ಅನುದಾನ ಕೊರತೆ: ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

Date:

ಕನ್ನಡ ಸಾಹಿತ್ಯ ಪರಿಷತ್ತಿಗೆ ರಾಜ್ಯ ಸರ್ಕಾರದಿಂದ ಅನುದಾನ ಸಿಗುವುದು ವಿಳಂಬವಾಗಿದ್ದು, ಇದರ ಪರಿಣಾಮ ಮಂಡ್ಯದಲ್ಲಿ ಈ ವರ್ಷ ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ.

ಕಾಂಗ್ರೆಸ್ ಸರ್ಕಾರ ಬಂದ ಬಳಿಕ ₹5 ಕೋಟಿ ಅನುದಾನ ಘೋಷಿಸಿದೆ. ಅದರಲ್ಲಿ ನವೆಂಬರ್ 2ರಂದು ಮೊದಲ ಕಂತು ₹1.67 ಕೋಟಿ ಬಂದಿದೆ. ಇದರಲ್ಲಿ ಪರಿಷತ್ತಿನ ಸಿಬ್ಬಂದಿ ವೇತನ, ನಿರ್ವಹಣೆಗೆ ವೆಚ್ಚ ಮಾಡಬೇಕಿದೆ. ಎರಡನೇ ಕಂತಿನ ಅನುದಾನ ಬಂದ ಬಳಿಕವೇ ಉಳಿದ ಚಟುವಟಿಕೆ ನಡೆಸಲು ಉದ್ದೇಶಿಸಲಾಗಿದೆ.

“2021-22ರ ಸಾಲಿನಲ್ಲಿ ₹10 ಕೋಟಿ ಅನುದಾನ ನೀಡಲಾಗಿತ್ತು. ಅದರಲ್ಲಿ ₹5 ಕೋಟಿ ಹಾವೇರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಳಸಲಾಯಿತು. ಆದರೆ, 2023-24ನೇ ಸಾಲಿನಲ್ಲಿ ಅರ್ಧದಷ್ಟು ಅಂದರೆ; ₹5 ಕೋಟಿ ಮಾತ್ರ ನೀಡಲಾಗಿದೆ. ಹೀಗಾಗಿ, ಈ ವರ್ಷ ಮಂಡ್ಯದ ಸಮ್ಮೇಳನ ಮಾಡದಿರಲು ನಿರ್ಧರಿಸಲಾಗಿದೆ” ಎಂದು ಪರಿಷತ್ತಿನ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

₹5 ಕೋಟಿ ಅನುದಾನ ನಾಲ್ಕು ಕಂತುಗಳಲ್ಲಿ ಬರಬೇಕಿದೆ. ಜೂನ್‌ನಲ್ಲಿ ಮೊದಲ ಕಂತು, ಆಗಸ್ಟ್‌ನಲ್ಲಿ ಎರಡನೇ, ನವೆಂಬರ್‌ಗೆ ಮೂರು ಹಾಗೂ ಫೆಬ್ರವರಿಗೆ ನಾಲ್ಕನೇ ಕಂತಿನ ಹಣ ಬರಬೇಕು. ಎರಡನೇ ಮತ್ತು ಮೂರನೇ ಕಂತಿನ ಹಣ ಶೀಘ್ರ ನೀಡಲು ಕೋರಲಾಗಿದೆ ಎಂದು ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ರಾಜ್ಯದ ಬಹುತೇಕ ಕಡೆ ಬರ ಬಿದ್ದಿದೆ. ರೈತರ ಮನೆಯಲ್ಲಿ ಅನ್ನವಿಲ್ಲ. ಇಂಥ ಸಂದರ್ಭದಲ್ಲಿ ಸಾಹಿತ್ಯದ ಹೋಳಿಗೆ ಸವಿಯಬಾರದು ಎಂಬ ಕಾರಣಕ್ಕೆ ಸ್ವಯಂ ಪ್ರೇರಿತವಾಗಿ ತಾತ್ಕಾಲಿಕವಾಗಿ ಸಮ್ಮೇಳನ ನಿಲ್ಲಿಸಿದ್ದೇವೆ. ಜಾನುವಾರುಗಳ ಮೇವಿಗಾಗಿ ಪರದಾಡುವ ಸ್ಥಿತಿ ಇದೆ. ಪರಿಷತ್ತು ಸಮಗ್ರ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ. ಇದನ್ನು ಇನ್ನಷ್ಟು ಜನಪರ ಮಾಡುವ ಉದ್ದೇಶದಿಂದ ಹೀಗೆ ನಿರ್ಧರಿಸಲಾಗಿದೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...