ಬೆಳಗಾವಿ | ನರೇಗಾ ಹೊಸ ಕಾಯ್ದೆ ವಿರೋಧಿಸಿ ಮಹಿಳಾ ದಿನಾಚರಣೆ: ಬೀಡಿಯಲ್ಲಿ ಸಾವಿರಾರು ಮಹಿಳೆಯರ ಪ್ರತಿಭಟನೆ

Date:

ಜಾಗೃತ ಮಹಿಳಾ ಒಕ್ಕೂಟದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಈ ವರ್ಷ “ನರೇಗಾ ಹೊಸ ಕಾಯ್ದೆ – ಮಹಿಳೆಯರ ಉದ್ಯೋಗ ಕಸಿದುಕೊಳ್ಳುವ ಹುನ್ನಾರ!” ಎಂಬ ಘೋಷಣೆಯಡಿ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಬೀಡಿ ಗ್ರಾಮದಲ್ಲಿ ಪ್ರತಿಭಟನೆ ಹಾಗೂ ಜಾಗೃತಿ ಸಭೆಯ ಮೂಲಕ ಆಚರಿಸಲಾಯಿತು.

ಹಳ್ಳಿಗಳಿಂದ ಸಾವಿರಾರು ಮಹಿಳೆಯರು, ಕೂಲಿಕಾರ್ಮಿಕರು ಹಾಗೂ ಸಂಘಟನೆಯ ಕಾರ್ಯಕರ್ತರು ಭಾಗವಹಿಸಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ)ಯ ಹೊಸ ಕಾಯ್ದೆಯ ಅಂಶಗಳು ಮಹಿಳೆಯರ ಉದ್ಯೋಗ ಅವಕಾಶಗಳನ್ನು ಕಡಿಮೆ ಮಾಡಬಹುದು ಎಂಬ ಆತಂಕ ವ್ಯಕ್ತಪಡಿಸಿದರು. ಮಹಿಳೆಯರ ಹಕ್ಕುಗಳ ರಕ್ಷಣೆಗೆ ಹಾಗೂ ಉದ್ಯೋಗ ಭದ್ರತೆಗೆ ಒತ್ತಾಯಿಸಿ ಈ ಕಾರ್ಯಕ್ರಮವನ್ನು ಮಹಿಳಾ ಪ್ರತಿರೋಧದ ದಿನಾಚರಣೆಯಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಬೀಡಿ ಕನ್ನಡ ಶಾಲೆಯಿಂದ ಜಾಥಾ ಹೊರಟು ರಾಯಣ್ಣ ಸರ್ಕಲ್‌ನಲ್ಲಿ ಮಾನವ ಸರಪಳಿ ರಚಿಸಿ ಘೋಷಣೆಗಳು ಹಾಗೂ ಹಾಡುಗಳ ಮೂಲಕ ಪ್ರತಿಭಟನೆ ನಡೆಸಲಾಯಿತು. ಸುಮಾರು ಅರ್ಧ ಗಂಟೆ ಕಾಲ ಕಿತ್ತೂರು-ಅಲ್ನಾವರ-ಖಾನಾಪುರ ಮುಖ್ಯ ರಸ್ತೆಯನ್ನು ತಡೆದು ಬಳಿಕ ಜ್ಞಾನೇಶ್ವರ ಕಲ್ಯಾಣ ಮಂಟಪದಲ್ಲಿ ಸಭೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001482254

ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬರಹಗಾರ್ತಿ ಹಾಗೂ ಹೋರಾಟಗಾರ್ತಿ ಕೆ. ನೀಲಾ ಅವರು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಮಹಿಳೆಯರ ಘನತೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಮಹಿಳೆಯರು ಪಡೆದ ಆತ್ಮಗೌರವದ ಬಗ್ಗೆ ಮಾತನಾಡಿದರು. ಹೊಸ ಕಾಯ್ದೆಗಳು ಮಹಿಳೆಯರ ಕೆಲಸದ ಅವಕಾಶಗಳನ್ನು ಕಡಿಮೆ ಮಾಡುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಪರಿಸರವಾದಿ ಡಾ. ಶಿವಾಜಿ ಕಾಗಣೇಕರ, ನವಜೀವನ ಮಹಿಳಾ ಒಕ್ಕೂಟದ ಮೋಕ್ಷಮ್ಮ ಹಾಗೂ ಜಾಗೃತ ಮಹಿಳಾ ಒಕ್ಕೂಟದ ಅಧ್ಯಕ್ಷೆ ರುಕ್ಷ್ಮಿಣಿ ಸುತಾರ ಅವರು ಸಹ ಮಹಿಳೆಯರ ಹಕ್ಕುಗಳು ಮತ್ತು ಸಮಾನ ಅವಕಾಶಗಳ ಕುರಿತು ಮಾತನಾಡಿದರು.

ಕಾರ್ಯಕ್ರಮದ ವೇಳೆ “ಯುದ್ಧ ಬೇಡ – ಶಾಂತಿ ಬೇಕು” ಎಂಬ ಸಂದೇಶದೊಂದಿಗೆ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಲ್ಲಿ ಸಾವನ್ನಪ್ಪಿದ ಮಕ್ಕಳ ಆತ್ಮಶಾಂತಿಗಾಗಿ ಮೌನಾಚರಣೆ ನಡೆಸಲಾಯಿತು.

ಈ ಪ್ರತಿಭಟನೆ ಮತ್ತು ಸಭೆಯಲ್ಲಿ ಸಾವಿರಾರು ಮಹಿಳೆಯರು ಹಾಗೂ ಕಾರ್ಮಿಕರು ಭಾಗವಹಿಸಿ ಮಹಿಳೆಯರ ಹಕ್ಕುಗಳ ಪರ ಒಗ್ಗಟ್ಟಿನ ಧ್ವನಿಯನ್ನು ಎತ್ತಿದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...