ರಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಕರಿಸಿದ್ದೇಶ್ವರ ಜಾತ್ರೆ ಭಕ್ತರ ಸಂಭ್ರಮದಿಂದ ಕಂಗೊಳಿಸುತ್ತಿದೆ.
ರವಿವಾರ ಜಾತ್ರೆಯ ಪ್ರಮುಖ ಕಾರ್ಯಕ್ರಮಗಳು ನಡೆಯಲಿದ್ದು, ಬೆಳಿಗ್ಗೆ 10 ಗಂಟೆಯಿಂದ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದೆ. ಸಂಜೆ 5 ಗಂಟೆಯ ನಂತರ ಭಕ್ತರಿಗೆ ಮಹಾ ಪ್ರಸಾದ ವಿತರಣೆ ಮಾಡಲಾಗುತ್ತದೆ. ರಾತ್ರಿ 9 ಗಂಟೆಗೆ ಜಿದ್ದು-ಜಿದ್ದಿನ ಡೊಳ್ಳಿನ ಪದಗಳು ಜಾತ್ರೆಯ ವಿಶೇಷ ಆಕರ್ಷಣೆಯಾಗಲಿದೆ.
ಇನ್ನು ಮಾರ್ಚ್ 23ರಂದು (ಸೋಮವಾರ) ಭಂಡಾರ ಒಡೆಯುವ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 10 ಗಂಟೆಗೆ “ದಿಲ್ಲಿ ಹೊಕ್ಕ ಪುಂಡ ಹುಲಿ” ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.
ಸಾಲಾಪೂರ ಗ್ರಾಮವು ಬೆಳಗಾವಿ ಜಿಲ್ಲೆ ವ್ಯಾಪ್ತಿಯ ರಾಮದುರ್ಗ ತಾಲೂಕುನಲ್ಲಿ ಇರುವ ಪ್ರಮುಖ ಗ್ರಾಮವಾಗಿದ್ದು, ಇಲ್ಲಿ ನಡೆಯುವ ಜಾತ್ರೆಗಳು ಭಕ್ತರ ದೊಡ್ಡ ಸಮಾಗಮವನ್ನು ಸೆಳೆಯುತ್ತವೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ರೈತರಿಗೆ ಕಬ್ಬಿನ ಬಿಲ್ ಪಾವತಿಸದ ಸಕ್ಕರೆ ಕಾರ್ಖಾನೆಗಳ ಮೇಲೆ ಸರ್ಕಾರಕ್ಕೆ ಯಾಕಷ್ಟು ಪ್ರೀತಿ?
ಈ ಕುರಿತು ಶ್ರೀ ಕರಿಸಿದ್ದೇಶ್ವರ ಜಾತ್ರಾ ಸಮಿತಿ ಪ್ರಕಟಣೆ ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವಂತೆ ಮನವಿ ಮಾಡಿದೆ.




