ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸ್ಲಂ ಜನಾಂದೋಲನದಿಂದ ಬೆಳಗಾವಿಯಲ್ಲಿ ಪ್ರತಿಭಟನಾ ಸಭೆ

Date:

ವಸತಿ ಸಚಿವರಿಗೆ ಘೇರಾವ್‌ – ಐದು ನಿರ್ಣಯಗಳಿಗೆ ಒಪ್ಪಿಗೆ

ರಾಜ್ಯ ಸರ್ಕಾರ ಸ್ಲಂ ನಿವಾಸಿಗಳ ಸಮಸ್ಯೆಗಳತ್ತ ತೋರುತ್ತಿರುವ ನಿರ್ಲಕ್ಷ್ಯವನ್ನು ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ ಹಾಗೂ ಸಾವಿತ್ರಿಬಾಯಿ ಪುಲೆ ಮಹಿಳಾ ಸಂಘಟನೆಯ ವತಿಯಿಂದ ಇಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಪ್ರತಿಭಟನಾ ಸಭೆ ನಡೆಯಿತು. ಚಳಿಗಾಲದ ವಿಧಾನಮಂಡಲ ಅಧಿವೇಶನದ ಭಾಗವಾಗಿ ಸುವರ್ಣಸೌಧದ ಎದುರು ವಸತಿ ಸಚಿವ ಜಮೀರ್‌ ಅಹಮದ್‌ ಅವರಿಗೆ ಘೇರಾವ್‌ ಹಾಕಿ ಮನವಿ ಸಲ್ಲಿಸಲಾಯಿತು.

ಸಭೆಯನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಸಂಚಾಲಕರಾದ ಎ. ನರಸಿಂಹಮೂರ್ತಿ, ನಗರ ಪ್ರದೇಶಗಳ ಸ್ಲಂಗಳಲ್ಲಿ ವಾಸಿಸುವ ಪರಿಶಿಷ್ಟ ಜಾತಿ–ಪಂಗಡ, ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ಅಲೆಮಾರಿ ಸಮುದಾಯಗಳ ಜನರು ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಸರ್ಕಾರ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿದರು. 2023ರ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳು ಇನ್ನೂ ಈಡೇರಿಲ್ಲ. ಸ್ಲಂ ನಿವಾಸಿಗಳಿಗೆ ಭೂಮಿ ಹಾಗೂ ವಸತಿ ಖಾತ್ರಿ ನೀಡದೆ ಸಾಮಾಜಿಕ ನ್ಯಾಯದಿಂದ ವಂಚಿಸಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2026–27ನೇ ಸಾಲಿನ ಬಜೆಟ್‌ನಲ್ಲಿ ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡಬೇಕು, ಒನ್‌ ಟೈಮ್‌ ಗ್ರಾಂಟ್‌ ನೀಡಿ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಹಾಗೂ ಖಾಸಗಿ ಕೊಳಚೆ ಪ್ರದೇಶಗಳ ಸ್ವಾಧೀನಕ್ಕೆ ಅನುದಾನ ನೀಡಬೇಕೆಂದು ಅವರು ಒತ್ತಾಯಿಸಿದರು.

ನಂತರ ಕಿತ್ತೂರು ವಿಭಾಗದ ಸಂಚಾಲಕರಾದ ಇಮ್ತಿಯಾಜ್‌ ಆರ್‌. ಮಾನ್ವಿ ಅವರು ಸಭೆಯ ನಿರ್ಣಯಗಳನ್ನು ಮಂಡಿಸಿದರು. 2023ರ ಪ್ರಣಾಳಿಕೆಯಂತೆ ಉಚಿತ ಭೂಮಿ ಮತ್ತು ವಸತಿ ಖಾತ್ರಿ, ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳಿಗೆ ಸಂಬಂಧಿಸಿದ ಸುತ್ತೋಲೆ ವಾಪಸ್‌, ಬಜೆಟ್‌ನಲ್ಲಿ ಸಮರ್ಪಕ ಅನುದಾನ, ನಗರ ಪ್ರದೇಶಗಳಲ್ಲಿ ಲ್ಯಾಂಡ್‌ ಬ್ಯಾಂಕ್‌ ಯೋಜನೆ ಜಾರಿ ಹಾಗೂ ವಸತಿ ಹಕ್ಕು ಜಾರಿಗೆ ತರುವಂತೆ ಐದು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಸಭೆಯಲ್ಲಿ ಸಾವಿತ್ರಿಬಾಯಿ ಪುಲೆ ಮಹಿಳಾ ಸಂಘಟನೆಯ ಚಂದ್ರಮ್ಮ, ವಿವಿಧ ಜಿಲ್ಲೆಗಳ ಸ್ಲಂ ಜನಾಂದೋಲನ ಸಂಚಾಲಕರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮದುವೆ ನಿರಾಕರಿಸಿದ ಯುವತಿಯ ಕುಟುಂಬದ ಮೇಲೆ ಹಲ್ಲೆ ಮಾಡಿದ ಯುವಕ

ಮದುವೆ ಪ್ರಸ್ತಾವನೆ ನಿರಾಕರಿಸಿದ ವಿಚಾರವಾಗಿ ಯುವಕನೊಬ್ಬ ಯುವತಿ ಹಾಗೂ ಅವರ ಕುಟುಂಬ...

ಬೆಳಗಾವಿ | ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ₹11.06 ಕೋಟಿ ಕಾಣಿಕೆ ಸಂಗ್ರಹ

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ...

ಬೆಳಗಾವಿ | ಆಲಿಕಲ್ಲು ಮಳೆ ಅಟ್ಟಹಾಸ: 39 ಕುರಿಗಳ ಸಾವು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಸುತ್ತಮುತ್ತ ಮಂಗಳವಾರ ರಾತ್ರಿ ಸುರಿದ...

ಬೆಳಗಾವಿ | 15 ದಿನಗಳ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವು: ತಂದೆಯ ಮೇಲೆ ವಿಷಪ್ರಾಶನ ಆರೋಪ

ಕೇವಲ 15 ದಿನಗಳ ಹಿಂದೆಯಷ್ಟೇ ಜನಿಸಿದ್ದ ಹೆಣ್ಣು ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ...