾಮದುರ್ಗ–ಸವದತ್ತಿ–ಧಾರವಾಡ ನೂತನ ರೈಲು ಮಾರ್ಗದ ಪೂರ್ವ ಸಮೀಕ್ಷೆ ಅನುಮೋದನೆಗಾಗಿ ರೈಲ್ವೆ ಮಂಡಳಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕೆಂದು ಶೆಟ್ಟರ್ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿ ನಗರದಲ್ಲಿನ ಲೆವಲ್ ಕ್ರಾಸಿಂಗ್ 381 ಬಳಿ ಎರಡನೇ ಲೈನ್ ಕಾಮಗಾರಿ ಗತಿ ತುಂಬ ನಿಧಾನವಾಗಿದೆ ಎಂದು ಅವರು ಗಮನ ಸೆಳೆದರು. ವಾಹನ ಸಂಚಾರ ಮಾರ್ಗ ಬದಲಾವಣೆಗಾಗಿ ಅಗತ್ಯ ಪರವಾನಗಿಗಳನ್ನು ಪೊಲೀಸರಿಂದ ಪಡೆಯಲು ಸೂಚಿಸಿದ ಅವರು, ಸ್ಥಳನ್ನು ಭೇಟಿ ಮಾಡಿ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ರೈಲ್ವೆ ಮಹಾಪ್ರಬಂಧಕ ಮುಕುಲ್ ಸರನ್ ಮಾಥರ್ ಅವರಿಗೆ ತಿಳಿಸಿದರು.

ಅಮೃತ ಸ್ಟೇಶನ್ ಯೋಜನೆ ಅಡಿಯಲ್ಲಿ ಬೆಳಗಾವಿ ರೈಲು ನಿಲ್ದಾಣದ ಅಭಿವೃದ್ಧಿ ಆಮೆಗಳ ಹೆಜ್ಜೆಯಲ್ಲಿ ಸಾಗುತ್ತಿರುವುದನ್ನು ಸಂಸದರು ತೀವ್ರವಾಗಿ ಎತ್ತಿಹಿಡಿದರು. ಲಿಫ್ಟ್, ಎಲಿವೇಟರ್, ಫುಟ್ ಓವರ್ ಬ್ರಿಡ್ಜ್ ಸೇರಿದಂತೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಿದರು. ಘಟಪ್ರಭಾ ನಿಲ್ದಾಣದ ಫುಟ್ ಓವರ್ ಬ್ರಿಡ್ಜ್ ಕಾಮಗಾರಿಯನ್ನೂ ವೇಗಗೊಳಿಸುವಂತೆ ಒತ್ತಾಯಿಸಿದರು.

ಇದೇ ವೇಳೆ ಬೆಳಗಾವಿ–ಮಣಗೂರ, ಬೆಳಗಾವಿ–ಮಡಗಾಂವ್–ಉಡುಪಿ–ಮಂಗಳೂರು, ಬೆಳಗಾವಿ–ಚೆನ್ನೈ (ತಿರುಪತಿ ಮಾರ್ಗವಾಗಿ) ಹೊಸ ರೈಲುಗಳ ಪ್ರಾರಂಭಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಬೆಳಗಾವಿ–ಬೆಂಗಳೂರು ವಂದೇ ಭಾರತ ರೈಲು ಬೆಳಿಗ್ಗೆ 6 ಗಂಟೆಗೆ ಬೆಳಗಾವಿಯಿಂದಲೇ ಆರಂಭವಾಗುವಂತೆ ಹಾಗೂ ಹುಬ್ಬಳ್ಳಿ–ಬೆಳಗಾವಿ–ಪುಣೆ ವಂದೇ ಭಾರತ ರೈಲು ವಾರದ ಎಲ್ಲ ದಿನ ಸಂಚರಿಸುವಂತೆ ವ್ಯವಸ್ಥೆ ಮಾಡುವಂತೆ ಸಂಸದರು ಅಧಿಕಾರಿಗಳನ್ನು ಸೂಚಿಸಿದರು.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...