ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯ ಯಾಸಿನ್ ಮಕಾನಾದಾರ್ ಹಾಗೂ ಸಮೀರ ತಾಂಬಡಿ ಅವರು ಬೆಳಗಾವಿ ನಗರದ ಉರ್ದು ಶಾಲೆಯ 30 ಬಡ ವಿದ್ಯಾರ್ಥಿಗಳಿಗೆ ಚಳಿಗಾಲದ ಹಿನ್ನೆಲೆಯಲ್ಲಿ ಶೂಟರ್ಗಳನ್ನು ವಿತರಿಸಿದರು.
ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯು ಬೆಳಗಾವಿ ನಗರದಲ್ಲಿ ಅನೇಕ ಸಾಮಾಜಿಕ ಹಾಗೂ ಮಾನವೀಯ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಪ್ರವಾಹದ ಸಂದರ್ಭಗಳಲ್ಲಿ ಹಿಂದೂ ಮುಸ್ಲಿಮ್ ಭೇದಭಾವ ಮಾಡದೆ ಕ ಆಹಾರದ ದಿನಸಿ ಕಿಟ್ ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಿದೆ. ಅಲ್ಲದೆ ಸಾಯಿ ನಗರದಲ್ಲಿ ಎರಡು ಬಡ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಸಹಾಯ ಮಾಡಿದೆ.
ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿಯ ಸಮಾಜ ಸೇವೆಯನ್ನು ಸಾರ್ವಜನಿಕರು ಮೆಚ್ಚಿಕೊಂಡಿದ್ದಾರೆ.





