ಬೆಳಗಾವಿ | ಶನಿ ದೇವರ ಮೂರ್ತಿ ಎಂದು ಪೂಜಿಸುತ್ತಿದ್ದ ಕಲ್ಲು ವಾಸ್ತವದಲ್ಲಿ ವೀರಗಲ್ಲು: ಪತ್ತೆ ಹಚ್ಚಿದ ವಿಧ್ಯಾರ್ಥಿನಿ

Date:

ಬೆಳಗಾವಿ ಜಿಲ್ಲೆಯ ಬೆಳವಡಿ ಗ್ರಾಮದಲ್ಲಿ ಶತಮಾನಗಳಿಂದ ಶನಿ ದೇವರ ಮೂರ್ತಿ ಎಂದು ಪೂಜಿಸುತ್ತಿದ್ದ ಕಲ್ಲು ವಾಸ್ತವದಲ್ಲಿ ಐತಿಹಾಸಿಕ ವೀರಗಲ್ಲು ಎಂದು ಪತ್ತೆಯಾಗಿದೆ. ಈ ಮಹತ್ವದ ಐತಿಹಾಸಿಕ ಕುರುಹನ್ನು 9ನೇ ತರಗತಿಯ ವಿದ್ಯಾರ್ಥಿನಿ ಲಕ್ಷ್ಮೀ ಪ್ರಕಾಶ ಹುಂಬಿ ಗುರುತಿಸಿದ್ದಾಳೆ.

ಪ್ರತಿದಿನ ದೇವಸ್ಥಾನಕ್ಕೆ ಬರುತ್ತಿದ್ದ ಲಕ್ಷ್ಮೀ ಇತ್ತೀಚೆಗೆ ಕಲ್ಲಿನ ಮೂರ್ತಿಯನ್ನು ಸ್ವಚ್ಛಗೊಳಿಸಿದಳು. ಶಾಲೆಯಲ್ಲಿ ಕಲಿತ ಇತಿಹಾಸದ ಪಾಠದೊಂದಿಗೆ ಹೋಲಿಕೆ ಮಾಡಿ ನೋಡಿದಾಗ ಅದು ವೀರಗಲ್ಲು ಇರಬಹುದು ಎಂಬ ಅನುಮಾನ ಅವಳಿಗೆ ಮೂಡಿತು. ಈ ಕುರಿತು ತಂದೆಗೆ ತಿಳಿಸಿದ ಬಳಿಕ ಗ್ರಾಮ ಹಿರಿಯರು ಪರಿಶೀಲನೆ ನಡೆಸಿದಾಗ ಅದು ಐತಿಹಾಸಿಕ ವೀರಗಲ್ಲು ಎಂಬುದು ಸ್ಪಷ್ಟವಾಗಿದೆ.

ಬೆಳವಡಿ ಸಂಸ್ಥಾನ ಹಾಗೂ ದೇಸಗತಿಗಳ ಕುರಿತು ಪಿಎಚ್‌ಡಿ ಮಾಡಿರುವ ಬಾಳಪ್ಪ ಈರಪ್ಪ ಚಿನಗುಡಿ ಮಾತನಾಡಿ, “ವೀರಗಲ್ಲು ಪತ್ತೆ ಹಚ್ಚಿದ ಬಾಲಕಿಯ ಪ್ರಜ್ಞೆ ಪ್ರಶಂಸನೀಯ. ಆದರೆ ಇದು ಬೆಳವಡಿ ಮಲ್ಲಮ್ಮನಿಗೆ ಸಂಬಂಧಪಟ್ಟದ್ದು ಅಲ್ಲ. ಸಂಸ್ಥಾನದ ವೀರನೊಬ್ಬನ ಸ್ಮರಣಾರ್ಥ ನಿರ್ಮಿಸಲಾದ ವೀರಗಲ್ಲು” ಎಂದು ತಿಳಿಸಿದ್ದಾರೆ. ಶಾಸನ ತಜ್ಞರಾದ ಹನುಮಾಕ್ಷಿ ಗೋಗಿ ಮತ್ತು ಲಕ್ಷ್ಮಣ ತೇಲಗಾವಿ ಅವರೂ ಇದನ್ನು ಖಚಿತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 12 ಅಥವಾ 13ನೇ ಶತಮಾನದ ಈ ವೀರಗಲ್ಲು ಮೂರು ಭಾಗಗಳನ್ನು ಹೊಂದಿದೆ. ಕೆಳಭಾಗದಲ್ಲಿ ಗೋವುಗಳನ್ನು ರಕ್ಷಿಸಲು ವೀರನು ಯುದ್ಧ ಮಾಡುತ್ತಿರುವ ದೃಶ್ಯ ಕೆತ್ತಲಾಗಿದೆ. ಎರಡನೇ ಭಾಗದಲ್ಲಿ ವೀರಮರಣ ಹೊಂದಿದ ಯೋಧನನ್ನು ವಿಮಾನದಲ್ಲಿ ಕುಳ್ಳಿರಿಸಿ ಅಪ್ಸರೆಯರು ಸಂಗೀತ ಹಾಗೂ ನೃತ್ಯದೊಂದಿಗೆ ಕೈಲಾಸಕ್ಕೆ ಕರೆದುಕೊಂಡು ಹೋಗುತ್ತಿರುವ ಕೆತ್ತನೆ ಇದೆ. ಮೇಲ್ಬಾಗದಲ್ಲಿ ಶಿವಲಿಂಗ, ನಂದಿ ಮತ್ತು ದೇವಧೂತರು ಪೂಜೆ ಸಲ್ಲಿಸುವ ದೃಶ್ಯಗಳಿವೆ. ಎಡ-ಬಲ ಭಾಗಗಳಲ್ಲಿ ಸೂರ್ಯ ಮತ್ತು ಚಂದ್ರರ ಚಿತ್ರಗಳು ಕೆತ್ತಲಾಗಿದ್ದು, ವೀರನ ಸಾಹಸ ಶಾಶ್ವತ ಎಂಬುದನ್ನು ಸೂಚಿಸುತ್ತವೆ.

ಈ ಸುದ್ದಿ ಓದಿದ್ದಿರಾ ? ಹೋಳಿ ಸಂಭ್ರಮದಲ್ಲಿ ಅಸಭ್ಯ ಗೀತೆಗಳಿಗೆ ನೃತ್ಯ: ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮನವಿ

ವೀರಗಲ್ಲಿನ ಮಧ್ಯಭಾಗದಲ್ಲಿ ಶ್ಲೋಕಗಳು ಅಥವಾ ವಿವರಣೆಗಳು ಇದ್ದರೂ ಅವು ಕಾಲಕ್ರಮೇಣ ನಾಶವಾಗಿರುವುದರಿಂದ ಓದಲು ಸಾಧ್ಯವಾಗುತ್ತಿಲ್ಲ ಎಂದು ತಜ್ಞರು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...