ಬೆಳಗಾವಿಗೆ ‘ಬಾಲ್ಯ ವಿವಾಹ’ದ ಪಿಡುಗು; 361 ಬಾಲಕಿಯರು ಗರ್ಭಿಣಿಯರು

Date:

ಬಾಲ್ಯ ವಿವಾಹಗಳಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದೆ. ಅದರಲ್ಲೂ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ತವರು ಜಿಲ್ಲೆ ಬೆಳಗಾವಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಿದೆ. ಇದರ ಜೊತೆ, ಹರಿಹರೆಯದ ಬಾಲಕಿಯರು ಹೆಚ್ಚಾಗಿ ಗರ್ಭ ಧರಿಸಿರುವ ಜಿಲ್ಲೆ ಎಂಬ ಕುಖ್ಯಾತಿಯನ್ನೂ ಬೆಳಗಾವಿ ಗಳಿಸಿದೆ.

ಜಿಲ್ಲೆಯಲ್ಲಿ 18ನೇ ವರ್ಷಕ್ಕೆ ಕಾಲಿಡುವ ಮುನ್ನವೇ ಹಲವಾರು ಬಾಲಕಿಯರು ಮಕ್ಕಳನ್ನು ಹೆರುತ್ತಿದ್ದಾರೆ. ಕಳೆದ 19 ತಿಂಗಳಲ್ಲಿ 361 ಬಾಲಕಿಯರು ಜಿಲ್ಲೆಯಲ್ಲಿ ಗರ್ಭ ಧರಿಸಿದ್ದಾರೆ ಎಂದು ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ (ಆರ್‌ಸಿಎಚ್‌) ಪೋರ್ಟಲ್‌ನ ಅಂಕಿ–ಅಂಶಗಳು ತಿಳಿಸಿವೆ.

ಅಂದಹಾಗೆ, 2023ರ ಏಪ್ರಿಲ್ ಮತ್ತು ಆಗಸ್ಟ್‌ ನಡುವೆ (ಐದು ತಿಂಗಳು) 12 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ. ಇನ್ನೂ ದಾಖಲೆಗಳಿಗೆ ಸಿಗದೇ ಇರುವ ಹಲವು ಬಾಲ್ಯವಿವಾಹಗಳು ನಡೆದಿರುವ ಸಾಧ್ಯತೆಗಳಿವೆ. ಆದರೆ, ಕಾನೂನಾತ್ಮಕವಾಗಿ ಬಾಲ್ಯವಿವಾಹ ಅಪರಾಧವಾಗಿದ್ದರೂ, ಅವುಗಳನ್ನು ತಡೆಗಟ್ಟುವಲ್ಲಿ ಮತ್ತು ಅಪರಾಧಿಗಳಿಗೆ ಶಿಕ್ಷೆ ವಿಧಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತಳೆದಿರುವುದು ಇಂತಹ ಪ್ರಕರಣಗಳು ಮುಂದುವರೆಯಲು ಕಾರಣವಾಗಿವೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿ ಜಿಲ್ಲೆಯಲ್ಲಿ 2022ರ ಏಪ್ರಿಲ್ ಮತ್ತು 2023ರ ಮಾರ್ಚ್‌ ನಡುವೆ 81,817 ಮಹಿಳೆಯರು ಗರ್ಭ ಧರಿಸಿದ್ದಾರೆ. ಅವರಲ್ಲಿ 208 ಬಾಲಕಿಯರಾಗಿದ್ದಾರೆ. 2023ರ ಏಪ್ರಿಲ್‌ 1ರಿಂದ ಅಕ್ಟೋಬರ್‌ 31ರ ಅವಧಿಯಲ್ಲಿ 51,468 ಮಹಿಳೆಯರು ಗರ್ಭಿಣಿಯರಾಗಿದ್ದಾರೆ. ಅವರಲ್ಲಿ, 153 ಬಾಲಕಿಯರಿದ್ದಾರೆ ಎಂದು ಆರ್‌ಸಿಎಚ್‌ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?: ಬಾಲ್ಯ ವಿವಾಹ | ಕರ್ನಾಟಕಕ್ಕೆ ಅಗ್ರ ಸ್ಥಾನ; NFHS ವರದಿ ಹೇಳುತ್ತಿರುವುದೇನು?

ಬಾಲ್ಯವಿವಾಹ ಮತ್ತು ಬಾಲ್ಯದಲ್ಲೇ ಗರ್ಭಧಾರಣೆಯ ಬಗ್ಗೆ ಜಾಗೃತಿ ಅಭಿಯಾನಗಳನ್ನು ನಡೆಸುವಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಬೇಜವಾಬ್ದಾರಿತನ ಪ್ರದರ್ಶಿಸಿದ್ದಾರೆ. ಅವರ ನಿರ್ಲಕ್ಷ್ಯತನದಿಂದಾಗಿ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೋರಾಟಗಾರ್ತಿ ಪ್ರಮೋದಾ ಹಜಾರೆ ಕಿಡಿಕಾರಿದ್ದಾರೆ.

“ಗರ್ಭಿಣಿಯರ ನೋಂದಣಿ ಸಮಯದಲ್ಲಿ ಬಾಲಕಿಯರು ಗರ್ಭ ಧರಿಸಿರುವ ಬಗ್ಗೆ ಗೊತ್ತಾಗಿದೆ. ಬಾಲ ಗರ್ಭಿಣಿಯರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೂ ಮಾಹಿತಿ ಕೊಡುತ್ತಿದ್ದೇವೆ. ಇಲಾಖೆಯು ಬಾಲಕಿಯರ ಪತಿ ಸೇರಿದಂತೆ ಕುಟುಂಬಸ್ಥರ ವಿರುದ್ಧ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲಿಸುತ್ತಿದ್ದಾರೆ’’ ಎಂದು ಜಿಲ್ಲಾ ಸಂತಾನೋತ್ಪತ್ತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಚೇತನ ಕಂಕಣವಾಡಿ ಹೇಳಿರುವುದಾಗಿ ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...