ಬೆಳಗಾವಿ | ಒಂದೇ ಕುಟುಂಬ ಮೂವರು ಆತ್ಮಹತ್ಯೆ; ಸಾವಿನ ಕಾರಣ ಬಿಚ್ಚಿಟ್ಟ ಡೆತ್‌ನೋಟ್!

Date:

ಆ ಮನೆಯ ಬಾಗಿಲು ತೆರೆದಾಗ ಹಬ್ಬಿದ ವಿಷದ ವಾಸನೆ… ನೆಲದಲ್ಲಿ ಬಿದ್ದಿದ್ದ ಮೂರು ಶವಗಳು… ಕತ್ತಲೆಯಲ್ಲಿ ತೀವ್ರ ನಿಶ್ಯಬ್ಧತೆಯ ನಡುವೆ ಮರಣದ ಮೌನದ ಧ್ವನಿ! ಮರಾಠಿ ಭಾಷೆಯ ಕಾಗದ ಸಾವಿನ ಕಾರಣವನ್ನು ಹೇಳಿದೆ.

ಬೆಳಗಾವಿ ನಗರದ ಶಹಾಪುರದ ಜೋಶಿ ಮಾಳ ಪ್ರದೇಶದಲ್ಲಿ ಒಂದೇ ಕುಟುಂಬದ ಮೂವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳದಲ್ಲಿ ಡೆತ್‌ನೋಟ್‌ ಪತ್ತೆಯಾಗಿದೆ. ತನ್ನಿಂದ ಅರ್ಧ ಕೆ.ಜಿ ಚಿನ್ನ ಪಡೆದು ಮರಳಿ ಕೊಡದೇ ಚಿನ್ನದ ವ್ಯಾಪಾರಿ ಮೋಸ ಮಾಡಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ.

ಮಂಗಳಾ ಕುರಡೇಕರ್ (70) ಇವರ ಪುತ್ರ ಸಂತೋಷ (44), ಪುತ್ರಿ ಸುವರ್ಣ (42) ಮೃತಪಟ್ಟವರು. ಇನ್ನೊಬ್ಬ ಪುತ್ರಿ ಸುನಂದಾ (40) ಅವರೂ ವಿಷ ಸೇವಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಿಗ್ಗೆ 9ರ ಸುಮಾರಿಗೆ ವಿಷ ಸೇವಿಸಿದ್ದು. ಅದಕ್ಕೂ ಮುನ್ನ ಸಂತೋಷ ಅವರು ವಿಷ ಕುಡಿದು ಸಾಯೋಣ ಎಂದು ಹೆಣ್ಣುಮಕ್ಕಳಿಗೆ ಎರಡು ತಾಸು ಮನವರಿಕೆ ಮಾಡಿ ಮೊದಲು ತಾಯಿ, ತಂಗಿಗೆ ವಿಷ ಕೊಟ್ಟು ತಾವೂ ಕುಡಿದರು. ಸುನಂದಾ ಕುಡಿಯಲು ಹಿಂಜರಿದರು. ಮೂವರೂ ಒದ್ದಾಡಿ ಸತ್ತ ಮೇಲೆ ತಾನು ಬದುಕಿದ್ದು ಏನು ಮಾಡುವುದು ಎಂಬ ಭಯದಿಂದ ಅವರೂ ವಿಷ ಕುಡಿದದ್ದಾಗಿ ಸುನಂದಾ ಹೇಳಿಕೆ ನೀಡಿದ್ದಾರೆ.

ಶವಗಳ ಮುಂದೆ ಸುನಂದಾ ಗೋಳಾಡುವುದನ್ನು ಕೇಳಿ ಅಕ್ಕಪಕ್ಕದವರು ಬಂದರು. ಅದರ ವಿಡಿಯೊ ಮಾಡಿದ ನಂತರ ಪೊಲೀಸರಿಗೆ ಮಾಹಿತಿ ನೀಡಿದರು. ಅಷ್ಟರಲ್ಲಿ ನಿತ್ರಾಣಗೊಂಡ ಸುನಂದಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಸಂತೋಷ ಅವರು ‘ಚಿನ್ನದ ಚೀಟಿ’ ವ್ಯವಹಾರ ಮಾಡುತ್ತಿದ್ದರು. ಅದರಲ್ಲಿ ಉಂಟಾದ ಮೋಸವೇ ಸಾವಿಗೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ ಎಂದು ಸ್ಥಳ ಮಹಜರು ಮಾಡಿದ ಶಹಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ ಜೇಬಿನಲ್ಲಿ ಮರಾಠಿಯಲ್ಲಿ ಬರೆದ ಡೆತ್‌ನೋಟ್ ಪತ್ತೆಯಾಗಿದೆ ಅದರಲ್ಲಿ ಮಾನವೀಯ ಮೋಸದ ಕಪ್ಪು ಅಂಗಳವನ್ನು ಬಿಚ್ಚಿಡುವ ಅಕ್ಷರಗಳಿವೆ.

1000251253

‘ನಾನು ಬಹಳಷ್ಟು ಜನರ ಬಳಿ ಗೋಲ್ಡ್ ಚೀಟಿ (ಚಿಟ್ ಫಂಡ್ ಮಾದರಿ) ಮಾಡುತ್ತಿದ್ದೆ. ಹಲವರು ಹಣ ಹೂಡಿದ್ದರು. ವಡಗಾವಿಯ ಚಿನ್ನದ ವ್ಯಾಪಾರಿ ರಾಜು ಕುಡತರಕರ್ ಅವರಿಗೆ ಅರ್ಧ ಕೆ.ಜಿ (500 ಗ್ರಾಂ) ಚಿನ್ನ ಕೊಟ್ಟಿದ್ದೇನೆ. ಬೇರೆ ಬೇರೆ ರೀತಿಯ ಚಿನ್ನಾಭರಣ ಮಾಡಿ ಕೊಡುತ್ತೇನೆ ಅಂದಿದ್ದರು. ಮರಳಿ ಕೇಳಿದರೆ ರಾಜು ಹಾಗೂ ಅವರ ಪತ್ನಿ ನನ್ನ ಚಿನ್ನವನ್ನು ಕೊಡುತ್ತಿಲ್ಲ. ಜೀವ ಬೆದರಿಕೆ ಹಾಕುತ್ತಿದ್ದಾರೆ. ಅಲ್ಲದೇ, ಚಿನ್ನವನ್ನು ನಾನೇ ಎತ್ತಿಕೊಂಡು ಊರು ಬಿಟ್ಟು ಹೋಗಿದ್ದೇನೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇನ್ನೊಂದೆಡೆ ಹಣ ಹೂಡಿದ ಜನರೂ ಪದೇಪದೇ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಮನ ನೊಂದು ನಾವು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ಪೊಲೀಸರು ರಾಜು ಕುಡತರಕರ ಅವರಿಂದ ಚಿನ್ನವನ್ನು ಪಡೆದುಕೊಂಡು, ನಾನು ಕೊಡಬೇಕಾದ ಹಣ ಜನರಿಗೆ ನೀಡಬೇಕು. ರಾಜುಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಈ ಮೂವರ ಸಾವಿನಿಂದ ಸಮಾಜದ ಮೌನದ ಕ್ರೂರ ಹತ್ಯೆಯಾದಂತಾಗಿದೆ.

ನಿಮ್ಮ ನೋವು ಎಷ್ಟು ತೀವ್ರವಿದೆಯೋ ನಮಗೆ ಗೊತ್ತಿಲ್ಲ, ಆದರೆ ನಿಮ್ಮ ಅಸ್ತಿತ್ವ ಅನೇಕರ ಬದುಕಿಗೆ ಬೆಳಕಾಗಬೇಕು.
ಸಮಸ್ಯೆಗಳು ಕ್ಷಣಿಕ – ಆದರೆ ನೀವು ಶಾಶ್ವತ. ಒಂದು ತಪ್ಪು ನಿರ್ಧಾರ ನಿಮ್ಮ ಪ್ರೀತಿಪಾತ್ರರ ಹೃದಯವನ್ನೇ ಭಂಗಗೊಳಿಸುತ್ತದೆ ಆತ್ಮಹತ್ಯೆ ಸಮಸ್ಯೆಗಳಿಗೆ ಪರಿಹಾರವಲ್ಲ.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಹುಲಿ ಪ್ರತ್ಯಕ್ಷ ಡಂಗೂರದ ಮೂಲಕ ಜನರಿಗೆ ಎಚ್ಚರಿಕೆ

ಮೋಸ, ನಂಬಿಕೆಯ ದ್ರೋಹ, ಅಪಮಾನ – ಈ ಎಲ್ಲವನ್ನೂ ಹಿಮ್ಮೆಟ್ಟಿಸಬಲ್ಲ ಶಕ್ತಿ ನಮ್ಮೊಳಗಿದೆ ಎಂಬುದನ್ನು ಸಮಾಜವು ಅರಿಯಬೇಕಿದೆ.

IMG 20251111 WA0000
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...