ರಾಮದುರ್ಗದಲ್ಲಿ ₹33 ಕೋಟಿ ವೆಚ್ಚದ ಆಸ್ಪತ್ರೆಗೆ ಶಂಕುಸ್ಥಾಪನೆ, ಜಿಲ್ಲೆಗೆ 330 ಕೋಟಿ ಕೊಡುಗೆ: ಸಚಿವ ದಿನೇಶ ಗುಂಡುರಾವ

Date:

ಬೆಳಗಾವಿ ಜಿಲ್ಲೆಯ ರಾಮದುರ್ಗ ನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 33 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುವ 100 ಹಾಸಿಗೆಗಳ ತಾಲೂಕು ಆಸ್ಪತ್ರೆಯ ಕಾಮಗಾರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್‌ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮದುರ್ಗ ತಾಲೂಕಿನ ಶಾಸಕ ಅಶೋಕ್ ಪಟ್ಟಣ ಅವರ ನಿರಂತರ ಪ್ರಯತ್ನದಿಂದ ಈ ಆಧುನಿಕ ಆಸ್ಪತ್ರೆ ಮಂಜೂರಾಗಿದೆ ಎಂದು ಹೇಳಿದರು. ವಿದ್ಯಾರ್ಥಿ ಘಟಕದಿಂದ ರಾಜಕೀಯ ಜೀವನ ಆರಂಭಿಸಿ ದೀರ್ಘ ಅನುಭವ ಹೊಂದಿರುವ ಅವರು ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುತ್ತಿದ್ದಾರೆ.

ಮುಖ್ಯಮಂತ್ರಿಗಳೊಂದಿಗೆ ಸಮನ್ವಯ ಹೊಂದಿರುವುದರಿಂದ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕ್ಷೇತ್ರಕ್ಕೆ ತರಲು ಸಾಧ್ಯವಾಗಿದೆ ಎಂದು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿರೋಧ ಪಕ್ಷಗಳು ಸರ್ಕಾರದ ಬಳಿ ಹಣವಿಲ್ಲ ಎಂದು ಅಪಪ್ರಚಾರ ಮಾಡುತ್ತಿವೆ ಎಂದು ಟೀಕಿಸಿದ ಸಚಿವರು, ಸರ್ಕಾರವು ಜನರಿಗೆ 55 ಸಾವಿರ ಕೋಟಿ ರೂ. ಅನುದಾನ ನೀಡಿದ್ದು, ಜನಪರ ಯೋಜನೆಗಳನ್ನು ನೇರವಾಗಿ ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಒಂದೇ ದಿನ ಮೂರು ಆಸ್ಪತ್ರೆಗಳಿಗೆ ಶಂಕುಸ್ಥಾಪನೆ ಮಾಡಲಾಗಿದೆ. ಬೈಲಹೊಂಗಲದಲ್ಲಿ 25 ಕೋಟಿ ರೂ. ವೆಚ್ಚದ ತೀವ್ರ ನಿಗಾ ಘಟಕದ ಆಸ್ಪತ್ರೆ, ಸವದತ್ತಿಯಲ್ಲಿ 100 ಹಾಸಿಗೆಗಳ ಆಸ್ಪತ್ರೆ, ರಾಮದುರ್ಗದಲ್ಲಿ 33 ಕೋಟಿ ರೂ.

ವೆಚ್ಚದ ತಾಲೂಕು ಆಸ್ಪತ್ರೆ ಹಾಗೂ ಕಿತ್ತೂರಿನಲ್ಲಿ 33 ಕೋಟಿ ರೂ. ವೆಚ್ಚದ 100 ಹಾಸಿಗೆಗಳ ಆಸ್ಪತ್ರೆ ಕಾಮಗಾರಿ ಆರಂಭಗೊಂಡಿದೆ. ಖಾನಾಪುರದಲ್ಲಿ 100 ಹಾಸಿಗೆಗಳ ಆಸ್ಪತ್ರೆ, ಅಥಣಿಯಲ್ಲಿ ಎಂಸಿಎಚ್ ಆಸ್ಪತ್ರೆ ಕಾಮಗಾರಿ ನಡೆಯುತ್ತಿದ್ದು, ಗೋಕಾಕನಲ್ಲಿ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಒಟ್ಟಾರೆ ಬೆಳಗಾವಿ ಜಿಲ್ಲೆಗೆ ಆರೋಗ್ಯ ಇಲಾಖೆಯಿಂದ 330 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಹಿಂದಿನ ಸರ್ಕಾರದಲ್ಲಿ ಇಷ್ಟೊಂದು ಕಾಮಗಾರಿಗಳು ನಡೆದಿಲ್ಲ ಎಂದು ಟೀಕಿಸಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 500 ಹೊಸ ಬಸ್‌ಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.

ಬಾಣಂತಿಯರ ಸಾವನ್ನು ಶೂನ್ಯಕ್ಕೆ ಇಳಿಸಲು ವಿಶೇಷ ಅಭಿಯಾನ ಆರಂಭಿಸಲಾಗಿದೆ. 100 ಕೋಟಿ ಜನರ ತಪಾಸಣೆ ನಡೆಸಲಾಗಿದೆ. ಡಯಾಲಿಸಿಸ್‌ ಸೇವೆಗಳನ್ನು ಜಾರಿಗೆ ತರಲಾಗಿದೆ. ಆಶಾಕಿರಣ ಯೆ ಗೆ ಸೇರಿದಂತೆ ಹಲವು ಆರೋಗ್ಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಶಾಸಕ ಅಶೋಕ್ ಪಟ್ಟಣವರು ಮಾತನಾಡಿ, 33 ಕೋಟಿ ರೂ. ವೆಚ್ಚದ ಈ ಆಸ್ಪತ್ರೆಯಿಂದ ಉತ್ತಮ ಮೂಲಸೌಕರ್ಯ ಮತ್ತು ಗುಣಮಟ್ಟದ ಚಿಕಿತ್ಸೆ ಸ್ಥಳೀಯರಿಗೆ ಸಮೀಪದಲ್ಲೇ ಲಭ್ಯವಾಗಲಿದೆ. ಗ್ರಾಮೀಣ ಜನರಿಗೆ ತುರ್ತು ಸಂದರ್ಭಗಳಲ್ಲಿ ದೂರ ಪ್ರಯಾಣಿಸುವ ಅವಶ್ಯಕತೆ ಕಡಿಮೆಯಾಗಲಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದಿರಾ ? ಬೆಳಗಾವಿ | ರಾಮದುರ್ಗ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ : ಸೂಕ್ತ ಕ್ರಮದ ಭರವಸೆ ನೀಡಿದ ಸಚಿವರು

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...