ಬೆಳಗಾವಿ ಅಧಿವೇಶನ | ಶಾಸಕರ ವಾಸ್ತವ್ಯಕ್ಕಾಗಿ 300 ಕೋಟಿ ರೂ. ವೆಚ್ಚದಲ್ಲಿ ಹೋಟೆಲ್ ನಿರ್ಮಾಣ

Date:

ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ವೇಳೆ ಶಾಸಕರ ವಾಸ್ತವ್ಯಕ್ಕಾಗಿ ಬೆಳಗಾವಿಯಲ್ಲಿ ಪಂಚತಾರಾ ಹೋಟೆಲ್ ನಿರ್ಮಿಸಲು ಸರ್ಕಾರ ಮುಂದಾಗಿದೆ. ಸುವರ್ಣಸೌಧದ ಸಮೀಪದ ಸರ್ಕಾರಿ ಜಾಗದಲ್ಲಿ 300 ಕೋಟಿ ರೂ. ವೆಚ್ಚದಲ್ಲಿ ಹೋಟೆಲ್ ನಿರ್ಮಾಣವಾಗಲಿದೆ ಎಂದು ವರದಿಯಾಗಿದೆ.

ಪ್ರತಿವರ್ಷ ಬೆಳಗಾವಿ ಅಧಿವೇಶನದ ವೇಳೆ ಶಾಸಕರ ವಾಸ್ತವ್ಯಕ್ಕಾಗಿ ಕೋಟಿಗಟ್ಟಲೆ ಹಣ ವೆಚ್ಚವಾಗುತ್ತದೆ. ಆ ವೆಚ್ಚವನ್ನು ತಗ್ಗಿಸಲು ಪಂಚತಾರಾ ಹೋಟೆಲ್ ನಿರ್ಮಾಣ ಮಾಡಲು ಸರ್ಕಾರ ಮುಂದಾಗಿದೆ.

2018ರಿಂದ ಇಲ್ಲಿಯವರೆಗೆ ಬೆಳಗಾವಿಯಲ್ಲಿ ನಡೆದಿರುವ ಅಧಿವೇಶನಕ್ಕೆ ನೂರಾರು ಕೋಟಿ ರೂ. ವೆಚ್ಚವಾಗಿದೆ. ಕಳೆದ ವರ್ಷ ಸುಮಾರು 37 ಕೋಟಿ ರೂ. ವೆಚ್ಚವಾಗಿತ್ತು.‌ ಈ ವರ್ಷ 40 ಕೋಟಿ ರೂ. ವೆಚ್ಚವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ದಿನ ಕಳೆದಂತೆ ಬೆಲೆ ಏರಿಕೆಯಿಂದಾಗಿ ಅಧಿವೇಶನದ ವೆಚ್ಚವೂ ಹೆಚ್ಚುತ್ತಿದೆ. ಹೀಗಾಗಿ, ಬೆಳಗಾವಿಯಲ್ಲಿ ಹೋಟೆಲ್ ನಿರ್ಮಿಸುವುದರಿಂದ ಶಾಸಕರ ವಾಸ್ತವ್ಯದ ವೆಚ್ಚವನ್ನು ತಗ್ಗಿಸಬಹುದು ಎಂದು ಸರ್ಕಾರ ಭಾವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿವೇಶನದ ವೇಳೆ ಶಾಸಕರು, ಅದಿಕಾರಿಗಳು, ಸಿಬ್ಬದಿಗಳಿಗಾಗಿ ಸುಮಾರು 2,000 ಹೋಟೆಲ್‌ ಕೊಠಡಿಗಳು ಬೇಕಾಗುತ್ತವೆ ಎಂದು ಹೇಳಲಾಗಿದೆ. ಅದಕ್ಕಾಗಿ, ಬೆಳಗಾವಿಯ ಎಲ್ಲ ಹೊಟೇಲ್ ಹಾಗೂ ರೆಸಾರ್ಟ್​ಗಳನ್ನು ಶಾಸಕರು ಮತ್ತು ಅಧಿಕಾರಿಗಳ ವಾಸ್ತವ್ಯಕ್ಕಾಗಿ ಜಿಲ್ಲಾಡಳಿತ ವಶಕ್ಕೆ ಪಡೆಯುತ್ತದೆ. ಆ ಎಲ್ಲ ವಾಸ್ತವ್ಯಗಳಿಗೂ ಬಾಡಿಗೆ ಭರಿಸುತ್ತದೆ.

2022ರಲ್ಲಿ ಬೆಳಗಾವಿಯ ಸುಮಾರು 80 ಹೊಟೇಲ್​ಗಳನ್ನು ವಾಸ್ತವ್ಯಕ್ಕಾಗಿ ಬಳಸಲಾಗಿತ್ತು. ಅವುಗಳಲ್ಲಿ 67 ಐಷಾರಾಮಿ ಹೊಟೇಲ್​ಗಳಿದ್ದವು. ಸರ್ಕಾರವು ಅಧಿವೇಶನದ ವೇಳೆ ಒಬ್ಬ ಶಾಸಕನಿಗೆ ಸರಾಸರಿ ಸುಮಾರು 10-12 ಲಕ್ಷ ರೂ. ಖರ್ಚು ಮಾಡುತ್ತದೆ ಎಂದು ತಿಳಿದುಬಂದಿದೆ.

“ಸುವರ್ಣಸೌಧದ ಬಳಿಯ 10 ಎಕರೆ ಸರ್ಕಾರಿ ಭೂಮಿಯಲ್ಲಿ ಹೋಟೆಲ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ. ಪಿಪಿಪಿ (ಖಾಸಗಿ-ಸರ್ಕಾರಿ ಸಹಭಾಗಿತ್ವ) ಮಾದರಿಯಲ್ಲ ಹೋಟೆಲ್ ನಿರ್ಮಾಣವಾಗಲಿದೆ. ಭೂಮಿ ಸರ್ಕಾರದ್ದಾಗಿದ್ದು, ಖಾಸಗಿ ಕಂಪನಿ ಹೋಟೆಲ್ ನಿರ್ಮಾಣ ಮಾಡಲಿದೆ. 30 ವರ್ಷಗಳ ಕಾಲ ಖಾಸಗಿಯವರಿಗೆ ಹೋಟೆಲ್‌ಅನ್ನು ಗುತ್ತಿಗೆ ನೀಡಲಾಗುತ್ತದೆ. ಅಧಿವೇಶನ ವೇಳೆ ಹೊಟೇಲ್‌ಅನ್ನು ಶಾಸಕರು, ಅಧಿಕಾರಿಗಳು, ಗಣ್ಯರ ವಾಸ್ತವ್ಯಕ್ಕಾಗಿ ಸೀಮಿತಗೊಳಿಸಲಾಗುತ್ತದೆ. ಉಳಿದ ದಿನಗಳಲ್ಲಿ ಸಾರ್ವಜನಿಕ ಬಳಕೆಗೆ ಲಭ್ಯವಾಗಿರುತ್ತದೆ” ಎಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...