ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರು ಹೊಸ ಹೆಲಿಕಾಪ್ಟರ್ ಖರೀದಿಸಿ, ಬೆಳಗಾವಿ ಜಿಲ್ಲೆಯ ರಾಜಕೀಯ ವಲಯದಲ್ಲಿ ಹೆಲಿಕಾಪ್ಟರ್ ಹೊಂದಿದ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಬೆಂಗಳೂರು ಸಮೀಪದ ಜಕ್ಕೂರು ಏರೋಡೋಮ್ನಲ್ಲಿ ಹೆಲಿಕಾಪ್ಟರ್ ಪರಿಶೀಲಿಸಿದ ನಂತರ, “ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ” ಎಂದು ತಮ್ಮ ಫೇಸ್ಬುಕ್ ಖಾತೆಯಲ್ಲಿ ಜಾರಕಿಹೊಳಿಯವರು ತಿಳಿಸಿದ್ದಾರೆ.
ರಾಜ್ಯದಾದ್ಯಂತ ಪಕ್ಷ ಸಂಘಟನೆ ಬಲಪಡಿಸುವ ಜೊತೆಗೆ 2028ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುವ ಉದ್ದೇಶದಿಂದ ಈ ಹೆಲಿಕಾಪ್ಟರ್ ಖರೀದಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಡಬಲ್ ಎಂಜಿನ್ ಹೊಂದಿರುವ ಈ ಅತ್ಯಾಧುನಿಕ ಹೆಲಿಕಾಪ್ಟರ್ನಲ್ಲಿ ಐದು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್ಗಳು ಪ್ರಯಾಣಿಸಬಹುದಾಗಿದೆ. ಎತ್ತರ ಪ್ರದೇಶಗಳಲ್ಲಿಯೂ ಲ್ಯಾಂಡಿಂಗ್ ಹಾಗೂ ಟೇಕ್ ಆಫ್ ಸಾಮರ್ಥ್ಯ ಹೊಂದಿರುವ ಈ ಚಾಪರ್, ಅಪಘಾತದ ಸಂದರ್ಭದಲ್ಲೂ ಸುರಕ್ಷತೆ ಒದಗಿಸುವ ಶಕ್ತಿ ಹೀರಿಕೊಳ್ಳುವ ಆಸನಗಳು ಹಾಗೂ ಸುಧಾರಿತ ವೈರ್ಲೆಸ್ ಸಂವಹನ ವ್ಯವಸ್ಥೆಯನ್ನು ಹೊಂದಿದೆ.
ಸಚಿವರ ಜೊತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹುನುಮಣ್ಣರ, ಅಲಿ ಗೊರವನಕೋಲ್ ಸೇರಿದಂತೆ ಹಲವು ನಾಯಕರೂ ಉಪಸ್ಥಿತರಿದ್ದರು.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿಯವರು ಹೊಸ ಹೆಲಿಕಾಪ್ಟರ್ ಖರೀದಿಸಿ, ಬೆಳಗಾವಿ ಜಿಲ್ಲೆಯ ರಾಜಕೀಯ ವಲಯದಲ್ಲಿ ಹೆಲಿಕಾಪ್ಟರ್ ಹೊಂದಿದ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಬೆಂಗಳೂರು ಸಮೀಪದ ಜಕ್ಕೂರು ಏರೋಡೋಮ್ನಲ್ಲಿ ಹೆಲಿಕಾಪ್ಟರ್ ಪರಿಶೀಲಿಸಿದ ನಂತರ, “ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ” ಎಂದು ತಮ್ಮ ಫೇಸ್ಬುಕ್ ಖಾತೆಯಲ್ಲಿ ಜಾರಕಿಹೊಳಿಯವರು ತಿಳಿಸಿದ್ದಾರೆ.
ರಾಜ್ಯದಾದ್ಯಂತ ಪಕ್ಷ ಸಂಘಟನೆ ಬಲಪಡಿಸುವ ಜೊತೆಗೆ 2028ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುವ ಉದ್ದೇಶದಿಂದ ಈ ಹೆಲಿಕಾಪ್ಟರ್ ಖರೀದಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಡಬಲ್ ಎಂಜಿನ್ ಹೊಂದಿರುವ ಈ ಅತ್ಯಾಧುನಿಕ ಹೆಲಿಕಾಪ್ಟರ್ನಲ್ಲಿ ಐದು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್ಗಳು ಪ್ರಯಾಣಿಸಬಹುದಾಗಿದೆ. ಎತ್ತರ ಪ್ರದೇಶಗಳಲ್ಲಿಯೂ ಲ್ಯಾಂಡಿಂಗ್ ಹಾಗೂ ಟೇಕ್ ಆಫ್ ಸಾಮರ್ಥ್ಯ ಹೊಂದಿರುವ ಈ ಚಾಪರ್, ಅಪಘಾತದ ಸಂದರ್ಭದಲ್ಲೂ ಸುರಕ್ಷತೆ ಒದಗಿಸುವ ಶಕ್ತಿ ಹೀರಿಕೊಳ್ಳುವ ಆಸನಗಳು ಹಾಗೂ ಸುಧಾರಿತ ವೈರ್ಲೆಸ್ ಸಂವಹನ ವ್ಯವಸ್ಥೆಯನ್ನು ಹೊಂದಿದೆ.
ಸಚಿವರ ಜೊತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹುನುಮಣ್ಣರ, ಅಲಿ ಗೊರವನಕೋಲ್ ಸೇರಿದಂತೆ ಹಲವು ನಾಯಕರೂ ಉಪಸ್ಥಿತರಿದ್ದರು.





