ರಜೆಗೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಗುರುವಾರ ಖಾನಾಪುರ ತಾಲೂಕಿನ ಇದ್ದಿಲುಹೊಂಡ ಗ್ರಾಮದ ಬಳಿ ನಡೆದಿದೆ.
ಸೌರಬ್ ದೌಪದಕರ್ (28) ಮೃತ ದುರ್ದೈವಿ. ಖಾನಾಪುರ – ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ವೇಗವಾಗಿ ಚಲಿಸುತ್ತಿದ್ದ ಬೈಕ್ ನಿಂದ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದಾನೆ.
ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ಸಿಬ್ಬಂದಿಗಳು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ





