ಬೆಳಗಾವಿ | ‘ರೀಲ್ಸ್ ರಾಜನ’ ಹುಚ್ಚಾಟ: ತಲ್ವಾರ್ ಹಿಡಿದು ರಿಲ್ಸ್ ಮಾಡಿದ ಯುವಕನ ವಿರುದ್ಧ ಪ್ರಕರಣ

Date:

ಸೋಶಿಯಲ್ ಮೀಡಿಯಾದಲ್ಲಿ ಫೇಮ್‌ಗಾಗಿ ವಿಭಿನ್ನವಾಗಿ ಕಾಣಿಸಿಕೊಳ್ಳಲು ಯುವಕರು ಅಪಾಯಕಾರಿಯಾದ ಹಾದಿ ಹಿಡಿದಿದ್ದಾರೆ. ಕೈಯಲ್ಲಿ ತಲ್ವಾರ್, ಲಾಂಗು, ಮಚ್ಚು ಹಿಡಿದು ಸಿನಿಮಾ ಶೈಲಿಯ ರೀಲ್ಸ್ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಈ ನಡುವೆ ಕಾನೂನು ಉಲ್ಲಂಘನೆ ಮಾಡಿದವರಿಗೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಅಥಣಿಯಲ್ಲಿ ನಡೆದ ಒಂದು ಪ್ರಕರಣ ಇದೀಗ ಸುದ್ದಿಯಾಗುತ್ತಿದೆ.

ಅಥಣಿ ಪಟ್ಟಣದ ಮಹಾಂತೇಶ ಸದಾಶಿವ ಮಾಳಿ ಎಂಬ ಯುವಕ ತನ್ನ ಇನ್ನಾ ಪೇಜ್‌ನಲ್ಲಿ ಕೈಯಲ್ಲಿ ತಲ್ವಾರ್ ಹಿಡಿದು, ನಟ ಶಿವರಾಜಕುಮಾರ್ ಅಭಿನಯದ “ಶಿವ” ಚಿತ್ರದ ‘ಅಂಡರ್ವಡ್ ಅಂದ್ರೆ ಇಷ್ಟ ಕಣೀ, ಹಳೆ ಲಾಂಗು ಅಂದ್ರೆ ಬೆಸ್ಟು ಕಣೀ’ ಎಂಬ ಹಾಡಿಗೆ ರೀಲ್ಸ್ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ, ಅಥಣಿ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ಈ ಹಿಂದೆ ಬೆಳಗಾವಿ ಜಿಲ್ಲಾ ಎಸ್‌ಪಿ ಯುವಕರು ಈ ರೀತಿಯ ಕಾನೂನು ಉಲ್ಲಂಘನೆಯಿಂದ ದೂರವಿರಬೇಕು ಎಂದು ಎಚ್ಚರಿಕೆ ನೀಡಿದ್ದರು. ಇದೀಗ ಪೊಲೀಸ್ ಇಲಾಖೆ, ಆಯುಧ ಪ್ರದರ್ಶನ ಮಾಡುತ್ತಾ ವಿಡಿಯೋ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಥಣಿ ಠಾಣೆಯ ಪಿಎಸ್‌ಐ ಗಿರಿಮಲ್ಲಪ್ಪ ಉಪ್ಪಾರ ಅವರು, “ಸಮಾಜಿಕ ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು ಎಲ್ಲರ ಕರ್ತವ್ಯ. ಈ ರೀತಿಯ ನಾಟಕೀಯ ಹರಕತೆಗೆ ಕಾನೂನು ಬಲವಾಗಿ ಉತ್ತರ ನೀಡುತ್ತದೆ,” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...