ಬೆಳಗಾವಿ | ಗ್ರಾ.ಪಂ ಅಧ್ಯಕ್ಷನಿಂದ ಹಲ್ಲೆಗೊಳಗಾದ ವ್ಯಕ್ತಿ ಬಂಧನ: ಶಾಸಕರಿಂದ ಅಧ್ಯಕ್ಷನಿಗೆ ರಕ್ಷಣೆ ಆರೋಪ

Date:

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿಂದೋಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದುರ್ಗಪ್ಪ ಟೋಪೊಜಿ ವಿರುದ್ಧ ಹಲ್ಲೆ ಆರೋಪ ದಾಖಲಾಗಿದ್ದರೂ ಅವರನ್ನು ಬಂಧಿಸದೇ, ಹಲ್ಲೆಗೊಳಗಾದ ವ್ಯಕ್ತಿಯನ್ನೇ ಪೊಲೀಸರು ಬಂಧಿಸಿರುವ ಘಟನೆ ಕಾನೂನು ವಲಯದಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದೆ.

ನಾಲೈದು ದಿನಗಳ ಹಿಂದೆ ಗ್ರಾಮ ಸಮಸ್ಯೆ ಕುರಿತು ಮಾತನಾಡಲು ಬಂದ ಹನುಮಂತ ಕರಿಕಟ್ಟಿ ಎಂಬವರ ಮೇಲೆ ಗ್ರಾಪಂ ಅಧ್ಯಕ್ಷ ದುರ್ಗಪ್ಪ ಟೋಪೊಜಿ ಅವರು ಬೆನ್ನು ಕಚ್ಚಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 115(2) (ಗಾಯ ಉಂಟುಮಾಡುವ ಹಲ್ಲೆ), 352 (ಉದ್ದೇಶಪೂರ್ವಕ ಹಲ್ಲೆ) ಹಾಗೂ 506 (ಬೆದರಿಕೆ) ಅಡಿ ಅಪರಾಧಕ್ಕೆ ಒಳಪಡುವುದಾಗಿ ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಆದರೆ ಹಲ್ಲೆಗೊಳಗಾದ ಹನುಮಂತ ಕರಿಕಟ್ಟಿ ನೀಡಿದ ದೂರುವನ್ನು ಪೊಲೀಸರು ಸ್ವೀಕರಿಸದೇ, ಆರೋಪಿಯಾದ ಗ್ರಾಪಂ ಅಧ್ಯಕ್ಷ ನೀಡಿದ ಪ್ರತಿದೂರುವನ್ನು ಮಾತ್ರ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದಲ್ಲದೇ, ಯಾವುದೇ ಅರೆಸ್ಟ್ ವಾರೆಂಟ್ ಇಲ್ಲದೇ ಸಂತ್ರಸ್ತನನ್ನೇ ಬಂಧಿಸಿರುವುದು ಸಂವಿಧಾನದ ಕಲಂ 21 (ವೈಯಕ್ತಿಕ ಸ್ವಾತಂತ್ರ್ಯ) ಉಲ್ಲಂಘನೆಯಾಗುತ್ತದೆ ಎಂಬ ಆರೋಪ ಕುಟುಂಬಸ್ಥರಿಂದ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಪಂ ಅಧ್ಯಕ್ಷ ದುರ್ಗಪ್ಪ ಟೋಪೊಜಿ ಅವರು ಕಾಂಗ್ರೆಸ್‌ ಶಾಸಕ ವಿಶ್ವಾಸ ವೈದ್ಯ ಅವರ ಆಪ್ತ ಎಂಬ ಕಾರಣಕ್ಕೆ ಪೊಲೀಸರ ರಕ್ಷಣೆಯಿದೆ ಎಂಬ ಆರೋಪವೂ ಕೇಳಿಬಂದಿದೆ.

ಇದರಿಂದಾಗಿ ಪೊಲೀಸರ ನಿಷ್ಪಕ್ಷಪಾತ ತನಿಖೆ ಕುರಿತು ಸಂಶಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿವೆ.

ಸುದ್ದಿ ಓದಿದ್ದಿರಾ ? : ಬೆಳಗಾವಿ | ಯಲ್ಲಮ್ಮನ ಗುಡ್ಡದಿಂದ ಮರಳುತ್ತಿರುವಾಗ ಗುಂಡಿಗೆ ಬಿದ್ದ ಎತ್ತಿನ ಚಕ್ಕಡಿ

ಈ ಪ್ರಕರಣದಲ್ಲಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಹನುಮಂತ ಕರಿಕಟ್ಟಿ ಕುಟುಂಬಸ್ಥರು ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರನ್ನು ಭೇಟಿ ಮಾಡಿ, ಆರೋಪಿಯಾದ ಗ್ರಾಪಂ ಅಧ್ಯಕ್ಷನ ಬಂಧನ, ಸಂತ್ರಸ್ತನ ವಿರುದ್ಧದ ಪ್ರಕರಣ ಹಿಂಪಡೆ ಹಾಗೂ ಸ್ವತಂತ್ರ ತನಿಖೆ ನಡೆಸುವಂತೆ ಎಸ್ಪಿ ಕಚೇರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...