ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಸುಕ್ಷೇತ್ರ ಯಲ್ಲಮ್ಮವಾಡಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತವಾಗಿದೆ. ಮಳೆಯಿಂದ ಹಳ್ಳ ಉಕ್ಕಿ ಹರಿದು ದೇವಾಲಯಕ್ಕೆ ಸಂಪೂರ್ಣ ಮುಳುಗಿದೆ.
ಗಡಿನಾಡಿನ ಶಕ್ತಿ ದೇವತೆಯಾದ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಮೂಲ ವಿಗ್ರಹ ಅರ್ಧದಷ್ಟು ನೀರಿನಲ್ಲಿ ಮುಳುಗಿದ್ದು, ಪ್ರವಾಹದ ಮಧ್ಯದಲ್ಲೇ ಭಕ್ತರು ದರ್ಶನ ಪಡೆಯುತ್ತಿರುವ ದೃಶ್ಯ ಕಣ್ಣಿಗೆ ಬೀಳುತ್ತಿದೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಕೇವಲ 500 ರೂ ವಿಚಾರಕ್ಕೆ ಒಂದು ಜೀವವನ್ನೆ ಬಲಿ ಪಡೆದರು
ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ, ಸ್ಥಳೀಯ ಆಡಳಿತ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.





