ಬೆಳಗಾವಿ | ಸವದತ್ತಿ ಯಲ್ಲಮ್ಮ ಕ್ಷೇತ್ರ ಅಭಿವೃದ್ಧಿ: ₹213 ಕೋಟಿ ಕಾಮಗಾರಿಗೆ ಶೀಘ್ರವೇ ಮುಖ್ಯಮಂತ್ರಿಗಳಿಂದ ಭೂಮಿಪೂಜೆ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರವು ದೇವಸ್ಥಾನ ಪ್ರಾಧಿಕಾರ, ಯುಜಿಡಿ, ನಗರಸಭೆ, ಮನೆ ಮನೆಗೆ ಕುಡಿಯುವ ನೀರು ಸೇರಿದಂತೆ ಹತ್ತು ಹಲವು ಮೂಲಭೂತ ಸೌಲಭ್ಯಗಳೊಂದಿಗೆ ಅಭಿವೃದ್ಧಿಯತ್ತ ವೇಗವಾಗಿ ಮುನ್ನಡೆಯುತ್ತಿದ್ದು, ಇತಿಹಾಸ ಪುಟದಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವಂತಹ ಪ್ರಗತಿ ಕಂಡಿದೆ ಎಂದು ಶಾಸಕ ವಿಶ್ವಾಸ್‌ ವೈದ್ಯ ಹೇಳಿದರು.

ನಗರದ ಎಸ್‌.ಕೆ. ಹೈಸ್ಕೂಲ್ ಮೈದಾನದಲ್ಲಿ ಸೋಮವಾರ ಜರುಗಿದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

₹213 ಕೋಟಿ ಅನುದಾನದ ಯಲ್ಲಮ್ಮ ದೇವಸ್ಥಾನದ ವಿವಿಧ ಕಾಮಗಾರಿಗಳಿಗೆ ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೂಮಿಪೂಜೆ ನೆರವೇರಿಸಲಿದ್ದಾರೆ. ಕ್ಷೇತ್ರಕ್ಕೆ ಪ್ರತ್ಯೇಕ ಆರ್‌ಟಿಒ ಕಚೇರಿ, ಯರಗಟ್ಟಿಗೆ ಪೊಲೀಸ್ ಠಾಣೆ, ₹41 ಕೋಟಿ ವೆಚ್ಚದಲ್ಲಿ ನೂರು ಹಾಸಿಗೆಯ ಸೌಲಭ್ಯವಿರುವ ಸುಸಜ್ಜಿತ ತಾಲ್ಲೂಕು ಆಸ್ಪತ್ರೆ ನಿರ್ಮಾಣ, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸವ`ಗಾಯ ಆಸ್ಪತ್ರೆಗಳನ್ನಾಗಿಸುವುದು a V ಅಗತ್ಯ ಸ್ಥಳಗಳಲ್ಲಿ ಹೊಸ ಪಿಎಚ್‌ಸಿಗಳನ್ನು ತೆರೆಯುವ ಯೋಜನೆಗಳಿವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸವದತ್ತಿಯ ಉಪವಿದ್ಯುತ್‌ ಕೇಂದ್ರವನ್ನು ಹೆಸ್ಕಾಂ ವಿಭಾಗವಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದರು.

ತಹಶೀಲ್ದಾರ ಎಂ.ಎನ್. ಹೆಗ್ಗನ್ನವರ, ಬಿಇಒ ಎ.ಎ. ಖಾಜಿ ಮಾತನಾಡಿದರು. ಪಿಎಸ್‌ಐ ಲಕ್ಷ್ಮಣ ಗೋಡಿ ನೇತೃತ್ವದಲ್ಲಿ ಪೊಲೀಸ್‌, ಗೃಹರಕ್ಷಕದಳ, ಎನ್‌ಸಿಸಿ, ಸೌಟ್ಸ್ ಮತ್ತು ಗೈಡ್ಸ್ ದಳಗಳಿಂದ ಶಾಸಕ ವಿಶ್ವಾಸ್ ವೈದ್ಯ ಗೌರವ ರಕ್ಷೆ ಸ್ವೀಕರಿಸಿದರು.

ವಿವಿಧ ಶಾಲೆಗಳ ವಿದ್ಯಾರ್ಥಿಗಳು ದೇಶಾಭಿಮಾನದ ರೂಪಕಗಳನ್ನು ಪ್ರದರ್ಶಿಸಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ₹50 ಸಾವಿರ ನಗದು ನೀಡಿ ಸನ್ಮಾನಿಸಲಾಯಿತು. ಕೃಷಿ, ಕುಸ್ತಿ, ಕರಾಟೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು.

ಅಶ್ವಥ್‌ ವೈದ್ಯ, ಪೌರಾಯುಕ್ತ ಸಂಗನಬಸಯ್ಯ, ಪಿಐ ಸುರೇಶ್ ಬೆಂಡೆಗುಂಬಳ, ಇಒ ಆನಂದ ಬಡಕುಂದ್ರಿ, ಶಿವಕುಮಾರ ರಾಠೋಡ, ಜಗದೀಶ ಶಿರಸಂಗಿ, ಪ್ರವೀಣ ರಾಮಪ್ಪನವರ, ಶಿವಾನಂದ ಪಟ್ಟಣಶೆಟ್ಟಿ, ಕ| `ಜೇರ, ಕಿರಣ ಕುರಿ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...