ಬೆಳಗಾವಿ : ಮಾನವೀಯತೆ ಮರೆತು ರೋಗಿಯನ್ನು ಚಳಿಯಲ್ಲಿ ಬಿಟ್ಟು ಹೋದ ಸಿಬ್ಬಂದಿ

Date:

ಮಾನವೀಯತೆ, ಕರುಣೆ ಎನ್ನುವುದು ಆಸ್ಪತ್ರೆಯ ಆವರಣದಲ್ಲಿ ಮರೆತುಹೋದಂತಾಗಿದೆ. ಬೆಳಗಾವಿ ಬಿಮ್ಸ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಬಂದಿದ್ದ ಮಹಿಳಾ ರೋಗಿಯನ್ನು ಸಿಬ್ಬಂದಿ ಚಳಿಯಲ್ಲಿ, ಬಿಟ್ಟುಹೋದ ಹೃದಯವಿದ್ರಾವಕ ಘಟನೆ ನಡೆದಿದೆ.

15 ದಿನಗಳ ಹಿಂದೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಆ ಮಹಿಳೆ ಮತ್ತೆ ಶಸ್ತ್ರಚಿಕಿತ್ಸೆಗೆ ಬಂದಿದ್ದರು. ವಾರ್ಡ್‌ನಿಂದ ಹಳೆಯ ಕಟ್ಟಡದಲ್ಲಿರುವ ಕಾಲು ಮುರಿತ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ಕರೆದೊಯ್ಯುವ ವೇಳೆ ಆಂಬ್ಯುಲೆನ್ಸ್ ಸಿದ್ಧಪಡಿಸದೆ ಸಿಬ್ಬಂದಿ ಮಹಿಳಾ ರೋಗಿಯನ್ನು ಹೊರಗೆ ಬಿಟ್ಟು ಹೋಗಿದ್ದಾರೆ.

ಅರ್ಧ ಗಂಟೆಗೂ ಹೆಚ್ಚು ಕಾಲ ತೊಂದರೆ ಅನುಭವಿಸಿ, ಚಳಿಯಲ್ಲಿ ಪರದಾಡುತ್ತಿದ್ದ ಆ ರೋಗಿಯನ್ನು ನಂತರದಲ್ಲಿ ಮಳೆಯಲ್ಲಿಯೇ ಆಂಬ್ಯುಲೆನ್ಸ್‌ನಲ್ಲಿ ಹಾಕಿ ಶಿಫ್ಟ್ ಮಾಡಲಾಯಿತು. ಈ ದೃಶ್ಯವನ್ನು ಕಂಡ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ಆಸ್ಪತ್ರೆಯಲ್ಲಿ ಕರುಣೆ ಸತ್ತುಹೋಯಿತೇ?” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಬಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ಅಶೋಕ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, “ಘಟನೆ ಗಂಭೀರವಾಗಿದೆ. ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದ್ದಾರೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...