ರಂಗಾಯಣ ಶಿವಮೊಗ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಕನ್ನಡ ಭವನ, ಬೆಳಗಾವಿ ಇವರ ಸಹಯೋಗದಲ್ಲಿ ಖ್ಯಾತ ನಾಟಕಕಾರ ಡಾ. ಡಿ.ಎಸ್. ಚೌಗಲೆ ಅವರ ರಚನೆಯಾದ ‘ನಮ್ಮೊಳಗೊಬ್ಬ ಗಾಂಧಿ’ ನಾಟಕದ ರಂಗಪ್ರಯೋಗವು ಬುಧವಾರ ದಿನಾಂಕ 21 ಜನವರಿ 2026ರಂದು ಸಂಜೆ 6.30 ಗಂಟೆಗೆ ನೆಹರು ನಗರದ ಹೊಟೆಲ್ ರಾಮದೇವ ಹಿಂದಿನ ಕನ್ನಡ ಭವನ ರಂಗಮಂದಿರದಲ್ಲಿ ನಡೆಯಲಿದೆ.
ಶಿವಮೊಗ್ಗ ರಂಗಾಯಣದ ರೆಪರ್ಟರಿ ಕಲಾವಿದರು ಈ ನಾಟಕದಲ್ಲಿ ಅಭಿನಯಿಸಲಿದ್ದಾರೆ. ನಾಟಕದ ನಿರ್ದೇಶನವನ್ನು ಖ್ಯಾತ ನಿರ್ದೇಶಕ ಚಿದಂಬರರಾವ ಜಂಬೆ ಅವರು ವಹಿಸಿಕೊಂಡಿದ್ದು, ಓಂಕಾರ ಮೇಗಳಾಪುರ ಅವರು ಸಹ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ನಾಟಕಕ್ಕೆ ರಾಘವ ಕಮ್ಮಾರ ಅವರ ಸಂಗೀತ ಸಂಯೋಜನೆ ಇದೆ

ಗಾಂಧೀ ತತ್ವ, ಮಾನವೀಯ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಆಳವಾಗಿ ಪ್ರತಿಬಿಂಬಿಸುವ ಈ ನಾಟಕವನ್ನು ಸಾಹಿತ್ಯ ಮತ್ತು ರಂಗಭೂಮಿ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಬೇಕೆಂದು ಆಯೋಜಕರು ತಿಳಿಸಿದ್ದಾರೆ.




