ಬೆಳಗಾವಿ ನಗರದ ಹೊರವಲಯದಲ್ಲಿರುವ ಭೂತರಾಮನಹಟ್ಟಿಯಲ್ಲಿ ಮಂಗಳವಾರ ರಾತ್ರಿ ವ್ಯಾಘ್ರವೊಂದು ಪ್ರತ್ಯಕ್ಷಗೊಂಡ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಸಾರ್ವಜನಿಕರು ಮನೆಯಿಂದ ಹೊರಬರದಂತೆ ಅರಣ್ಯ ಇಲಾಖೆ ಸಿಬ್ಬಂದಿಗಳು ಡಂಗುರ ಸಾರುವ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಗ್ರಾಮಸ್ಥರ ಪ್ರಕಾರ, ರಾತ್ರಿ ವೇಳೆ ಮನೆಯ ಹೊರಭಾಗದಲ್ಲಿ ವ್ಯಾಘ್ರವನ್ನು ಕಂಡಿರುವುದು ಸ್ಥಳೀಯರಲ್ಲಿ ಭೀತಿಗೆ ಕಾರಣವಾಗಿದೆ. ಈ ಸಂದರ್ಭ, ಕೆಲ ತಿಂಗಳುಗಳ ಹಿಂದೆ ಭೂತರಾಮನಹಟ್ಟಿಯ ಕಿತ್ತೂರು ಚನ್ನಮ್ಮ ಮೃಗಾಲಯದಿಂದ ತಪ್ಪಿಸಿಕೊಂಡಿದ್ದ ಪ್ರಾಣಿಯೇ ಪುನಃ ಕಾಣಿಸಿಕೊಂಡಿರುವ ಸಾಧ್ಯತೆ ಬಗ್ಗೆ ಅನುಮಾನ ವ್ಯಕ್ತವಾಗಿದೆ.




